ಫೆ.8ರಿಂದ ಎರಡು ದಿನಗಳ ಕಾಲ ವಾಲ್ಮೀಕಿ ಜಾತ್ರಾ ಮಹೋತ್ಸವ
ದಾವಣಗೆರೆ, ಜನವರಿ 30: ಹರಿಹರ ತಾಲ್ಲೂಕಿನ ರಾಜನಹಳ್ಳಿಯ ಶ್ರೀ ವಾಲ್ಮೀಕಿ ಗುರುಪೀಠದಲ್ಲಿ 3ನೇ ವರ್ಷದ ವಾಲ್ಮೀಕಿ ಜಾತ್ರಾ ಮಹೋತ್ಸವವು ಫೆ.8 ಹಾಗೂ 9 ರಂದು ಜರುಗಲಿದೆ ಎಂದು ಸಮಾಜದ ಮುಖಂಡ ಹೊದಿಗೆರೆ ರಮೇಶ್ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, ಶ್ರೀ ಪ್ರಸನ್ನಾನಂದ ಸ್ವಾಮೀಜಿಯವರ ಸಾನಿಧ್ಯದಲ್ಲಿ ಜರುಗುವ ಸಮಾರಂಭದ ಮಹಾಮಂಟಪಕ್ಕೆ ಲಿ.ಜಗದ್ಗುರು ಶ್ರೀ ಪುಣ್ಯಾನಂದಪುರಿ ಸ್ವಾಮೀಜಿ ಹೆಸರನ್ನಿಡಲಾಗಿದೆ. ಫೆ.1ರ ಬೆಳಗ್ಗೆ 10.30ಕ್ಕೆ ಶ್ರೀಗಳ ಸಾನಿಧ್ಯದಲ್ಲಿ ಹಂದರ ಕಂಬ ಪೂಜೆ ನೆರವೇರಲಿದೆ. ಫೆ.8 ರಂದು ಬೆಳಗ್ಗೆ 10ಕ್ಕೆ ಸರ್ವಧರ್ಮ ಸಾಮೂಹಿಕ ವಿವಾಹ ಏರ್ಪಡಿಸಲಾಗಿದೆ ಎಂದರು.
ಅಂದು ಬೆಳಗ್ಗೆ 8.30ಕ್ಕೆ ರಾಜನಹಳ್ಳಿ ಗ್ರಾಮದಿಂದ ವಾಲ್ಮೀಕಿ ಅವರ ಭಾವಚಿತ್ರದ ಮೆರವಣಿಗೆ ನಂತರ ಮಧ್ಯಾಹ್ನ 12ಕ್ಕೆ ಮಾತೆ ಶಬರಿ ಮಹಿಳಾ ಜಾಗೃತಿ ಸಮಾವೇಶ ಮತ್ತು 3ಕ್ಕೆ ವಾಲ್ಮೀಕಿ ನೌಕರರ ಸಮಾವೇಶ ನಡೆಯಲಿದೆ. ಅಂದು ಸಂಜೆ 5ಕ್ಕೆ ಚಿಂತನ-ಮಂಥನ ಜರುಗಲಿದೆ. ಬಳಿಕ ಸಂಜೆ 7ಕ್ಕೆ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಿಂದ ರಾಷ್ಟ್ರ ಮಟ್ಟದ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿದೆ. ರಾತ್ರಿ 11 ಕ್ಕೆ ಸಂಪೂರ್ಣ ರಾಮಾಯಣ ನಾಟಕ ಪ್ರದರ್ಶನವಿದೆ ಎಂದರು.

ಫೆ.9 ರ ಬೆಳಗ್ಗೆ ಧರ್ಮಗುರುಗಳಿಂದ ಧಾರ್ಮಿಕ ಸಭೆ ನಂತರ 12ಕ್ಕೆ ವಾಲ್ಮೀಕಿ ಜಾತ್ರಾ ಸಮಿತಿ ಅಧ್ಯಕ್ಷರು ಹಾಗೂ ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅಧ್ಯಕ್ಷತೆಯಲ್ಲಿ ಜರುಗಲಿದೆ.
ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಡಿಸಿಎಂ ಗೋವಿಂದ ಕಾರಜೋಳ, ಅಶ್ವಥ್ ನಾರಾಯಣ, ಸಚಿವ ಬಿ.ಶ್ರೀರಾಮುಲು ಆಗಮಿಸಲಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಚಿತ್ರ ನಟರಾದ ಸುದೀಪ್, ಶಶಿಕುಮಾರ್ ಆಗಮಿಸಲಿದ್ದಾರೆ.
ವಾಲ್ಮೀಕಿ ಜಾತ್ರೆ ಅಂಗವಾಗಿ ಫೆ.5 ರಿಂದ 7ರವರೆಗೆ ಹರಿಹರದಲ್ಲಿ ರಾಜ್ಯ ಮಟ್ಟದ ಕ್ರಿಕೆಟ್ ಟೂರ್ನಿ ಮತ್ತು ಫೆ.4 ರಂದು ಮಲೆಬೆನ್ನೂರಿನಿಂದ ಹರಿಹರ ಮಾರ್ಗವಾಗಿ ರಾಜನಹಳ್ಳಿಯವರೆಗೆ ಬೈಕ್ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಎ.ಬಿ ರಾಮಚಂದ್ರಪ್ಪ, ಜಿಗಳಿ ಪ್ರಕಾಶ್, ರಘು ದೊಡ್ಡಮನಿ ಇದ್ದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications