ಬೆಣ್ಣೆನಗರಿಯಲ್ಲಿ ವೈಕುಂಠ ಏಕಾದಶಿ ಸಡಗರ: ವೆಂಕಟೇಶ್ವರ ಸನ್ನಿಧಾನದಲ್ಲಿ ನೆರೆದ ಭಕ್ತಗಣ
ದಾವಣಗೆರೆ, ಜನವರಿ, 02: ದೇಶದೆಲ್ಲೆಡೆ ಇಂದು ವೈಕುಂಠ ಏಕಾದಶಿ ಸಂಭ್ರಮ ಮನೆ ಮಾಡಿದೆ. ಹಾಗೆಯೇ ಈ ವರ್ಷದ ಆರಂಭದಲ್ಲಿ ಬಂದಿರುವ ವೈಕುಂಠ ಏಕಾದಶಿ ಸಡಗರ ಬೆಣ್ಣೆನಗರಿಯಲ್ಲಿ ಹೆಚ್ಚಿತ್ತು. ಬೆಳಗ್ಗೆಯಿಂದಲೇ ವೆಂಕಟೇಶ್ವರ ಸ್ವಾಮಿ ದರ್ಶನಕ್ಕೆ ಜನಸಾಗರವೇ ಹರಿದು ಬಂದಿತ್ತು. ಸರದಿ ಸಾಲಿನಲ್ಲಿ ನಿಂತು ವೆಂಕಟರಮಣನ ದರ್ಶನ ಪಡೆದು ಭಕ್ತರು ವಿಶೇಷ ಪೂಜೆ ಸಲ್ಲಿಸಿದರು.
ವೈಕುಂಠ ಏಕಾದಶಿ ವರ್ಷದಲ್ಲಿ ಬರುವ ಎಲ್ಲಾ ಏಕಾದಶಿಗಳಿಗಿಂತಲೂ ವಿಶೇಷ ದಿನವಾಗಿದೆ. ಚಾಂದ್ರಮಾನ ಪುಷ್ಯಮಾಸ ಶುಕ್ಲಪಕ್ಷದ ಏಕಾದಶಿಯೇ ಈ ವಿಶೇಷ ದಿನ. ಈ ದಿನ ಶ್ರೀವೆಂಕಟೇಶ್ವರ, ಶ್ರೀನಿವಾಸ, ವಿಷ್ಣು ದೇವರ ಅವಾಸ ಸ್ಥಾನವಾದ ವೈಕುಂಠದ ಬಾಗಿಲು ತೆರೆದಿರುತ್ತದೆ ಎನ್ನುವ ನಂಬಿಕೆ ಮೊದಲಿನಿಂದಲೂ ಇದೆ. ದಾವಣಗೆರೆಯ ಎಂಸಿಸಿಬಿ ಬ್ಲಾಕ್ನಲ್ಲಿರುವ ಶ್ರೀ ವೆಂಕಟೇಶ್ವರ ದೇವಸ್ಥಾನದಲ್ಲಿ ಶ್ರೀನಿವಾಸನ ದರ್ಶನ ಮಾಡಲು ಜನಸಂದಣಿ ಹೆಚ್ಚಾಗಿತ್ತು. ಭಕ್ತರು ದೇವರ ದರ್ಶನಕ್ಕಾಗಿ ಸರದಿ ಸಾಲಿನಲ್ಲಿ ಕಾದು ನಿಂತಿದ್ದರು. ಏಕಾದಶಿ ನಿಮಿತ್ತ ದೇವಸ್ಥಾನದ ಆಡಳಿತ ಮಂಡಳಿ ಎಲ್ಲಾ ಏರ್ಪಾಡು ಮಾಡಿಕೊಂಡಿತ್ತು. ಅದರೂ ಭಕ್ತರು ದೇವರ ದರ್ಶನಕ್ಕೆ ಮುಗಿಬಿದ್ದ ಪ್ರಸಂಗವೂ ನಡೆಯಿತು.

ಭಕ್ತಾಧಿಗಳಿಗೆ ಲಡ್ಡು ಪ್ರಸಾದ ವಿತರಣೆ
ಈ ವೇಳೆ ಕೆಲವರಿಗೆ ದೇವರ ದರ್ಶನವಾದರೆ, ಇನ್ನೂ ಕೆಲವರು ಅವಸರದಲ್ಲಿ ದೇವರ ದರ್ಶನ ಆಗಲಿಲ್ಲ ಎಂದು ಅಸಮಾಧಾನದಿಂದಲೇ ಹೊರಗೆ ಬಂದರು. ದೇವಸ್ಥಾನದ ಆಡಳಿತ ಮಂಡಳಿ ದೇವಸ್ಥಾನಕ್ಕೆ ಆಗಮಿಸಿದ್ದ ಭಕ್ತಾಧಿಗಳಿಗೆ ಲಡ್ಡು ಪ್ರಸಾದ, ತುಳಸಿ, ಹೂವು ವಿತರಿಸುವ ವ್ಯವಸ್ಥೆ ಮಾಡಿತ್ತು. ಪ್ರಸಾದ ಸ್ವೀಕರಿಸಿದ ಭಕ್ತರು ಧನ್ಯತಾ ಭಾವ ಮೆರೆದರು. ಈ ದಿನ ದೇವಸ್ಥಾನಗಳಲ್ಲಿ ನಿರ್ಮಿಸಿರುವ ವೈಕುಂಠ ದ್ವಾರವನ್ನು ಪ್ರವೇಶಿಸಿದರೆ, ಅಂದರೆ ದೇವಾಲಯದ ಹೊರ ಭಾಗದಿಂದ ಒಳ ಭಾಗಕ್ಕೆ ದ್ವಾರದ ಮೂಲಕ ಪ್ರವೇಶಿಸಿದರೆ ಸಾಕ್ಷಾತ್ ವೈಕುಂಠಕ್ಕೆ ಪ್ರವೇಶ ಮಾಡಿದಂತೆ ಎನ್ನುವ ನಂಬಿಕೆ ಇದೆ. ಈ ರೀತಿ ಪ್ರವೇಶ ಮಾಡಿದರೆ ಮೋಕ್ಷ ಸಿಗುವುದೆಂಬ ಪ್ರತೀತಿ ಇದೆ. ವೈಕುಂಠ ಏಕಾದಶಿಯ ದಿನ ವೈಕುಂಠದ ಸ್ವರ್ಗದ ಅಥವಾ ವಿಷ್ಣುಲೋಕದ ಬಾಗಿಲು ತೆರೆದಿರುತ್ತದೆ ಎಂಬ ನಂಬಿಕೆ ಇದೆ. ಏಕಾದಶಿಯ ದಿನದಂದು ವೆಂಕಟೇಶ್ವರ, ಶ್ರೀನಿವಾಸ, ವಿಷ್ಣು ದೇವರ ದರ್ಶನ ಪಡೆದರೆ ಸ್ವರ್ಗ ಪ್ರಾಪ್ತಿಯಾಗುತ್ತದೆ ಎಂಬ ಭಾವನೆಯೂ ಕೂಡ ಹಿಂದೂ ಧರ್ಮೀಯರಲ್ಲಿದೆ.

ಉಪವಾಸ ಮಾಡುವ ಸಂಪ್ರದಾಯವೂ ಇದೆ
ಹಿಂದೂ ಪಂಚಾಂಗದ 12 ಮಾಸಗಳ ಶುಕ್ಲ ಪಕ್ಷ ಮತ್ತು ಕೃಷ್ಣ ಪಕ್ಷದ ಹನ್ನೊಂದನೇಯ ದಿನವನ್ನು ಏಕಾದಶಿ ಎನ್ನಲಾಗುತ್ತದೆ. ಈ ದಿನದಂದು ಯಾವ ಆಹಾರವನ್ನೂ ಸೇವಿಸದೆ, ಉಪವಾಸ ಮಾಡುವ ಸಂಪ್ರದಾಯವಿದೆ. ಈ ದಿನದಂದು ಕೆಲವರು ಅನ್ನ ಮಾತ್ರ ತ್ಯಜಿಸಿ ಉಪವಾಸ ಆಚರಿಸಿದರೆ, ಮತ್ತೆ ಕೆಲವರು ಹನಿ ನೀರನ್ನೂ ಕುಡಿಯದೆ, ನಿರಾಹಾರ ವ್ರತ ಮಾಡುವುದು ವಿಶೇಷವಾಗಿದೆ.
-
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ












Click it and Unblock the Notifications