ದಾವಣಗೆರೆ: 1-10ನೇ ತರಗತಿ ಮಾನ್ಯತೆ ರದ್ದು
ದಾವಣಗೆರೆ, ಏಪ್ರಿಲ್, 27: ರಾಜ್ಯದಲ್ಲಿ ಯಾವುದೇ ಶಾಲೆಯಲ್ಲಾಗಲಿ ಸಮಸ್ಯೆ ಕಂಡುಬಂದರೆ, ಕ್ರಮ ಕೈಗೊಳ್ಳುವ ಅಧಿಕಾರ ಶಿಕ್ಷಣ ಇಲಾಖೆಗೆ ಇರುತ್ತದೆ. ಇದೀಗ ದಾವಣಗೆರೆ ಜಿಲ್ಲೆಯೊಂದ ಶಾಲೆಯಲ್ಲಿ ಮೂಲಸೌಕರ್ಯಗಳ ಕೊರತೆ ಹಿನ್ನೆಲೆ 1-10ನೇ ತರಗತಿ ಮಾನ್ಯತೆ ರದ್ದುಪಡಿಸಲಾಗಿದೆ. ಸಂಪೂರ್ಣ ಮಾಹಿತಿ ಇಲ್ಲಿದೆ ತಿಳಿಯಿರಿ.
ಅಗತ್ಯ ಮೂಲಸೌಕರ್ಯ ಕಲ್ಪಿಸದ ಹಿನ್ನೆಲೆ ಜಿಲ್ಲೆಯ ಹೊನ್ನಾಳಿ ಪಟ್ಟಣದ ದುರ್ಗಿಗುಡಿ ಬಡಾವಣೆಯ ಸ್ವಾಮಿ ವಿವೇಕಾನಂದ ಮೆಮೋರಿಯಲ್ ಆಂಗ್ಲ ಮಾಧ್ಯಮ ಶಾಲೆಯ 1-10ನೇ ತರಗತಿ ಮಾನ್ಯತೆ ರದ್ದು ಮಾಡಲಾಗಿದೆ.

ಯಾವುದೇ ಮೂಲಸೌಕರ್ಯ ಇಲ್ಲದೆ, ಕರ್ನಾಟಕ ಶಿಕ್ಷಣ ಕಾಯ್ದೆ ಉಲ್ಲಂಘಿಸಿರುವ ಕಾರಣ ಸ್ವಾಮಿ ವಿವೇಕಾನಂದ ಮೆಮೋರಿಯಲ್ ಆಂಗ್ಲ ಮಾಧ್ಯಮ ಶಾಲೆಗೆ 2025-26ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ 1-10ನೇ ತರಗತಿಗೆ ನೀಡಿದ್ದ ಮಾನ್ಯತೆಯನ್ನು ಡಿಡಿಪಿಐ ಹಿಂಪಡೆದಿದ್ದಾರೆ. ಅಲ್ಲದೆ, ಪೋಷಕರು ಈ ಶಾಲೆಗೆ ಮಕ್ಕಳನ್ನು ದಾಖಲಿಸಬಾರದು ಎಂದು ಸುದ್ದಿಗೋಷ್ಠಿಯಲ್ಲಿ ಕೆ.ಟಿ. ಬಿಇಒ ನಿಂಗಪ್ಪ ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ.
ನೋಟಿಸ್ ಜಾರಿಗೆ ಶಾಲಾ ಆಡಳಿತ ಮಂಡಳಿ ಉತ್ತರಿಸದ ಹಿನ್ನೆಲೆ ಈ ಕ್ರಮವನ್ನು ಕೈಗೊಳ್ಳಲಾಗಿದೆ. ಪೀಠೋಪಕರಣ, ಮೈದಾನ, ಶೌಚಾಲಯ, ಸುರಕ್ಷತಾ ಕ್ರಮ ಇಲ್ಲ. ಆದ್ದರಿಂದ ಈ ಶಾಲೆಯಲ್ಲಿನ ಮಕ್ಕಳನ್ನು ಬೇರೆ ಶಾಲೆಗೆ ದಾಖಲಿಸುವಂತೆ ಶಿಕ್ಷಣ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ಶಾಲೆಯಲ್ಲಿ ಅಗ್ನಿಸುರಕ್ಷಾ, ಗ್ರಂಥಾಲಯ, ಶೌಚಾಲಯಗಳ , ಪೀಠೋಪಕರಣಗಳ ವ್ಯವಸ್ಥೆಯಿಲ್ಲ. ಮಕ್ಕಳ ಸುರಕ್ಷತೆಗೆ ಗ್ರಿಲ್ಸ್ ಅಳವಡಿಕೆ ಮಾಡಿಲ್ಲ. ಆಟದ ಮೈದಾನ ಹಾಗೂ ಕಾಂಪೌಂಡ್ ಇನ್ನಿತರೆ ಯಾವುದೇ ಮೂಲ ಸೌಕರ್ಯಗಳು ಇಲ್ಲ. ಮಕ್ಕಳ ಶಿಕ್ಷಣಕ್ಕೆ ಪೂರಕವಾದ ಈ ಸೌಲಭ್ಯಗಳನ್ನು ನೀಡದ ಹಿನ್ನೆಲೆ ಈ ಶಾಲೆಯ ಮಾನ್ಯತೆ ಹಿಂಪಡೆಯಲಾಗಿದೆ ಎಂದು ಹೇಳಿದರು.
ಈಗಾಗಲೇ ಈ ಬಗ್ಗೆ ಅನೇಕ ದೂರುಗಳು ಬಂದಿವೆ. ಆದ್ದರಿಂದ ಶಾಲೆಗೆ ಭೇಟಿ ನೀಡಿ, ವರದಿ ನೀಡುವಂತೆಯೂ ಡಿಡಿಪಿಐ ಕಚೇರಿಯಿಂದ ಆದೇಶ ಆಗಿತ್ತು. ಅದರ ಅನ್ವಯ ನಮ್ಮ ಕಚೇರಿಯಿಂದಲೂ ಪರಿಶೀಲಿಸಿ ಡಿಡಿಪಿಐ ಕಚೇರಿಗೆ ವರದಿ ನೀಡಿದ್ದೇವೆ. ಶಾಲಾ ಆಡಳಿತ ಮಂಡಳಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗಿತ್ತು. ಆದರೆ, ಆಡಳಿತ ಮಂಡಳಿ ಉತ್ತರಿಸಿರಲಿಲ್ಲ. ಆದ್ದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು.
ವಿದ್ಯಾರ್ಥಿಗಳು ಮತ್ತು ಪೋಷಕರ ಹಿತದೃಷ್ಟಿಯಿಂದ ನಾವು ಶಾಲೆ ಆರಂಭಕ್ಕೂ ಮೊದಲೇ ಪೋಷಕರಲ್ಲಿ ಮನವಿ ಮಾಡುತ್ತಿದ್ದೇವೆ. ಸದರಿ ಶಾಲೆಯಲ್ಲಿದ್ದ ಮಕ್ಕಳ ದಾಖಲೆಗಳನ್ನು ಸ್ಥಳೀಯ ಸರ್ಕಾರಿ ಶಾಲೆಗೆ ಸೇರಿಸಿರುತ್ತೇವೆ. ಅಲ್ಲಿ ತಮ್ಮ ಮಕ್ಕಳ ದಾಖಲೆಗಳನ್ನು ಪಡೆದು, ಬೇರೆ ಶಾಲೆಗಳಿಗೆ ತಮ್ಮ ತಮ್ಮ ಮಕ್ಕಳನ್ನು ದಾಖಲು ಮಾಡಬಹುದೆಂದು ತಿಳಿಸಿದರು.
ಇದೀಗ ಈ ಶಾಲೆಯಲ್ಲಿ 1-10ನೇ ತರಗತಿವರೆಗೆ 259 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. 2025-26ನೇ ಶೈಕ್ಷಣಿಕ ವರ್ಷದಲ್ಲಿ ತಮ್ಮ ಮಕ್ಕಳ ದಾಖಲೆಗಳು ಬೇಕಾದರೆ, ಸ್ಥಳಿಯ ಸರ್ಕಾರಿ ಶಾಲೆಯಲ್ಲಿ ದೊರೆಯುತ್ತದೆ. ಅಲ್ಲಿಗೆ ಹೋಗಿ ನಿಮ್ಮ ಮಕ್ಕಳ ದಾಖಲೆ ಪಡೆಯಬಹುದೆಂದು ತಿಳಿಸಿದರು.
-
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ?












Click it and Unblock the Notifications