ಬೆಣ್ಣೆನಗರಿ ದಾವಣಗೆರೆಯಲ್ಲಿ ಸೆರೆಸಿಕ್ಕ ಮತ್ತೊಬ್ಬ ಶಂಕಿತ ಉಗ್ರ
ದಾವಣಗೆರೆ, ಜುಲೈ, 20: ಬೆಂಗಳೂರಿನಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಶಂಕಿತ ಉಗ್ರರರನ್ನು ಪೊಲೀಸರು ಎಡೆಮುರಿ ಕಟ್ಟಿದ್ದರು. ಇದೀಗ ಬೆಣ್ಣೆನಗರಿ ದಾವಣಗೆರೆಯಲ್ಲಿಯೂ ಶಂಕಿತ ಉಗ್ರನೊಬ್ಬ ಸೆರೆ ಸಿಕ್ಕಿದ್ದು, ಈತನನ್ನು ಸಿಸಿಬಿ ಪೊಲೀಸರು ಬಂಧಿಸಿ ಕರೆದುಕೊಂಡು ಹೋಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಬೆಂಗಳೂರಿನ ಫಯಾಜ್ (32) ಬಂಧಿತ ಶಂಕಿತ ಉಗ್ರನಾಗಿದ್ದಾನೆ. ದಾವಣಗೆರೆ ನಗರದ ಆಜಾದ್ ನಗರದಲ್ಲಿ ಈತನನ್ನು ವಶಕ್ಕೆ ಪಡೆಯಲಾಗಿದೆ ಎನ್ನಲಾಗಿದೆ. ಈತ ಬೆಂಗಳೂರು, ಚಿತ್ರದುರ್ಗದಲ್ಲಿ ವುಡ್ ವರ್ಕ್ ಪಾಲಿಶ್ ಮಾಡುವ ಕೆಲಸ ಮಾಡುತ್ತಿದ್ದ. ದಾವಣಗೆರೆಯಲ್ಲಿ ಈತನ ಎರಡನೇ ಪತ್ನಿ ಇದ್ದು, ಆಗಾಗ್ಗೆ ಇಲ್ಲಿಗೆ ಬಂದು ಹೋಗುತ್ತಿದ್ದ. ಈತ ಮೊದಲನೇ ಮದುವೆಯಾಗಿದ್ದರೂ ಆ ಬಳಿಕ ದಾವಣಗೆರೆಯಲ್ಲಿಯೂ ಮದುವೆಯಾಗಿ ಸಂಸಾರ ನಡೆಸುತ್ತಿದ್ದ ಎಂದು ತಿಳಿದುಬಂದಿದೆ.

ಆದರೆ ಮದುವೆಯಾಗಿರುವ ಕುರಿತಂತೆ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ. ಇಲ್ಲಿನ ಮಹಿಳೆಯೊಂದಿಗೆ ಪತಿ - ಪತ್ನಿ ಸಂಬಂಧ ಹೊಂದಿದ್ದ ಎಂದು ಮೂಲಗಳು ಮಾಹಿತಿ ನೀಡಿವೆ. ಹೆಚ್ಚಾಗಿ ಬೆಂಗಳೂರು ಹಾಗೂ ಚಿತ್ರದುರ್ಗದಲ್ಲಿ ಕೆಲಸ ಮಾಡುತ್ತಿದ್ದ. ಚಿತ್ರದುರ್ಗಕ್ಕೆ ವುಡ್ ವರ್ಕ್ ಪಾಲಿಶ್ ಕೆಲಸ ಸಿಕ್ಕಾಗ ಬರುತ್ತಿದ್ದ. ಆಗ ದಾವಣಗೆರೆಯಲ್ಲಿನ ತನ್ನ ಎರಡನೇ ಪತ್ನಿ ಮನೆಗೂ ಬಂದು ಹೋಗುತ್ತಿದ್ದ ಎಂದು ಮೂಲಗಳು ತಿಳಿಸಿವೆ.
ಬೆಂಗಳೂರಿನಿಂದ ಬಂದರೂ ಆತನ ಬಗ್ಗೆ ಅಕ್ಕಪಕ್ಕದವರಿಗೆ ಹೆಚ್ಚಿನ ಮಾಹಿತಿ ಇಲ್ಲ. ಯಾಕೆಂದರೆ ಒಮ್ಮೊಮ್ಮೆ ಬಂದರೆ ಎರಡರಿಂದ ಮೂರು ದಿನ ಇರುತ್ತಿದ್ದ. ಮತ್ತೆ ಬಂದು ಹಾಗೆ ಹೋಗುತ್ತಿದ್ದ. ಹಾಗಾಗಿ, ಹೆಚ್ಚಾಗಿ ಸುತ್ತಮುತ್ತಲಿನ ಪ್ರದೇಶದವರಿಗೆ ಈತ ಪರಿಚಯ ಇದ್ದದ್ದು ಕಡಿಮೆ ಎಂದು ಹೇಳಲಾಗುತ್ತಿದೆ.
ಶಂಕಿತ ಉಗ್ರ ಫಯಾಜ್ ಮೇಲಿವೆ 5 ಕೇಸ್ಗಳು
ಬೆಂಗಳೂರಿನವನಾದ ಫಯಾಜ್ ಈ ಹಿಂದೆಯೂ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾದ ಆರೋಪ ಕೇಳಿಬಂದಿದೆ. ಬೆಂಗಳೂರಿನಲ್ಲಿ ಡ್ರಗ್ಸ್, ಆಯುಧ ಮಾರಾಟ ಪ್ರಕರಣ ಸಂಬಂಧ ಐದು ಪ್ರಕರಣಗಳು ದಾಖಲಾಗಿವೆ. ಅಕ್ರಮ ಆಯುಧ ಮಾರಾಟ ಪ್ರಕರಣದಲ್ಲಿ ಜೈಲು ಸೇರಿದ್ದ ಈತ ಇತ್ತೀಚೆಗಷ್ಟೇ ಜಾಮೀನಿನ ಮೇಲೆ ಬಿಡುಗಡೆ ಆಗಿ ಬಂದಿದ್ದ ಎಂದು ಸಿಸಿಬಿ ಜಂಟಿ ಆಯುಕ್ತ ಶರಣಪ್ಪ ಅವರು ಮಾಹಿತಿ ನೀಡಿದ್ದಾರೆ.
ಒಟ್ಟಿನಲ್ಲಿ ಶಾಂತಿಯುತವಾಗಿದ್ದ ದಾವಣಗೆರೆಯಲ್ಲಿಯೂ ಶಂಕಿತ ಉಗ್ರನ ಚಲನವಲನ ಕಂಡುಬಂದಿದ್ದು ಆತಂಕಕ್ಕೆ ಕಾರಣವಾಗಿದೆ.
ಮಾಹಿತಿ ಕಲೆಹಾಕುತ್ತಿರುವ ಪೊಲೀಸರು
ಇನ್ನು ಫಯಾಜ್ ಚಿತ್ರದುರ್ಗ ಜಿಲ್ಲೆಯ ಕೆಲವೆಡೆ ವುಡ್ ವರ್ಕ್ ಪಾಲಿಶ್ ಕೆಲಸ ಮಾಡಿದ್ದು, ಎಲ್ಲೆಲ್ಲಿ ಕೆಲಸ ಮಾಡಿದ್ದ, ಈತನಿಗೆ ಕೆಲಸ ಕೊಟ್ಟವರು ಯಾರು? ಯಾರ ಮೂಲಕ ಬಂದಿದ್ದ? ಚಿತ್ರದುರ್ಗದಲ್ಲಿ ಏನಾದರೂ ಈತನ ಸಹಚರರು ಇದ್ದಾರೆಯೇ ಎಂಬ ಕುರಿತಂತೆ ತನಿಖೆಯೂ ಮುಂದುವರೆದಿದೆ. ದಾವಣಗೆರೆಯಲ್ಲಿ ಬೇರೆ ಯಾರ ಜೊತೆಗೆಲ್ಲಾ ಸಂಪರ್ಕ ಹೊಂದಿದ್ದಾನೆ ಎನ್ನುವ ಕುರಿತಂತೆಯೂ ಮಾಹಿತಿ ಕಲೆ ಹಾಕುತ್ತಿದ್ದಾರೆ. ಕೇವಲ ಪತ್ನಿ ಮನೆಗೆ ಮಾತ್ರ ಬಂದು ಹೋಗುತ್ತಿದ್ದನೋ ಅಥವಾ ಬೇರೆ ಯಾವುದಾದರೂ ಉದ್ದೇಶ ಇಟ್ಟುಕೊಂಡು ಬರುತ್ತಿದ್ದನೋ ಎಂಬ ಬಗ್ಗೆ ಮಾಹಿತಿ ಇನ್ನು ತಿಳಿದುಬಂದಿಲ್ಲ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications