Get Updates
Get notified of breaking news, exclusive insights, and must-see stories!

ದಾವಣಗೆರೆಗೆ ಬಂದು ಕೇವಲ 5 ತಿಂಗಳಲ್ಲಿಯೇ "ರಫ್ ಅಂಡ್ ಟಫ್" ಖ್ಯಾತಿಯ SP ವರ್ಗಾವಣೆ, ಅಸಲಿ ಕಾರಣ ಏನು?

ದಾವಣಗೆರೆ, ಆಗಸ್ಟ್‌, 08: ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಅರುಣ್ ಅವರನ್ನು ವರ್ಗಾವಣೆ ಮಾಡಲಾಗಿದೆ. ನಿನ್ನೆಯಷ್ಟೇ ಎಸ್‌ಪಿ ವರ್ಗಾವಣೆ ಪ್ರಸ್ತಾಪ ಸದ್ಯಕ್ಕಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರು ಹೇಳಿದ್ದರು. ಆದರೆ ಸಚಿವರು ಹೀಗೆ ಹೇಳಿದ ಮಾರನೇ ದಿನವೇ ಟ್ರಾನ್ಸಫರ್ ಮಾಡಲಾಗಿದ್ದು, ಇದು ಸಾಕಷ್ಟು ಕುತೂಹಲಕ್ಕೂ ಕಾರಣವಾಗಿದೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಎಲ್ಲಾ ಇಲಾಖೆಗಳಲ್ಲಿಯೂ ಮೇಜರ್ ಸರ್ಜರಿ ಮಾಡಲಾಗುತ್ತಿದೆ. ಅದೇ ರೀತಿಯಲ್ಲಿ ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ ಪ್ರಕ್ರಿಯೆ ಮುಗಿದಿದೆ. ಕಳೆದ 5 ತಿಂಗಳ ಹಿಂದೆಯಷ್ಟೇ ಎಸ್‌ಪಿ ಆಗಿ ದಾವಣಗೆರೆಗೆ ಕೆ.ಅರುಣ್ ಅವರು ಬಂದಿದ್ದರು. ವಿಧಾನಸಭೆ ಚುನಾವಣೆಯ ಕಾರಣಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಸಿ.ಬಿ. ರಿಷ್ಯಂತ್ ಅವರನ್ನು ವರ್ಗಾವಣೆ ಮಾಡಲಾಗಿತ್ತು.

SP transfer in just 5 months after coming to Davanagere

ಈ ಜಾಗಕ್ಕೆ ಕೆ.ಅರುಣ್ ಅವರು ಬಂದಿದ್ದರು. ಕಲಬುರಗಿಯಲ್ಲಿಯೂ ರಫ್ ಅಂಡ್ ಟಫ್ ಖ್ಯಾತಿ ಹೊಂದಿದ್ದರು. ಈಗ ಕಲಬುರಗಿಯ ಪೊಲೀಸ್ ತರಬೇತಿ ಕೇಂದ್ರದ ಸೂಪರ್ ರಿಂಟೆಂಡೆಟ್ ಹಾಗೂ ಪ್ರಿನ್ಸಿಪಾಲ್ ಆಗಿ ನಿಯೋಜನೆ ಮಾಡಲಾಗಿದೆ. ಕಳೆದ ಕೆಲ ದಿನಗಳ ಹಿಂದೆಯಿಂದಲೂ ವರ್ಗಾವಣೆ ಆಗುತ್ತದೆ ಎಂಬ ಮಾತು ಕೇಳಿಬಂದಿತ್ತು. ಹೊನ್ನಾಳಿ ಶಾಸಕ ಶಾಂತನಗೌಡ ಅವರು ವೇದಿಕೆ ಕಾರ್ಯಕ್ರಮದಲ್ಲಿಯೇ ಎಸ್‌ಪಿ ಅವರ ವರ್ಗಾವಣೆ ಆಗಬೇಕು ಎಂದು ಮನವಿ ಮಾಡಿದ್ದರು.

ಕೆ.ಅರುಣ್ ಅವರು ಬಂದ ಮೇಲೆ ಮರಳು ಸಿಗದಂತಾಗಿದೆ. ತಾಲೂಕಿನ ಜನತೆಗೆ ಏನು ಹೇಳಬೇಕು ಎಂಬುದು ಗೊತ್ತಾಗುತ್ತಿಲ್ಲ. ಜನರ ಕಾಟ ಜಾಸ್ತಿಯಾಗಿದೆ. ಈ ಕಾರಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರಿಗೆ ಕೆ.ಅರುಣ್ ಅವರನ್ನು ವರ್ಗಾವಣೆ ಮಾಡಿ ಎಂದು ಮನವಿ ಮಾಡಿದ್ದರು.

ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜ್ ಅವರು ಚನ್ನಗಿರಿ ಪೊಲೀಸ್ ಠಾಣೆಯ ಎದುರು ಪ್ರತಿಭಟಿಸಿದ್ದರು. ಸಿಪಿಐ, ಸರ್ಕಲ್ ಇನ್ಸ್‌ಪೆಕ್ಟರ್ ವಿರುದ್ಧ ಮುನಿಸಿಕೊಂಡಿದ್ದರು. ಅಷ್ಟೇ ಅಲ್ಲದೆ ಸಿಪಿಐ ಹಾಗೂ ಪಿಎಸ್‌ಐ ವರ್ಗಾವಣೆ ಆಗಲೇಬೇಕು ಎಂಬ ಪಟ್ಟು ಹಿಡಿದಿದ್ದರು. ಕಾಂಗ್ರೆಸ್ ಕಾರ್ಯಕರ್ತರಿಗೆ ಕಿರುಕುಳ ಕೊಡಲಾಗುತ್ತಿದ್ದು, ತಕ್ಷಣವೇ ರಜೆ ಮೇಲೆ ತೆರಳುವಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದರು. ಸ್ಥಳಕ್ಕೆ ಬಂದಿದ್ದ ಎಸ್‌ಪಿ ಅವರು ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳುತ್ತೇವೆ ಎಂದಿದ್ದರು.

ದಾವಣಗೆರೆಯಲ್ಲಿ ಶಕ್ತಿ ಯೋಜನೆಗೆ ಚಾಲನೆ ಕೊಡಲು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರು ವೇದಿಕೆಯಲ್ಲಿ ಮಾತನಾಡುವಾಗ ಜಿಲ್ಲೆಯ ಹಿರಿಯ ಅಧಿಕಾರಿಗಳು ಯಾಕೆ ಬಂದಿಲ್ಲ. ರಜೆ ಇದೆ ಅಂತಾ ಅಧಿಕಾರಿಗಳು ಫ್ಯಾಮಿಲಿ ಟೂರ್ ಹೋಗಿದ್ದಾರೆಯೇ? ನಾವು ಅಧಿಕಾರಕ್ಕೆ ಬಂದಿದ್ದೇವೆ. ಯಾಕೆ ಬಂದಿಲ್ಲ ಎಂಬುದು ಗೊತ್ತಾಗುತ್ತಿಲ್ಲ. ಮುಂದೆ ನೋಡೋಣ ಎಂದು ಹೇಳಿದ್ದರು. ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಅರುಣ್ ಅವರು ಕಾರ್ಯಕ್ರಮಕ್ಕೆ ಗೈರಾಗಿದ್ದರು.

ಸಚಿವರ ಕೆಂಗಣ್ಣಿಗೆ ಗುರಿಯಾಗಿದ್ದ ಡಿಸಿ ಹಾಗೂ ಎಸ್‌ಪಿ ಅವರು ಕೆಲಸ ನಿರ್ವಹಿಸುತ್ತಿದ್ದರು. ಆದರೆ ಕಳೆದ ಕೆಲ ದಿನಗಳ ಹಿಂದೆಯಷ್ಟೇ ಜಿಲ್ಲಾಧಿಕಾರಿಯಾಗಿದ್ದ ಶಿವಾನಂದ ಕಾಪಶಿ ವರ್ಗಾವಣೆ ಆಗಿದ್ದರು. ಈ ಜಾಗಕ್ಕೆ ವೆಂಕಟೇಶ್ ಅವರು ಬಂದರು.

ಅಲ್ಲದೆ ಭಾನುವಾರ ಹದಡಿ ರಸ್ತೆಯಲ್ಲಿನ ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ ಸಭಾಭವನದಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡುವ ಕಾರ್ಯಕ್ರಮಕ್ಕೂ ಎಸ್‌ಪಿ ಕೆ. ಅರುಣ್ ಅವರು ಬಂದಿರಲಿಲ್ಲ. ಡಿಸಿ, ಸಿಇಒ ಸೇರಿದಂತೆ ಬೇರೆ ಬೇರೆ ಇಲಾಖೆಯ ಅಧಿಕಾರಿಗಳು ಬಂದಿದ್ದರು. ಪೊಲೀಸ್ ಇಲಾಖೆಯ ಪರ ಎಎಸ್‌ಪಿ ಅವರು ಕಾರ್ಯಕ್ರಮಕ್ಕೆ ಹಾಜರಾಗಿದ್ದರು.

ಕಾರ್ಯಕ್ರಮ ಮುಗಿದ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ್ದ ಸಚಿವ ಮಲ್ಲಿಕಾರ್ಜುನ್ ಅವರು ಎಸ್‌ಪಿ ವರ್ಗಾವಣೆ ಸದ್ಯಕ್ಕೆ ಇಲ್ಲ. ಉತ್ತಮ ಕೆಲಸ ಮಾಡುತ್ತಿದ್ದಾರೆ. ಅಂತಹ ಅಧಿಕಾರಿಗಳು ಬೇಕು. ಒಳ್ಳೆಯ ರಾಜಕಾರಣಿಗಳಿಗೆ ಒಳ್ಳೆಯ ಅಧಿಕಾರಿಗಳು ಬೇಕು ಎಂದು ಮಲ್ಲಿಕಾರ್ಜುನ್ ಅವರೇ ಹೇಳಿದ್ದರು. ಆದರೂ ವರ್ಗಾವಣೆ ಆಗಿರುವುದು ಕುತೂಹಲ ಕೆರಳಿಸಿದೆ.

ಮರಳು ಮಾಫಿಯಾಕ್ಕೆ ಬ್ರೇಕ್?

ಇನ್ನು ಅರುಣ್ ಅವರು ಬಂದ ಬಳಿಕ ದಾವಣಗೆರೆ ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆಗೆ ಬ್ರೇಕ್ ಹಾಕಿ, ಮರಳು ಲೂಟಿಕೋರರಿಗೆ ಬಿಸಿ ಮುಟ್ಟಿಸಿದ್ದರು. ಈ ಮೂಲಕ ಅಕ್ರಮ ನಡೆಯದಂತೆ ತಡೆದಿದ್ದರು. ಹೊನ್ನಾಳಿ, ಹರಿಹರದಲ್ಲಿ ಮರಳು ಅಕ್ರಮಕೋರರು ತಣ್ಣಗಾಗಿದ್ದರು.
ಅಷ್ಟರ ಮಟ್ಟಿಗೆ ದಿಟ್ಟ ಕ್ರಮ ಕೈಗೊಂಡಿದ್ದರು.

ದಾವಣಗೆರೆ ಜಿಲ್ಲೆಯಲ್ಲಿ ಮಟ್ಕಾ, ಜೂಜು, ಕಳ್ಳತನ, ಲೂಟಿ, ದರೋಡೆ ಸೇರಿದಂತೆ ಯಾವುದೇ ಅಪರಾಧ ಪ್ರಕರಣಗಳು ನಡೆದರೂ ಆರೋಪಿಗಳ ಬಂಧನಕ್ಕೆ ಬಲೆ ಬೀಸುತ್ತಿದ್ದರು. ಆದಷ್ಟು ಬೇಗ ಆರೋಪಿಗಳ ಬಂಧನವೂ ಆಗುತಿತ್ತು.

ಎಲ್ಲಾ ಅಕ್ರಮಗಳಿಗೆ ಹೆಚ್ಚು ಕಡಿಮೆ ಕಡಿವಾಣ ಹಾಕಿದ್ದ ಕೆ.ಅರುಣ್ ಅವರು. ಇವರು ಡೈನಾಮಿಕ್ ಎಸ್‌ಪಿ ಅಂತಾನೇ ಎಲ್ಲರಿಂದಲೂ ಕರೆಸಿಕೊಳ್ಳುತ್ತಿದ್ದರು. ಅವರ ಕಾರ್ಯವೈಖರಿಗೆ ಪ್ರಾಮಾಣಿಕ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದರು. ಆದರೆ ಕೆ.ಅರುಣ್ ಅವರ ವರ್ಗಾವಣೆ ಹಿಂದೆ ಕಾರಣಗಳು ಸಾಕಷ್ಟಿವೆ ಎನ್ನಲಾಗುತ್ತಿದೆ.

ಒಟ್ಟಿನಲ್ಲಿ ಕೇವಲ 5 ತಿಂಗಳು ಮಾತ್ರ ದಾವಣಗೆರೆಯಲ್ಲಿ ಕೆಲಸ ಮಾಡಿದರೂ ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತಿದ್ದುದು ಎಲ್ಲರ ಮೆಚ್ಚುಗೆಗೆ ಪಾತ್ರ ಆಗಿತ್ತು. ರೌಡಿ ಚಟುವಟಿಕೆಗಳಿಗೂ ಬ್ರೇಕ್ ಬಿದ್ದಿತ್ತು. ಆದರೆ ಇದೀಗ ಒಳ್ಳೆಯ ಅಧಿಕಾರಿ ವರ್ಗಾವಣೆ ಆಗಿ ಹೋದರಲ್ಲಾ ಎಂಬ ಕೊರಗು ಮಾತ್ರ ದಾವಣಗೆರೆ ಜಿಲ್ಲೆಯ ಜನರದ್ದಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+