ದಾವಣಗೆರೆಯ ಸುಂದರ ಗ್ಲಾಸ್ ಹೌಸ್ ವಿಶೇಷತೆಗಳು
ದಾವಣಗೆರೆ, ಮಾರ್ಚ್ 13 : ಭಾರತದ ಅತ್ಯಂತ ದೊಡ್ಡ ಗಾಜಿನ ಅರಮನೆ ದಾವಣಗೆರೆಯಲ್ಲಿ ನಿರ್ಮಾಣವಾಗಿದೆ. ಸ್ವರ್ಗವನ್ನೇ ಧರೆಗಿಳಿಸುವ ಗಾಜಿನ ಅರಮನೆಯನ್ನು ಸುಮಾರು 30 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ.
ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ದಾವಣಗೆರೆ ನಗರದ ರಾಷ್ಟ್ರೀಯ ಹೆದ್ದಾರಿ ಪಕ್ಕದ ಕುಂದುವಾಡ ಕೆರೆ ಬಳಿ 108 ಮೀಟರ್ ಉದ್ದ, 68 ಮೀಟರ್ ಅಗಲ, 18 ಮೀಟರ್ ಎತ್ತರದಲ್ಲಿ ಗಾಜಿನ ಅರಮನೆ ನಿರ್ಮಾಣವಾಗಿದೆ. 2014-15 ನೇ ಸಾಲಿನಲ್ಲಿ ಶಾಮನೂರು ಶಿವಶಂಕರಪ್ಪ ಸಚಿವರಾಗಿದ್ದಾಗ 5 ಕೋಟಿ ವೆಚ್ಚದಲ್ಲಿ ಆರಂಭವಾದ ಕಾಮಗಾರಿ ಈಗ ಅಂದಾಜು 30 ಕೋಟಿ ರೂಪಾಯಿಗೆ ಬಂದು ತಲುಪಿದೆ.
ಇದು ಬೆಂಗಳೂರಿನ ಲಾಲ್ ಬಾಗ್ನಲ್ಲಿರುವ ಗ್ಲಾಸ್ ಹೌಸ್ಗಿಂತ ದೊಡ್ಡದಾಗಿದೆ. ಅಲ್ಲದೆ ಇಡೀ ದೇಶದಲ್ಲೇ ಇದು ದೊಡ್ಡ ಅರಮನೆಯಾಗಿದೆ. ಇಂತಹ ಸುಂದರ ಸ್ಥಳವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಲೋಕಾರ್ಪಣೆ ಮಾಡಿದ್ದಾರೆ.

ಅರಮನೆಯಲ್ಲಿ ಏನಿದೆ? : ಗಾಜಿನ ಮನೆಗೆ 13.35 ಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ. 1.50 ಕೋಟಿ ವೆಚ್ಚದಲ್ಲಿ ಗ್ರಾನೈಟ್, 1.99 ಕೋಟಿ ವೆಚ್ಚದಲ್ಲಿ ಕಾಂಪೌಂಡ್, 1.08 ಕೋಟಿ ವೆಚ್ಚದಲ್ಲಿ ತೋಟಗಾರಿಕೆ ಮಾಹಿತಿ ಕೇಂದ್ರ, ರಸ್ತೆ ನಿರ್ಮಾಣ, ಸುತ್ತಮುತ್ತ ವಿದೇಶಿ ಗಿಡಗಳನ್ನು ಬೆಳೆಸುವ ಜೊತೆ ಸುಂದರವಾದ ಉದ್ಯಾನವನ ನಿರ್ಮಾಣದ ಗುರಿ ಹೊಂದಲಾಗಿದೆ.

ವಿಸ್ತೀರ್ಣ ಮತ್ತು ಸೌಂದರ್ಯದಲ್ಲಿ ಬೆಂಗಳೂರಿನ ಲಾಲ್ ಬಾಗ್ ಗಾಜಿನ ಅರಮನೆಯನ್ನು ಮೀರಿಸುತ್ತದೆ. ದಾವಣಗೆರೆ ಸುತ್ತಮುತ್ತ ಪ್ರವಾಸಿಗರಿಗೆ ಹೇಳಿ ಮಾಡಿಸಿದಂತಹ ಯಾವುದೇ ಪ್ರವಾಸಿ ತಾಣ ಇರಲಿಲ್ಲ. ಈಗ ಇಂತಹ ಸುಂದರ ಗಾಜಿನ ಅರಮನೆ ನಿರ್ಮಾಣವಾಗಿದೆ.

ಸ್ಮಾರ್ಟ್ ಸಿಟಿ ಯೋಜನೆಗೆ ಆಯ್ಕೆಯಾದ ದಾವಣಗೆರೆಗೆ ಈ ಗಾಜಿನ ಅರಮನೆ ಮತ್ತೊಂದು ಗರಿಯನ್ನು ತಂದುಕೊಡಲಿದೆ. ಈ ಸುಂದರವಾದ ಅರಮನೆ ದೇಶ-ವಿದೇಶದ ಪ್ರವಾಸಿಗರನ್ನು ದಾವಣಗೆರೆಯತ್ತ ಸೆಳೆಯುವ ಜೊತೆಗೆ ಜಿಲ್ಲೆಯ ಹಿರಿಮೆಯನ್ನೂ ಹೆಚ್ಚಿಸಲಿದೆ.
-
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ?












Click it and Unblock the Notifications