Stories Of Strength: ದಾವಣಗೆರೆಯಲ್ಲಿ ಕೋವಿಡ್ ಗೆದ್ದ 16 ನವಜಾತ ಶಿಶುಗಳು
ದಾವಣಗೆರೆ, ಜೂನ್ 02; ದಾವಣಗೆರೆ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತ ಗರ್ಭಿಣಿಯರು, ಬಾಣಂತಿಯರು ಮತ್ತು ಹಸುಗೂಸುಗಳು ಗುಣಮುಖರಾಗುವ ಮೂಲಕ ಕೊರೊನಾವನ್ನು ಗೆದ್ದಿದ್ದಾರೆ.
ಚಿಗಟೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿತ ಗರ್ಭಿಣಿಯರ ಚಿಕಿತ್ಸೆಗಾಗಿಯೇ ಪ್ರತ್ಯೇಕ ಐಸೋಲೇಷನ್ ವಾರ್ಡ್ ಪ್ರಾರಂಭಿಸಲಾಗಿದೆ. ಇಲ್ಲಿಯೂ ಕೂಡ ಬೆಡ್ ನಡುವೆ ಸಾಮಾಜಿಕ ಅಂತರ ಕಾಯ್ದುಕೊಂಡು, ವಿಶೇಷವಾಗಿ ಕೋವಿಡ್ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಸೋಂಕಿತ ಗರ್ಭಿಣಿಯರಲ್ಲಿ ಮಾನಸಿಕ ಸ್ಥೈರ್ಯ ತುಂಬುವ ಹಾಗೂ ಉತ್ತಮ ಚಿಕಿತ್ಸೆ ನೀಡುವುದರ ಜೊತೆಗೆ ಸುರಕ್ಷಿತ ಹೆರಿಗೆಯನ್ನೂ ಇಲ್ಲಿನ ವೈದ್ಯರು ಕೈಗೊಂಡು ಪ್ರಶಂಸೆಗೆ ಪಾತ್ರರಾಗಿದ್ದಾರೆ.
ಕೊರೊನಾ 3ನೇ ಅಲೆ ಮಕ್ಕಳಿಗೆ ತೀವ್ರ ಸಂಕಷ್ಟ ತರುವ ಸಾಧ್ಯತೆ ಇದೆ ಎನ್ನುವಂತಹ ಅಭಿಪ್ರಾಯವನ್ನು ತಜ್ಞರು ವ್ಯಕ್ತಪಡಿಸಿರುವ ಸಂದರ್ಭದಲ್ಲಿಯೇ, ಕೊರೊನಾ ಸೋಂಕಿತ ಗರ್ಭಿಣಿಯರಿಗೆ ಸುರಕ್ಷಿತ ಹೆರಿಗೆ ಮಾಡಿಸಿ, ಬಾಣಂತಿಯರು ಹಾಗೂ ಹಸುಗೂಸುಗಳನ್ನು ಕೊರೊನಾ ಸೋಂಕಿನಿಂದ ಗುಣಮುಖರಾಗಿರುವುದು, ಆತಂಕದ ನಡುವೆಯೂ ಒಳ್ಳೆಯ ಸುದ್ದಿ.

ಸೋಂಕು ಗೆದ್ದ 142 ಬಾಣಂತಿಯರು
ಕೋವಿಡ್ನ ಎರಡನೇ ಅಲೆ ಪ್ರಾರಂಭವಾದ ಏಪ್ರಿಲ್ನಿಂದ ಇಲ್ಲಿಯವರೆಗೆ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತ ಒಟ್ಟು 124 ಗರ್ಭಿಣಿಯರಿಗೆ ದಾವಣಗೆರೆಯ ಚಿಗಟೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಸುರಕ್ಷಿತವಾಗಿ ಹೆರಿಗೆ ಮಾಡಿಸಲಾಗಿದೆ.
ಈ ಪೈಕಿ 70 ಸೋಂಕಿತ ಗರ್ಭಿಣಿಯರಿಗೆ ನಾರ್ಮಲ್ ಹೆರಿಗೆಯಾಗಿದ್ದರೆ, 54 ಸಿಸೇರಿಯನ್ ಹೆರಿಗೆಗಳಾಗಿವೆ. 18 ಹಸುಗೂಸುಗಳಿಗೆ ಸೋಂಕು ತಗುಲಿದ್ದು, ಈ ಪೈಕಿ 16 ಶಿಶುಗಳು ಕೊರೊನಾ ಸೋಂಕಿನಿಂದ ಗುಣಮುಖವಾಗಿವೆ. ತೀವ್ರ ಕ್ಲಿಷ್ಟಕರ ಪರಿಸ್ಥಿತಿಯ ಕಾರಣದಿಂದ 2 ಶಿಶುಗಳು ಮಾತ್ರ ಸೋಂಕು ಗೆಲ್ಲಲಾರದೆ ಸಾವಿಗೆ ಶರಣಾಗಿವೆ.

ಖಾಸಗಿ ಆಸ್ಪತ್ರೆಗಳಲ್ಲೂ ಸುರಕ್ಷಿತ ಹೆರಿಗೆ
ದಾವಣಗೆರೆಯ ಸರ್ಕಾರಿ ಆಸ್ಪತ್ರೆ ಮಾತ್ರವಲ್ಲ ಜಿಲ್ಲೆಯ ಖಾಸಗಿ ಆಸ್ಪತ್ರೆಗಳಲ್ಲಿಯೂ ಒಟ್ಟು 18 ಸೋಂಕಿತ ಗರ್ಭಿಣಿಯರಿಗೆ ಸುರಕ್ಷಿತ ಹೆರಿಗೆಯಾಗಿದ್ದು, ಈ ಪೈಕಿ 7 ಸಹಜ ಹೆರಿಗೆ ಹಾಗೂ 11 ಸಿಸೇರಿಯನ್ ಹೆರಿಗೆ ಮಾಡಿಸಲಾಗಿದೆ.

ವೈದ್ಯರು ಹೇಳುವುದೇನು?
"ಜಿಲ್ಲಾ ಆಸ್ಪತ್ರೆಯಲ್ಲಿನ ವೈದ್ಯರು ಹಾಗೂ ಶುಶ್ರೂಷಕರು ಸೋಂಕಿತ ಗರ್ಭಿಣಿಯರು, ಬಾಣಂತಿಯರ ಹಾಗೂ ಹಸುಗೂಸುಗಳ ಆರೋಗ್ಯ ಸುರಕ್ಷತೆಗಾಗಿ ಕೈಗೊಂಡ ವಿಶೇಷ ಕಾಳಜಿಯಿಂದಾಗಿ, ಇವರು ಸೋಂಕಿನಿಂದ ಗುಣಮುಖರಾಗಲು ಸಾಧ್ಯವಾಯಿತು. ಗರ್ಭಿಣಿಯರು, ಬಾಣಂತಿಯರು ಕೊರೊನಾ ವಿಷಯದಲ್ಲಿ ಎಚ್ಚರಿಕೆ ವಹಿಸುವುದು ಒಳ್ಳೆಯದು. ಯಾವುದೇ ಆರೋಗ್ಯ ಸಮಸ್ಯೆ ಕಂಡುಬಂದರೂ, ತಕ್ಷಣ ವೈದ್ಯರ ಗಮನಕ್ಕೆ ತಂದು ಚಿಕಿತ್ಸೆ ಪಡೆದರೆ ಯಾವುದೇ ಸಮಸ್ಯೆಯಾಗುವುದಿಲ್ಲ" ಎನ್ನುತ್ತಾರೆ ಜಿಲ್ಲಾಸ್ಪತ್ರೆಯ ತಜ್ಞ ವೈದ್ಯ ಡಾ. ಗಿರಿಧರ್.
Recommended Video

ಎದೆ ಹಾಲಿನಿಂದ ಸೋಂಕು ಹರಡಲ್ಲ
ಕೊರೊನಾ ಇದ್ದರೂ ಕೂಡ ಮಾಸ್ಕ್ ಧರಿಸಿ, ತಾಯಂದಿರು ಹಸುಗೂಸುಗಳಿಗೆ ಹಾಲುಣಿಸಬಹುದು. ತಾಯಿಯ ಎದೆ ಹಾಲಿನಿಂದ ಕೊರೊನಾ ಸೋಂಕು ಮಗುವಿಗೆ ಹರಡುವುದಿಲ್ಲ. ಆದರೆ ಹಾಲುಣಿಸುವಾಗ ತಾಯಂದಿರು ಅತ್ಯಂತ ಎಚ್ಚರಿಕೆ ವಹಿಸಬೇಕು. ಮಾಸ್ಕ್ ಧರಿಸದೆ ಕೆಮ್ಮುವುದು, ಸೀನುವುದು ಮಾಡುವುದರಿಂದ ಮಗುವಿಗೆ ಸೋಂಕು ತಗಲುವ ಸಾಧ್ಯತೆಗಳಿರುತ್ತವೆ. ಹೀಗಾಗಿ ತಾಯಂದಿರು ತಪ್ಪದೆ ಮಾಸ್ಕ್ ಧರಿಸಿಯೇ ಮಗುವಿಗೆ ಹಾಲುಣಿಸಬೇಕು, ಬಳಿಕ ಮಗುವನ್ನು ಸುರಕ್ಷಿತ ಅಂತರದಲ್ಲಿ ಪ್ರತ್ಯೇಕವಾಗಿ ಮಲಗಿಸಬೇಕು. ಹಾಲುಣಿಸುವ ಮೊದಲು ಹಾಗೂ ನಂತರ, ಪ್ರತಿ ಬಾರಿಯೂ ತಾಯಿ ಕೈಯನ್ನು ಸಾಬೂನಿನಿಂದ ಸ್ವಚ್ಛವಾಗಿ ತೊಳೆದುಕೊಳ್ಳಬೇಕು. ಒಂದು ವೇಳೆ ಬಾಟಲಿಯಿಂದ ಮಗುವಿಗೆ ಹಾಲುಣಿಸುತ್ತಿದ್ದರೆ, ಪ್ರತಿ ಬಾರಿಯೂ ನಿಪ್ಪಲ್ ಅನ್ನು ಬಿಸಿ ನೀರಿನಿಂದ ತಪ್ಪದೆ ಸ್ವಚ್ಛಗೊಳಿಸಬೇಕು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications