ವಿವೇಕಾನಂದರು ಹಿಂದೂವಾದಿಗಳು ಎಂದು ಬಿಂಬಿಸುವುದು ತಪ್ಪು
ದಾವಣಗೆರೆ, ಜನವರಿ 12: "ಸಾಮಾಜಿಕ ಜಾಲತಾಣಗಳಲ್ಲಿ ಸ್ವಾಮಿ ವಿವೇಕಾನಂದರ ಭಾವಚಿತ್ರಗಳನ್ನು ಹಾಕಿಕೊಂಡು ವಿವೇಕಾನಂದರು ಹಿಂದುತ್ವದ ಐಕಾನ್, ನಮ್ಮ ನಾಯಕರು ಎಂದು ಹೇಳಿಕೊಂಡು ಮೆರೆದಾಡಿದವರು ಇಂದು ಮೌನವಾಗಿದ್ದಾರೆ" ಎಂದು ಪ್ರಗತಿ ಪರ ಚಿಂತಕ ದಿನೇಶ್ ಅಮಿನ್ ಮಟ್ಟು ಹೇಳಿದರು.
ದಾವಣಗೆರೆ ನಗರದ ಎ. ಕಮಲಮ್ಮ ಮಹಿಳಾ ಕಾಲೇಜಿನ ಶ್ರೀಮತಿ ಪಾರ್ವತಮ್ಮ ಶಾಮನೂರು ಶಿವಶಂಕರಪ್ಪ ಸಭಾಂಗಣದಲ್ಲಿ ಎನ್ಎಸ್ಯುಐ ಆಶ್ರಯದಲ್ಲಿ ಆಯೋಜಿಸಿದ್ದ ಸ್ವಾಮಿ ವಿವೇಕಾನಂದವರ 158ನೇ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
"ಸ್ವಾಮಿ ವಿವೇಕಾನಂದ ಅವರು ಹಿಂದೂತ್ವದ ಐಕಾನ್ ಎಂದು ಹೇಳಿಕೊಂಡು ಮೆರದಾಡಿದವರು ಇಂದು ಸ್ವಾಮಿ ವಿವೇಕಾಂದರ ಜಯಂತಿಯನ್ನು ಆಚರಣೆ ಮಾಡುತ್ತಿಲ್ಲ. ಅದೇ ರೀತಿ ಕಳೆದ 8 ವರ್ಷಗಳಿಂದ ವಿಜೃಂಭಣೆಯಿಂದ ಸ್ವಾಮಿ ವಿವೇಕಾನಂದರ ಜಯಂತಿ ಆಚರಣೆ ಮಾಡುತ್ತಿರುವರು ಈಗ ಸ್ತಬ್ತವಾಗಿದ್ದಾರೆ" ಎಂದರು.

"ಅಂದು ಜಯಂತಿ ಆಚರಣೆ ಮಾಡದವರು ಇಂದು ಸ್ವಾಮಿ ವಿವೇಕಾನಂದರ ಜಯಂತಿ ಆಚರಣೆ ಮಾಡುತ್ತಿದ್ದಾರೆ. ಸ್ವಾಮಿ ವಿವೇಕಾನಂದರು ಇಡಿ ವಿಶ್ವದ ಫಿಲಾಸಫಿಗಳನ್ನುಅರಿತು ವಿಶ್ವಗುರು ಎನ್ನಿಸಿಕೊಂಡ ಮಹಾನ್ ಸನ್ಯಾಸಿ" ಎಂದು ದಿನೇಶ್ ಅಮಿನ್ ಮುಟ್ಟು ಬಣ್ಣಿಸಿದರು.
"ವಿವೇಕಾನಂದರ ಜೀವನ ಚರಿತೆ, ಅಂಬೇಡ್ಕರ್, ಮಹಾತ್ಮ ಗಾಂಧೀಜಿ ಅವರ ಚಿಂತನೆಗಳನ್ನು ಅಧ್ಯಯನ ಮಾಡಿದರೆ. ಉಜ್ವಲ ಭವಿಷ್ಯ ರೂಪಿಸಿಕೊಳ್ಳಬಹದು. ಸ್ವಾಮಿ ವಿವೇಕಾನಂದರ ಬಗ್ಗೆ ಇರುವ ಸತ್ಯಾಂಶಗಳನ್ನು ತಿಳಿಸಿಕೊಟ್ಟರೆ. ಅವರ ವಿರುದ್ಧ ಮಾತನಾಡುತ್ತಾರೆ ಎಂದು ಕೆಲ ಕಿಡಿಗೇಡಿಗಳು ಬಿಂಬಿಸುತ್ತಾರೆ" ಎಂದರು.
"ಸ್ವಾಮಿ ವಿವೇಕಾನಂದರು ಹಿಂದೂ ಧರ್ಮದ ಸುಧಾರಣೆ ಮಾಡುವಂತ ಕೆಲಸ ಮಾಡಿದ್ದಾರೆ. ಆದರೆ, ಅವರು ಯಾವುದೇ ಸಂದರ್ಭದಲ್ಲಿ ಸಹ ನಾನು ಹಿಂದೂ ಎಂದು ಹೇಳಿಕೊಂಡಿಲ್ಲ. ಕೆಲವರು ಸ್ವಾಮಿ ವಿವೇಕಾನಂದರು ಹಿಂದೂ ವಾದಿಗಳು ಎಂದು ಬಿಂಬಿಸುತ್ತಿದ್ದು, ಅದು ಸುಳ್ಳು" ಎಂದು ತಿಳಿಸಿದರು.

"ಸ್ವಾಮಿ ವಿವೇಕಾನಂದರ ತಂದೆ-ತಾಯಿಗಳಿಗೆ ಹತ್ತು ಜನ ಮಕ್ಕಳು. ಅದರಲ್ಲಿ ಆರನೇ ಮಗನೇ ಸ್ವಾಮಿ ವಿವೇಕಾನಂದರು. ಇವರು ಸಾಕಷ್ಟು ಬಡತನ, ಹಸಿವು, ಅಸಮಾನತೆಯನ್ನು ಅನುಭವಿಸಿ ಬೆಳೆದಂತಹ ಮಹಾನ್ ನಾಯಕರು" ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಬಿ. ಪಿ. ಕುಮಾರ್, ಪದವಿ ಪೂರ್ವ ಕಾಲೇಜು ವಿಭಾಗದ ಶಿವನಗೌಡ, ಕೆಪಿಸಿಸಿ ವಕ್ತಾರ ಡಿ. ಬಸವರಾಜು ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
-
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್












Click it and Unblock the Notifications