ಉಕ್ಕಡಗಾತ್ರಿ; ತುಂಗಾಭದ್ರಾ ನದಿಯಲ್ಲಿ ಮುಳುಗಿದ ಇಬ್ಬರು ಸಹೋದರಿಯರು
ದಾವಣಗೆರೆ, ಸೆಪ್ಟೆಂಬರ್, 05: ಹರಿಹರ ತಾಲೂಕಿನ ಮಲೆಬೆನ್ನೂರು ಬಳಿ ಇರುವ ಉಕ್ಕಡಗಾತ್ರಿಯ ತುಂಗಾಭದ್ರಾ ನದಿಯಲ್ಲಿ ಸ್ನಾನ ಮಾಡಲು ಇಳಿದಿದ್ದ ಸಹೋದರಿಯರು ನೀರಿನ ಸೆಳೆತಕ್ಕೆ ಸಿಲುಕಿ ಕಣ್ಮರೆಯಾಗಿದ್ದು, ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆ ಆಗಿದೆ.
ಮಾಯಕೊಂಡ ಹೋಬಳಿಯ ಹುಚ್ಚವ್ವನಹಳ್ಳಿ ಗ್ರಾಮದ ವೀರಾಚಾರಿ ಎಂಬುವವರ ಮಕ್ಕಳಾದ ಚೈತ್ರಾ ಹಾಗೂ ಪುಷ್ಪಾ ನಾಪತ್ತೆ ಆಗಿದ್ದಾರೆ. ಹೊಳಲ್ಕೆರೆ ತಾಲೂಕಿನ ಗುಂಡೇರಿ ಗ್ರಾಮದ ಕಾರ್ತಿಕ್ ಅವರ ಜೊತೆ ಚೈತ್ರಾ ಅವರು ವಿವಾಹ ಆಗಿದ್ದರು. ಇನ್ನು ಪುಷ್ಪಾ ಎನ್ನುವ ಯುವತಿ ದಾವಣಗೆರೆಯ ಕಾಲೇಜುವೊಂದರಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ನೀರಿನ ಸೆಳೆತಕ್ಕೆ ಸಿಲುಕಿ ನಾಪತ್ತೆ ಆಗಿರುವ ಚೈತ್ರಾ ಹಾಗೂ ಪುಷ್ಪಾ ಬದುಕಿರುವ ಸಾಧ್ಯತೆ ತೀರಾ ಕಡಿಮೆ ಎಂದು ಅಲ್ಲಿನ ಸ್ಥಳಿಯರು ಹೇಳುತ್ತಿದ್ದಾರೆ.
ನದಿಯಲ್ಲಿ ಕಣ್ಮರೆಯಾದ ಸಹೋದರಿಯರು: ಚೈತ್ರಾ ಹಾಗೂ ಪುಷ್ಪಾ ಎನ್ನುವ ಇಬ್ಬರು ಸಹೋದರಿಯರು ಕುಟುಂಬ ಸಮೇತ ಉಕ್ಕಡಗಾತ್ರಿಯ ಸುಕ್ಷೇತ್ರಕ್ಕೆ ಕರಿಬಸವೇಶ್ವರ ಸ್ವಾಮಿ ದರ್ಶನಕ್ಕೆ ಬಂದಿದ್ದರು. ಯಾತ್ರಾರ್ಥಿಗಳು ಸ್ನಾನ ಮಾಡಲು ನದಿಗೆ ಇಳಿದಿದ್ದಾರೆ. ಈ ವೇಳೆ ನೀರಿನ ರಭಸಕ್ಕೆ ಸಿಕ್ಕಿ ಹಾಕಿಕೊಂಡು ಇವರಿಬ್ಬರು ಮುಳುಗಿದ್ದಾರೆ. ಅಕ್ಕಪಕ್ಕದಲ್ಲಿದ್ದವರು ಎಷ್ಟೇ ಪ್ರಯತ್ನಿಸಿದರೂ ಇಬ್ಬರು ಸಹೋದರಿಯರನ್ನು ಮೇಲಕ್ಕೆ ತರಲು ಆಗಲಿಲ್ಲ. ಇನ್ನು ಕಣ್ಮರೆ ಆದವರ ಹುಡುಕಾಟ ಮುಂದುವರಿದಿದೆ. ಅಗ್ನಿಶಾಮದ ದಳ ಸಿಬ್ಬಂದಿ ಕಾಣೆ ಆದ ಸಹೋದರಿಯರ ಹುಡುಕಾಟದಲ್ಲಿ ಕಾರ್ಯಪ್ರವೃತ್ತರಾಗಿದ್ದಾರೆ.

ಜಿಲ್ಲೆಯಲ್ಲಿ ಮುಂದುವರೆದ ಮಳೆ ಆರ್ಭಟ
ಮತ್ತೊಂದೆಡೆ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಅಪಾರ ಪ್ರಮಾಣ ಹಾನಿ ಸಂಭವಿಸಿದೆ. ಬೆಳೆಗಳು ಜಲಾವೃತವಾಗಿ ರೈತರು ಕಂಗಾಲಾಗಿದ್ದಾರೆ. ಚನ್ನಗಿರಿ ತಾಲೂಕು ಒಂದರಲ್ಲಿಯೇ ಸುಮಾರು ಒಂದು ಸಾವಿರಕ್ಕೂ ಹೆಚ್ಚು ಎಕರೆ ಪ್ರದೇಶ ಜಲಾವೃತವಾಗಿದ್ದು, ಅಡಿಕೆ ಬೆಳೆಗಾರರು ಕಂಗಾಲಾಗಿದ್ದಾರೆ. ಅಡಿಕೆ ಕೊಯ್ಲಿನ ವೇಳೆಯಲ್ಲಿ ಭಾರಿ ಮಳೆ ಸುರಿದಿದ್ದು, ರೈತರಿಗೆ ಆಘಾತವನ್ನು ಉಂಟು ಮಾಡಿದೆ.
ಚನ್ನಗಿರಿ ತಾಲೂಕಿನಲ್ಲಿ 599 ಮನೆಗಳು ಮಳೆಯಿಂದ ಹಾನಿಗೊಳಗಾಗಿದ್ದು, ಅದರಲ್ಲಿ 540 ಮನೆಗಳಿಗೆ ಪರಿಹಾರ ಮಂಜೂರಾತಿ ಬಾಕಿ ಇದೆ. ರುದ್ರಾಪುರ ಗ್ರಾಮದಲ್ಲಿ ಸಂತ್ರಸ್ತರಿಗಾಗಿ ಕಾಳಜಿ ಕೇಂದ್ರ ತೆರೆಯಲಾಗಿದೆ. ಕಳೆದ ಹದಿನಾಲ್ಕು ದಿನಗಳಿಂದ ಜಿಲ್ಲೆಯಲ್ಲಿ ವರುಣ ಆರ್ಭಟ ಶುರು ಮಾಡಿದ್ದಾನೆ. ಜಿಲ್ಲೆಯಲ್ಲಿ 144 ಮಿಲಿ ಮೀಟರ್ಗೂ ಹೆಚ್ಚು ಮಳೆ ದಾಖಲಾಗಿದೆ. ಜಿಲ್ಲೆಯಾದ್ಯಂತ ಒಟ್ಟು 13,608 ಹೆಕ್ಟೇರ್ನಲ್ಲಿ ಬೆಳೆ ಹಾನಿ ಆಗಿದೆ. ಈಗಾಗಲೇ ಪರಿಹಾರ ಮಂಜೂರಾತಿಗಾಗಿ ಜಿಲ್ಲಾಡಳಿತವು ಸರ್ಕಾರಕ್ಕೆ ಪ್ರಸ್ತಾವನೆವನ್ನು ಸಲ್ಲಿಸಿದೆ.
ಮತ್ತೊಂದೆಡೆ ದಾವಣಗೆರೆ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಒತ್ತುವರಿ ಮಾಡಿಕೊಂಡಿರುವುದರಿಂದ ಮಳೆ ನೀರು ರಸ್ತೆ ಮೇಲೆ ಚರಂಡಿಯಂತೆ ಹರಿಯುತ್ತಿದೆ. ಈ ಹಿನ್ನೆಲೆಯಲ್ಲಿ ಚರಂಡಿ, ರಾಜಕಾಲುವೆಗಳನ್ನು ತೆರವುಗೊಳಿಸಬೇಕು. ಸ್ಮಾರ್ಟ್ ಸಿಟಿ ವತಿಯಿಂದ ಕೈಗೊಂಡ ಬಸ್ ಸ್ಟ್ಯಾಂಡ್, ರಸ್ತೆ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಮುಂದಿನ ಏಪ್ರಿಲ್ ತಿಂಗಳೊಳಗೆ ಪೂರ್ಣಗೊಳಿಸಬೇಕು ಎಂದು ಸೂಚನೆ ನೀಡಲಾಗಿದೆ.

ಪರಿಹಾರ ಕಲ್ಪಿಸುವಂತೆ ಪಟ್ಟು
ಹರಿಹರದ ಗಂಗಾ ನಗರ ಹಾಗೂ ಹೊನ್ನಾಳಿ ಪಟ್ಟಣದ ಬಾಲರಾಜ್ ಘಾಟ್ ಬಳಿ ಪ್ರತಿ ಬಾರಿಯಂತೆ ಈ ಬಾರಿಯೂ ಹೊಳೆ ನೀರು ಹರಿಯುತ್ತಿದ್ದು, ಇಲ್ಲಿನ ಪ್ರದೇಶದ ಮನೆಗಳು ಜಲಾವೃತವಾಗಿವೆ. ಸೂಕ್ತ ಸೂರು ಕಲ್ಪಿಸುವಂತೆ ಜನರು ಒತ್ತಾಯಿಸುತ್ತಾ ಬಂದಿದ್ದರೂ ಬೇಡಿಕೆ ಮಾತ್ರ ಇದುವರೆಗೂ ಈಡೇರಿಲ್ಲ. ಈಗ ಲಭ್ಯವಿರುವ ಕಡೆ ತಕ್ಷಣ ಜಾಗ ಗುರುತಿಸಿ ನಿವೇಶನ ನೀಡಿ ಮನೆ ಕಟ್ಟಿಕೊಳ್ಳಲು ಕ್ರಮವಹಿಸಿ. ಎಷ್ಟು ದಿನ ಹೀಗೆಯೇ ಪರಿಹಾರ ಕೊಟ್ಟು ಕೂರುತ್ತೀರಿ. ಈ ಸಮಸ್ಯೆ ಇಲ್ಲಿಗೆ ಮುಗಿಯಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ್ ಹೇಳಿದ್ದರು. ಈ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯೋನ್ಮುಖ ಆಗಿದ್ದರೂ ಕೆಲಸ ವೇಗವಾಗಿ ನಡೆಯುತ್ತಿಲ್ಲ ಎಂದು ಮಳೆ ಹಾನಿಗೊಳಗಾದವರು ಅಳಲು ತೋಡಿಕೊಂಡಿದ್ದಾರೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications