ಫೆ.7ರಂದು ಬೆಂಗಳೂರು ತಲುಪಲಿದೆ ಕುರುಬರ ಬೃಹತ್ ಪಾದಯಾತ್ರೆ
ದಾವಣಗೆರೆ, ಜನವರಿ 20: ಕಾಗಿನೆಲೆ ಜಗದ್ಗುರು ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ನೇತೃತ್ವದಲ್ಲಿ ನಡೆಯುತ್ತಿರುವ ಕುರುಬರ ಎಸ್ಟಿ ಮೀಸಲಾತಿ ಪಾದಯಾತ್ರೆ ದಾವಣಗೆರೆ ನಗರ ಪ್ರವೇಶಿಸಿದೆ. ಫೆಬ್ರವರಿ 7ರಂದು ಪಾದಯಾತ್ರೆ ಬೆಂಗಳೂರು ನಗರವನ್ನು ತಲುಪಲಿದೆ.
ಪಾದಯಾತ್ರೆ ದಾವಣಗೆರೆ ತಲುಪುತ್ತಿದ್ದಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ. ಎಸ್. ಈಶ್ವರಪ್ಪ ಪಾದಯಾತ್ರೆಯನ್ನು ಸ್ವಾಗತಿಸಿದರು. ದೊಡ್ಡಬಾತಿ ಕೆರೆ ಬಳಿ ಶ್ರೀಗಳನ್ನು ಸ್ವಾಗತಿಸಿ ಕಾರ್ಯಕ್ರಮ ನಡೆಯುವ ಸ್ಥಳದ ತನಕ ಸಚಿವರು ಪಾದಯಾತ್ರೆಯಲ್ಲಿ ಪಾಲ್ಗೊಂಡರು.
ದಾವಣಗೆರೆ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ನೇತೃತ್ವದ ಪಾದಯಾತ್ರಿಗಳನ್ನು ಅದ್ಧೂರಿಯಾಗಿ ಸಮಾಜದ ಜನರು ಸ್ವಾಗತಿಸಿದರು. ಆನೆಯೂ ಶ್ರೀಗಳನ್ನು ಸ್ವಾಗತಿಸಿತಲ್ಲದೇ ಭಕ್ತರು, ಸಮಾಜದ ಜನರು ಪುಷ್ಪವೃಷ್ಟಿ ಸುರಿಸಿದರು.
ದಾರಿಯೂದ್ದಕ್ಕೂ ರಸ್ತೆಯ ಇಕ್ಕೆಲೆಗಳಲ್ಲಿ ಜನರು ನಿಂತು ಶ್ರೀಗಳನ್ನು ಸ್ವಾಗತಿಸುತ್ತಿದ್ದರು. ಇನ್ನೂ ಪಾದಯಾತ್ರಿಗಳು ಕುರುಬರು ಬಡುಕಟ್ಟು ಜನಾಂಗದವರು, ಎಸ್ಟಿ ಮೀಸಲಾತಿ ನಮ್ಮ ಹಕ್ಕು ಎಂಬ ಘೋಷಣೆ ಹಾಕುತ್ತ ಸಾಗಿದರು.

ಪಾದಯಾತ್ರೆಗೆ ಸ್ವಾಗತ
ಜಿಎಂಐಟಿ ಬಳಿ ಅಹಿಂದ ಜನಶಕ್ತಿ ವೇದಿಕೆ ಕಾರ್ಯಕರ್ತರು ಪಾದಯಾತ್ರಿಗಳಿಗೆ ಮಜ್ಜಿಗೆ ಮತ್ತು ನೀರು ವಿತರಿಸಿದರು. ಸಂಸದ ಜಿ. ಎಂ. ಸಿದ್ದೇಶ್ವರ ಅವರು ಜಿಎಂಐಟಿ ಬಳಿ ಶ್ರೀಗಳನ್ನು ಸ್ವಾಗತಿಸಿದರು. ಪಾಲಿಕೆ ಉಪಮೇಯರ್ ಸೌಮ್ಯ ನರೇಂದ್ರ ಕುಮಾರ್, ಪಾಲಿಕೆ ಸದಸ್ಯರಾದ ಎಸ್. ಟಿ. ವೀರೇಶ್, ಪ್ರಸನ್ನ ಕುಮಾರ್, ಬಿಜೆಪಿ ಜಿಲ್ಲಾಧ್ಯಕ್ಷ ವೀರೇಶ್ ಹನಗವಾಡಿ ಜೊತೆಗಿದ್ದರು.

ಸೆಲ್ಫೀ ಜೋರಾಗಿತ್ತು
ಪಾದಯಾತ್ರೆಯಲ್ಲಿ ಬೆಳ್ಳಿರಥ ಸಾರೋಟ ಮುಂದಿದ್ದು, ಹಿಂದೆ ಶ್ರೀಗಳು ಪಾದಯಾತ್ರಿಗಳಿದ್ದರು. ಡೊಳ್ಳು ಕುಣಿತ, ಗೋರಪ್ಪಗಳ ಗುಂಪು ಕಂಡು ಬಂದಿತು. ಪಾದಯಾತ್ರಿಗಳು ಹಳದಿ ಬಣ್ಣದ ಪೇಟೆ, ಕಂಬಳಿ ಹೆಗಲ ಮೇಲೆ ಹೊತ್ತು ಸಾಗಿದರು.
ಶ್ರೀಗಳು ನಗರ ಪ್ರವೇಶ ಮಾಡುತ್ತಿದ್ದಂತೆ ಯುವಕರು ಶ್ರೀಗಳ ಬಳಿ ತೆರಳಿ ಸೆಲ್ಪಿ ಪಡೆಯುತ್ತಿದ್ದರು. ರಸ್ತೆಯ ಒಂದು ಭಾಗದಲ್ಲಿ ಸಾಗುತ್ತಿದ್ದ ಪಾದಯಾತ್ರೆಯಲ್ಲಿ ವೃದ್ದರೂ ಊರುಗೋಲು ಹಿಡಿದು ಸಾಗುತ್ತಿದ್ದರೇ ಯುವಕರು ಘೋಷಣೆ ಕೂಗುತ್ತಿದ್ದರು. ಮಹಿಳೆಯರು ಪಾದಯಾತ್ರೆಯಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು.

ಫೆಬ್ರವರಿ 7ಕ್ಕೆ ಬೆಂಗಳೂರು ತಲುಪಲಿದೆ
ಎಸ್ಟಿ ಮೀಸಲಾತಿ ಪಟ್ಟಿಯಲ್ಲಿ ಕುರುಬ ಸಮುದಾಯವನ್ನು ಸೇರಿಸಬೇಕೆಂಬ ಬೇಡಿಕೆ ಇಟ್ಟುಕೊಂಡು ಜನವರಿ 15ರಂದು ಆರಂಭ ಮಾಡಿರುವ ಈ ಪಾದಯಾತ್ರೆ ದಾವಣಗೆರೆ ಜಿಲ್ಲೆಗೆ ತಲುಪಿದ್ದು, ಚಿತ್ರದುರ್ಗದ ಮೂಲಕ ಸಾಗಿ ಫೆಬ್ರವರಿ 7ರಂದು ಬೆಂಗಳೂರಿಗೆ ತಲುಪಲಿದೆ.
Recommended Video

ಸರ್ಕಾರಕ್ಕೆ ಮುಟ್ಟುವುದೇ ಕೂಗು
ಕಾಗಿನೆಲೆ ಪೀಠದ ನಿರಂಜನಾನಂದಪುರಿ ಸ್ವಾಮೀಜಿ ನೇತೃತ್ವದಲ್ಲಿ ಕಾಗಿನೆಲೆಯಿಂದ ಬೆಂಗಳೂರಿನ ತನಕ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಎಸ್ಟಿ ಮೀಸಲಾತಿಗಾಗಿ ಪಟ್ಟು ಹಿಡಿದಿರುವ ಕುರುಬ ಸಮುದಾಯದ ಮೀಸಲಾತಿ ಹೋರಾಟ ಸರ್ಕಾರವನ್ನು ತಲುಪಲಿದೆಯೇ? ಕಾದು ನೋಡಬೇಕು.
-
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು












Click it and Unblock the Notifications