ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅಧಿಕಾರಿಗಳ ಸೋಗಿನಲ್ಲಿ ಚಿನ್ನ ದೋಚಿದ ಕಳ್ಳರು

By ದಾವಣಗೆರೆ ಪ್ರತಿನಿಧಿ
|
Google Oneindia Kannada News

ದಾವಣಗೆರೆ, ಆಗಸ್ಟ್ 16: ಪಾಲಿಕೆ ಅಧಿಕಾರಿಗಳ ಸೋಗಿನಲ್ಲಿ ಮನೆಗೆ ನುಗ್ಗಿ ಕಳ್ಳತನ ಮಾಡಿದ ಘಟನೆ ದಾವಣಗೆರೆಯ ಶಿವಕುಮಾರ್ ಸ್ವಾಮಿ ಬಡಾವಣೆಯ ದುರ್ಗಾಂಭಿಕಾ ಶಾಲೆ ಬಳಿ ನಡೆದಿದೆ.

ಜನಸಂದಣಿ ಪ್ರದೇಶವೇ ಇವರ ಟಾರ್ಗೆಟ್; ಗೊತ್ತೇ ಆಗದೇ ಕತ್ತಿಗೆ ಕೈ ಹಾಕುತ್ತಾರೆ ಖದೀಮರುಜನಸಂದಣಿ ಪ್ರದೇಶವೇ ಇವರ ಟಾರ್ಗೆಟ್; ಗೊತ್ತೇ ಆಗದೇ ಕತ್ತಿಗೆ ಕೈ ಹಾಕುತ್ತಾರೆ ಖದೀಮರು

ಚನ್ನಪ್ಪ ಎನ್ನುವರ ಮನೆಯಲ್ಲಿ ಕಳ್ಳತನವಾಗಿದ್ದು, ಹಾಡುಹಗಲೇ ಕಳ್ಳತನ ಮಾಡಿ ಪರಾರಿಯಾಗಿದ್ದಾರೆ. ಚನ್ನಪ್ಪ ಅವರ ಮನೆಯಲ್ಲಿ ಚನ್ನಪ್ಪನ ತಾಯಿ ಹಾಗೂ ಹೆಂಡತಿ ಇಬ್ಬರೇ ಇದ್ದುದನ್ನು ಗಮನಿಸಿದ ಖದೀಮರು ನಾವು ಪಾಲಿಕೆ ಅಧಿಕಾರಿಗಳು, ನಿಮ್ಮ ಮನೆ ಪತ್ರ ಹಾಗೂ ಕಂದಾಯ ಪತ್ರಗಳನ್ನು ಪರಿಶೀಲನೆ ‌ಮಾಡಬೇಕು ಎಂದು ಹೇಳಿ ಮನೆಯೊಳಗೆ ನುಗ್ಗಿದ್ದಾರೆ.

Thieves Stolen Gold In The Name Of Officers

ಚನ್ನಪ್ಪನ ಮಡದಿ ಸುಧಾ ಹಾಗೂ ತಾಯಿ ರುದ್ರಮ್ಮ ಇಬ್ಬರೇ ಮನೆಯಲ್ಲಿ ಇದ್ದುದರಿಂದ ದಾಖಲೆಗಳನ್ನು ತರಲು ಹೋಗಿದ್ದಾರೆ. ಬರುವಷ್ಟರಲ್ಲಿ ವರ ಮಹಾಲಕ್ಷ್ಮಿ ಹಬ್ಬಕ್ಕೆಂದು ಬ್ಯಾಂಕ್‌ನಿಂದ ಬಿಡಿಸಿಕೊಂಡು ಬಂದಿದ್ದ ಒಂದು ಕೆಜಿ ‌ಚಿನ್ನ ಹಾಗೂ 30 ಸಾವಿರ ನಗದನ್ನು ಕಳ್ಳತನ ‌ಮಾಡಿ ಪರಾರಿಯಾಗಿದ್ದಾರೆ. ಕಳ್ಳತನ ಮಾಡಲು ಬಂದವರು ತಮಿಳು ಭಾಷೆಯಲ್ಲಿ ಮಾತನಾಡುತ್ತಿದ್ದರು ಎನ್ನಲಾಗಿದ್ದು, ಸ್ಥಳಕ್ಕೆ ಕೆಟಿಜೆ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ‌ನಡೆಸುತ್ತಿದ್ದಾರೆ.

English summary
Thieves grab the gold in the name of officers in davanagere. The incident took place at the Sivakumar Swamy school. The thieves
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X