ಬೆಣ್ಣೆನಗರಿ ದಾವಣಗೆರೆಯಲ್ಲಿ ಸೆರೆಸಿಕ್ಕ ಮತ್ತೊಬ್ಬ ಶಂಕಿತ ಉಗ್ರ
ದಾವಣಗೆರೆ, ಜುಲೈ, 20: ಬೆಂಗಳೂರಿನಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಶಂಕಿತ ಉಗ್ರರರನ್ನು ಪೊಲೀಸರು ಎಡೆಮುರಿ ಕಟ್ಟಿದ್ದರು. ಇದೀಗ ಬೆಣ್ಣೆನಗರಿ ದಾವಣಗೆರೆಯಲ್ಲಿಯೂ ಶಂಕಿತ ಉಗ್ರನೊಬ್ಬ ಸೆರೆ ಸಿಕ್ಕಿದ್ದು, ಈತನನ್ನು ಸಿಸಿಬಿ ಪೊಲೀಸರು ಬಂಧಿಸಿ ಕರೆದುಕೊಂಡು ಹೋಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಬೆಂಗಳೂರಿನ ಫಯಾಜ್ (32) ಬಂಧಿತ ಶಂಕಿತ ಉಗ್ರನಾಗಿದ್ದಾನೆ. ದಾವಣಗೆರೆ ನಗರದ ಆಜಾದ್ ನಗರದಲ್ಲಿ ಈತನನ್ನು ವಶಕ್ಕೆ ಪಡೆಯಲಾಗಿದೆ ಎನ್ನಲಾಗಿದೆ. ಈತ ಬೆಂಗಳೂರು, ಚಿತ್ರದುರ್ಗದಲ್ಲಿ ವುಡ್ ವರ್ಕ್ ಪಾಲಿಶ್ ಮಾಡುವ ಕೆಲಸ ಮಾಡುತ್ತಿದ್ದ. ದಾವಣಗೆರೆಯಲ್ಲಿ ಈತನ ಎರಡನೇ ಪತ್ನಿ ಇದ್ದು, ಆಗಾಗ್ಗೆ ಇಲ್ಲಿಗೆ ಬಂದು ಹೋಗುತ್ತಿದ್ದ. ಈತ ಮೊದಲನೇ ಮದುವೆಯಾಗಿದ್ದರೂ ಆ ಬಳಿಕ ದಾವಣಗೆರೆಯಲ್ಲಿಯೂ ಮದುವೆಯಾಗಿ ಸಂಸಾರ ನಡೆಸುತ್ತಿದ್ದ ಎಂದು ತಿಳಿದುಬಂದಿದೆ.

ಆದರೆ ಮದುವೆಯಾಗಿರುವ ಕುರಿತಂತೆ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ. ಇಲ್ಲಿನ ಮಹಿಳೆಯೊಂದಿಗೆ ಪತಿ - ಪತ್ನಿ ಸಂಬಂಧ ಹೊಂದಿದ್ದ ಎಂದು ಮೂಲಗಳು ಮಾಹಿತಿ ನೀಡಿವೆ. ಹೆಚ್ಚಾಗಿ ಬೆಂಗಳೂರು ಹಾಗೂ ಚಿತ್ರದುರ್ಗದಲ್ಲಿ ಕೆಲಸ ಮಾಡುತ್ತಿದ್ದ. ಚಿತ್ರದುರ್ಗಕ್ಕೆ ವುಡ್ ವರ್ಕ್ ಪಾಲಿಶ್ ಕೆಲಸ ಸಿಕ್ಕಾಗ ಬರುತ್ತಿದ್ದ. ಆಗ ದಾವಣಗೆರೆಯಲ್ಲಿನ ತನ್ನ ಎರಡನೇ ಪತ್ನಿ ಮನೆಗೂ ಬಂದು ಹೋಗುತ್ತಿದ್ದ ಎಂದು ಮೂಲಗಳು ತಿಳಿಸಿವೆ.
ಬೆಂಗಳೂರಿನಿಂದ ಬಂದರೂ ಆತನ ಬಗ್ಗೆ ಅಕ್ಕಪಕ್ಕದವರಿಗೆ ಹೆಚ್ಚಿನ ಮಾಹಿತಿ ಇಲ್ಲ. ಯಾಕೆಂದರೆ ಒಮ್ಮೊಮ್ಮೆ ಬಂದರೆ ಎರಡರಿಂದ ಮೂರು ದಿನ ಇರುತ್ತಿದ್ದ. ಮತ್ತೆ ಬಂದು ಹಾಗೆ ಹೋಗುತ್ತಿದ್ದ. ಹಾಗಾಗಿ, ಹೆಚ್ಚಾಗಿ ಸುತ್ತಮುತ್ತಲಿನ ಪ್ರದೇಶದವರಿಗೆ ಈತ ಪರಿಚಯ ಇದ್ದದ್ದು ಕಡಿಮೆ ಎಂದು ಹೇಳಲಾಗುತ್ತಿದೆ.
ಶಂಕಿತ ಉಗ್ರ ಫಯಾಜ್ ಮೇಲಿವೆ 5 ಕೇಸ್ಗಳು
ಬೆಂಗಳೂರಿನವನಾದ ಫಯಾಜ್ ಈ ಹಿಂದೆಯೂ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾದ ಆರೋಪ ಕೇಳಿಬಂದಿದೆ. ಬೆಂಗಳೂರಿನಲ್ಲಿ ಡ್ರಗ್ಸ್, ಆಯುಧ ಮಾರಾಟ ಪ್ರಕರಣ ಸಂಬಂಧ ಐದು ಪ್ರಕರಣಗಳು ದಾಖಲಾಗಿವೆ. ಅಕ್ರಮ ಆಯುಧ ಮಾರಾಟ ಪ್ರಕರಣದಲ್ಲಿ ಜೈಲು ಸೇರಿದ್ದ ಈತ ಇತ್ತೀಚೆಗಷ್ಟೇ ಜಾಮೀನಿನ ಮೇಲೆ ಬಿಡುಗಡೆ ಆಗಿ ಬಂದಿದ್ದ ಎಂದು ಸಿಸಿಬಿ ಜಂಟಿ ಆಯುಕ್ತ ಶರಣಪ್ಪ ಅವರು ಮಾಹಿತಿ ನೀಡಿದ್ದಾರೆ.
ಒಟ್ಟಿನಲ್ಲಿ ಶಾಂತಿಯುತವಾಗಿದ್ದ ದಾವಣಗೆರೆಯಲ್ಲಿಯೂ ಶಂಕಿತ ಉಗ್ರನ ಚಲನವಲನ ಕಂಡುಬಂದಿದ್ದು ಆತಂಕಕ್ಕೆ ಕಾರಣವಾಗಿದೆ.
ಮಾಹಿತಿ ಕಲೆಹಾಕುತ್ತಿರುವ ಪೊಲೀಸರು
ಇನ್ನು ಫಯಾಜ್ ಚಿತ್ರದುರ್ಗ ಜಿಲ್ಲೆಯ ಕೆಲವೆಡೆ ವುಡ್ ವರ್ಕ್ ಪಾಲಿಶ್ ಕೆಲಸ ಮಾಡಿದ್ದು, ಎಲ್ಲೆಲ್ಲಿ ಕೆಲಸ ಮಾಡಿದ್ದ, ಈತನಿಗೆ ಕೆಲಸ ಕೊಟ್ಟವರು ಯಾರು? ಯಾರ ಮೂಲಕ ಬಂದಿದ್ದ? ಚಿತ್ರದುರ್ಗದಲ್ಲಿ ಏನಾದರೂ ಈತನ ಸಹಚರರು ಇದ್ದಾರೆಯೇ ಎಂಬ ಕುರಿತಂತೆ ತನಿಖೆಯೂ ಮುಂದುವರೆದಿದೆ. ದಾವಣಗೆರೆಯಲ್ಲಿ ಬೇರೆ ಯಾರ ಜೊತೆಗೆಲ್ಲಾ ಸಂಪರ್ಕ ಹೊಂದಿದ್ದಾನೆ ಎನ್ನುವ ಕುರಿತಂತೆಯೂ ಮಾಹಿತಿ ಕಲೆ ಹಾಕುತ್ತಿದ್ದಾರೆ. ಕೇವಲ ಪತ್ನಿ ಮನೆಗೆ ಮಾತ್ರ ಬಂದು ಹೋಗುತ್ತಿದ್ದನೋ ಅಥವಾ ಬೇರೆ ಯಾವುದಾದರೂ ಉದ್ದೇಶ ಇಟ್ಟುಕೊಂಡು ಬರುತ್ತಿದ್ದನೋ ಎಂಬ ಬಗ್ಗೆ ಮಾಹಿತಿ ಇನ್ನು ತಿಳಿದುಬಂದಿಲ್ಲ.
-
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral












Click it and Unblock the Notifications