ಫೆ.7ರಂದು ಬೆಂಗಳೂರು ತಲುಪಲಿದೆ ಕುರುಬರ ಬೃಹತ್ ಪಾದಯಾತ್ರೆ
ದಾವಣಗೆರೆ, ಜನವರಿ 20: ಕಾಗಿನೆಲೆ ಜಗದ್ಗುರು ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ನೇತೃತ್ವದಲ್ಲಿ ನಡೆಯುತ್ತಿರುವ ಕುರುಬರ ಎಸ್ಟಿ ಮೀಸಲಾತಿ ಪಾದಯಾತ್ರೆ ದಾವಣಗೆರೆ ನಗರ ಪ್ರವೇಶಿಸಿದೆ. ಫೆಬ್ರವರಿ 7ರಂದು ಪಾದಯಾತ್ರೆ ಬೆಂಗಳೂರು ನಗರವನ್ನು ತಲುಪಲಿದೆ.
ಪಾದಯಾತ್ರೆ ದಾವಣಗೆರೆ ತಲುಪುತ್ತಿದ್ದಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ. ಎಸ್. ಈಶ್ವರಪ್ಪ ಪಾದಯಾತ್ರೆಯನ್ನು ಸ್ವಾಗತಿಸಿದರು. ದೊಡ್ಡಬಾತಿ ಕೆರೆ ಬಳಿ ಶ್ರೀಗಳನ್ನು ಸ್ವಾಗತಿಸಿ ಕಾರ್ಯಕ್ರಮ ನಡೆಯುವ ಸ್ಥಳದ ತನಕ ಸಚಿವರು ಪಾದಯಾತ್ರೆಯಲ್ಲಿ ಪಾಲ್ಗೊಂಡರು.
ದಾವಣಗೆರೆ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ನೇತೃತ್ವದ ಪಾದಯಾತ್ರಿಗಳನ್ನು ಅದ್ಧೂರಿಯಾಗಿ ಸಮಾಜದ ಜನರು ಸ್ವಾಗತಿಸಿದರು. ಆನೆಯೂ ಶ್ರೀಗಳನ್ನು ಸ್ವಾಗತಿಸಿತಲ್ಲದೇ ಭಕ್ತರು, ಸಮಾಜದ ಜನರು ಪುಷ್ಪವೃಷ್ಟಿ ಸುರಿಸಿದರು.
ದಾರಿಯೂದ್ದಕ್ಕೂ ರಸ್ತೆಯ ಇಕ್ಕೆಲೆಗಳಲ್ಲಿ ಜನರು ನಿಂತು ಶ್ರೀಗಳನ್ನು ಸ್ವಾಗತಿಸುತ್ತಿದ್ದರು. ಇನ್ನೂ ಪಾದಯಾತ್ರಿಗಳು ಕುರುಬರು ಬಡುಕಟ್ಟು ಜನಾಂಗದವರು, ಎಸ್ಟಿ ಮೀಸಲಾತಿ ನಮ್ಮ ಹಕ್ಕು ಎಂಬ ಘೋಷಣೆ ಹಾಕುತ್ತ ಸಾಗಿದರು.

ಪಾದಯಾತ್ರೆಗೆ ಸ್ವಾಗತ
ಜಿಎಂಐಟಿ ಬಳಿ ಅಹಿಂದ ಜನಶಕ್ತಿ ವೇದಿಕೆ ಕಾರ್ಯಕರ್ತರು ಪಾದಯಾತ್ರಿಗಳಿಗೆ ಮಜ್ಜಿಗೆ ಮತ್ತು ನೀರು ವಿತರಿಸಿದರು. ಸಂಸದ ಜಿ. ಎಂ. ಸಿದ್ದೇಶ್ವರ ಅವರು ಜಿಎಂಐಟಿ ಬಳಿ ಶ್ರೀಗಳನ್ನು ಸ್ವಾಗತಿಸಿದರು. ಪಾಲಿಕೆ ಉಪಮೇಯರ್ ಸೌಮ್ಯ ನರೇಂದ್ರ ಕುಮಾರ್, ಪಾಲಿಕೆ ಸದಸ್ಯರಾದ ಎಸ್. ಟಿ. ವೀರೇಶ್, ಪ್ರಸನ್ನ ಕುಮಾರ್, ಬಿಜೆಪಿ ಜಿಲ್ಲಾಧ್ಯಕ್ಷ ವೀರೇಶ್ ಹನಗವಾಡಿ ಜೊತೆಗಿದ್ದರು.

ಸೆಲ್ಫೀ ಜೋರಾಗಿತ್ತು
ಪಾದಯಾತ್ರೆಯಲ್ಲಿ ಬೆಳ್ಳಿರಥ ಸಾರೋಟ ಮುಂದಿದ್ದು, ಹಿಂದೆ ಶ್ರೀಗಳು ಪಾದಯಾತ್ರಿಗಳಿದ್ದರು. ಡೊಳ್ಳು ಕುಣಿತ, ಗೋರಪ್ಪಗಳ ಗುಂಪು ಕಂಡು ಬಂದಿತು. ಪಾದಯಾತ್ರಿಗಳು ಹಳದಿ ಬಣ್ಣದ ಪೇಟೆ, ಕಂಬಳಿ ಹೆಗಲ ಮೇಲೆ ಹೊತ್ತು ಸಾಗಿದರು.
ಶ್ರೀಗಳು ನಗರ ಪ್ರವೇಶ ಮಾಡುತ್ತಿದ್ದಂತೆ ಯುವಕರು ಶ್ರೀಗಳ ಬಳಿ ತೆರಳಿ ಸೆಲ್ಪಿ ಪಡೆಯುತ್ತಿದ್ದರು. ರಸ್ತೆಯ ಒಂದು ಭಾಗದಲ್ಲಿ ಸಾಗುತ್ತಿದ್ದ ಪಾದಯಾತ್ರೆಯಲ್ಲಿ ವೃದ್ದರೂ ಊರುಗೋಲು ಹಿಡಿದು ಸಾಗುತ್ತಿದ್ದರೇ ಯುವಕರು ಘೋಷಣೆ ಕೂಗುತ್ತಿದ್ದರು. ಮಹಿಳೆಯರು ಪಾದಯಾತ್ರೆಯಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು.

ಫೆಬ್ರವರಿ 7ಕ್ಕೆ ಬೆಂಗಳೂರು ತಲುಪಲಿದೆ
ಎಸ್ಟಿ ಮೀಸಲಾತಿ ಪಟ್ಟಿಯಲ್ಲಿ ಕುರುಬ ಸಮುದಾಯವನ್ನು ಸೇರಿಸಬೇಕೆಂಬ ಬೇಡಿಕೆ ಇಟ್ಟುಕೊಂಡು ಜನವರಿ 15ರಂದು ಆರಂಭ ಮಾಡಿರುವ ಈ ಪಾದಯಾತ್ರೆ ದಾವಣಗೆರೆ ಜಿಲ್ಲೆಗೆ ತಲುಪಿದ್ದು, ಚಿತ್ರದುರ್ಗದ ಮೂಲಕ ಸಾಗಿ ಫೆಬ್ರವರಿ 7ರಂದು ಬೆಂಗಳೂರಿಗೆ ತಲುಪಲಿದೆ.
Recommended Video

ಸರ್ಕಾರಕ್ಕೆ ಮುಟ್ಟುವುದೇ ಕೂಗು
ಕಾಗಿನೆಲೆ ಪೀಠದ ನಿರಂಜನಾನಂದಪುರಿ ಸ್ವಾಮೀಜಿ ನೇತೃತ್ವದಲ್ಲಿ ಕಾಗಿನೆಲೆಯಿಂದ ಬೆಂಗಳೂರಿನ ತನಕ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಎಸ್ಟಿ ಮೀಸಲಾತಿಗಾಗಿ ಪಟ್ಟು ಹಿಡಿದಿರುವ ಕುರುಬ ಸಮುದಾಯದ ಮೀಸಲಾತಿ ಹೋರಾಟ ಸರ್ಕಾರವನ್ನು ತಲುಪಲಿದೆಯೇ? ಕಾದು ನೋಡಬೇಕು.
-
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
By Election: ಒಬ್ಬರಿಂದ ಪಕ್ಷ ಗೆಲ್ಲಲ್ಲ, ಇದು ಕಾಂಗ್ರೆಸ್ ಸಿದ್ಧಾಂತಕ್ಕೆ ಸಿಗುವ ಜಯ: ಸಲೀಂ ಅಹ್ಮದ್ ಟಾಂಗ್ ಕೊಟ್ಟಿದ್ಯಾರಿಗೆ? -
Water4Life: ಅತ್ಯಮೂಲ್ಯ ಜಲಮೂಲಗಳ ಸಂರಕ್ಷಣೆಗೆ ರಿಲಯನ್ಸ್ ಫೌಂಡೇಷನ್ನಿಂದ ಜನ ಚಳವಳಿ, ಡಿಟೇಲ್ಸ್ ಇಲ್ಲಿದೆ -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ











Click it and Unblock the Notifications