Get Updates
Get notified of breaking news, exclusive insights, and must-see stories!

Vande Bharat Express: ಇತ್ತೀಚೆಗಷ್ಟೇ ಆರಂಭಗೊಂಡಿದ್ದ ಧಾರವಾಡ-ಬೆಂಗಳೂರು ವಂದೇ ಭಾರತ್‌ ರೈಲಿಗೆ ಕಲ್ಲು ತೂರಾಟ, ಎಲ್ಲಿ?

ದಾವಣಗೆರೆ, ಜುಲೈ, 02: ಶನಿವಾರ (ಜುಲೈ 01) ಕಿಡಿಗೇಡಿಗಳು ವೇಗವಾಗಿ ಚಲಿಸುತ್ತಿದ್ದ ವಂದೇ ಭಾರತ್‌ ರೈಲಿಗೆ ಕಲ್ಲು ತೂರಿದ ಘಟನೆ ದಾವಣಗೆರೆಯ ಹರಿಹರ ರಸ್ತೆಯಲ್ಲಿರುವ ಜಿಎಂಐಟಿ ಕಾಲೇಜು ಹಿಂಭಾಗ ನಡೆದಿದೆ. ಪರಿಣಾಮ ವಂದೇ ಭಾರತ್‌ ರೈಲಿನ ಕಿಟಕಿ ಗಾಜು ಜಖಂಗೊಂಡಿದೆ. ಸದ್ಯ ಘಟನೆಯಲ್ಲಿ ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ.

ದಾವಣಗೆರೆ ಹೊರವಯಲದಲ್ಲಿರುವ ಜಿಎಂಐಟಿ ಕಾಲೇಜಿನ ಹಿಂಭಾಗ ಶನಿವಾರ ಕೆಲವು ಕಿಡಿಗೇಡಿಗಳು ಚಲಿಸುತ್ತಿದ್ದ ವಂದೇ ಭಾರತ್‌ ರೈಲಿಗೆ ಕಲ್ಲು ತೂರಾಟ ನಡೆಸಿದ್ದು, ಇದರ ಪರಿಣಾಮ ವಂದೇ ಭಾರತ್ ಎಕ್ಸ್‌ಪ್ರೆಸ್‌ನ ಕಿಟಕಿಯ ಗಾಜು ಜಖಂಗೊಂಡಿದೆ. ಈ ರೈಲು ಧಾರವಾಡದಿಂದ ಬೆಂಗಳೂರು ಕಡೆಗೆ ಸಂಚರಿಸುವಾಗ ಈ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.

Vande Bharat Express: Stone pelting on Dharwad-Bangaluru Vande Bharat Express train near Davangere

ನೈಋತ್ಯ ರೈಲ್ವೆಯ ಅಧಿಕಾರಿಗಳು ಈ ಘಟನೆಯನ್ನು ಆರ್‌ಪಿಎಫ್ ಸಿಬ್ಬಂದಿಗೆ ವರದಿ ಮಾಡಿದ್ದಾರೆ ಮತ್ತು ಘಟನೆಯ ಬಗ್ಗೆ ತನಿಖೆಗೆ ಸೂಚಿಸಿದ್ದಾರೆ. ದಾವಣಗೆರೆಯ ಜಿಎಂಐಟಿ ಕಾಲೇಜು ಬಳಿ ಘಟನೆ ನಡೆದಿದ್ದು, ಸಿ4 ಕೋಚ್‌ನ ಕಿಟಕಿಯ ಹಲಗೆಗೆ ಹಾನಿಯಾಗಿದೆ ಎಂದು ಎಸ್‌ಡಬ್ಲ್ಯೂಆರ್ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ತಿಳಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ವಂದೇ ಭಾರತ್‌ ರೈಲಿಗೆ ಸಿಲುಕಿ ಹಸು ಸಾವು

ಉತ್ತರ ಕರ್ನಾಟಕ ಭಾಗದ ಬಹುನಿರೀಕ್ಷಿತ ವಂದೇ ಭಾರತ್‌ ಎಕ್ಸ್‌ಪ್ರೆಸ್ ರೈಲಿಗೆ ಇತ್ತೀಚೆಗಷ್ಟೇ ವಿದ್ಯುಕ್ತವಾಗಿ ಚಾಲನೆ ದೊರೆತಿತ್ತು. ಈ ರೈಲು ಧಾರವಾಡದಿಂದ ಬೆಂಗಳೂರಿಗೆ ಸಂಚಾರ ಮಾಡುತ್ತಿದೆ. ಅಲ್ಲದೆ ಇದೇ ವಂದೇ ಭಾರತ್‌ ರೈಲಿಗೆ ಸಿಲುಕಿ ಧಾರವಾಡದಲ್ಲಿ ಮೊದಲ ಬಲಿಯಾದ ಘಟನೆಯೂ ನಡೆದಿತ್ತು.

ಕೆಲವು ದಿನಗಳ ಹಿಂದೆಯಷ್ಟೇ ಪ್ರಯಾಣ ಆರಂಭಿಸಿದ ವಂದೇ ಭಾರತ್‌ ರೈಲಿಗೆ ಹಸುವೊಂದು ಸಿಲುಕಿ ಸಾವನ್ನಪ್ಪಿದ ಘಟನೆ ಅರಸಿಕೇರೆ ವಲಯದಲ್ಲಿ ನಡೆದಿತ್ತು. ಆಹಾರ ಹುಡುಕುತ್ತ ಬಂದಿದ್ದ ಹಸು ರೈಲಿಗೆ ಸಿಲುಕಿ ಸಾವನ್ನಪ್ಪಿದೆ. ಇನ್ನು ಅಪಘಾತ ಸಂಭವಿಸುತ್ತದ್ದಂತೆಯೇ ರೈಲನ್ನು ನಿಲ್ಲಿಸಿ ರೈಲ್ವೆ ಹಳಿ ಮೇಲೆ ಬಿದ್ದಿದ್ದ ಮೃತ ಹಸುವನ್ನು ಟ್ರಾಕ್‌ನಿಂದ ಹೊರಗೆ ಹಾಕಲಾಗಿತ್ತು.

ಹಾಗೆಯೇ ವಂದೇ ಭಾರತ್‌ ಎಕ್ಸ್‌ಪ್ರೆಸ್ ರೈಲಿಗೆ ಸಿಲುಕಿ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಕೂಡ ನಡೆದಿತ್ತು. ವಾರಣಾಸಿಯಿಂದ ದೆಹಲಿಗೆ ಬರುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಡಿಕ್ಕಿ ಹೊಡೆದು ಒಬ್ಬ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದರು. ಫಿರೋಜಾಬಾದ್ ಜಿಲ್ಲೆಯ ಜಲೇಸರ್ ಪಟ್ಟಣ ಮತ್ತು ಪೋರಾ ಗ್ರಾಮದ ನಡುವೆ ತುಂಡ್ಲಾ ಬಳಿ ಘಟನೆ ನಡೆದಿದ್ದು, ಪ್ರಾಥಮಿಕ ಮಾಹಿತಿ ಪ್ರಕಾರ ರೈಲು ಬರುವ ವೇಳೆ ವ್ಯಕ್ತಿ ಅತಿಕ್ರಮ ಪ್ರವೇಶ ಮಾಡಿದ್ದರು ಎನ್ನಲಾಗಿತ್ತು.

Vande Bharat Express: Stone pelting on Dharwad-Bangaluru Vande Bharat Express train near Davangere

ಇನ್ನು ಧಾರವಾಡ- ಬೆಂಗಳೂರು ನಡುವೆ ಸಂಚರಿಸುವ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ಸೇರಿದಂತೆ 5 ರೈಲುಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನ ರಾಣಿ ಕಮಲಾಪತಿ ರೈಲು ನಿಲ್ದಾಣದಿಂದ ಚಾಲನೆ ನೀಡಿದ್ದರು.

ರಾಣಿ ಕಮಲಾಪತಿ-ಜಬಲ್‌ಪುರ ವಂದೇ ಭಾರತ್ ಎಕ್ಸ್‌ಪ್ರೆಸ್, ಖಜುರಾಹೊ-ಭೋಪಾಲ್-ಇಂದೋರ್ ವಂದೇ ಭಾರತ್ ಎಕ್ಸ್‌ಪ್ರೆಸ್, ಮಡಗಾಂವ್ (ಗೋವಾ)-ಮುಂಬೈ ವಂದೇ ಭಾರತ್ ಎಕ್ಸ್‌ಪ್ರೆಸ್, ಧಾರವಾಡ-ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ಮತ್ತು ಹಟಿಯಾ-ಪಾಟ್ನಾ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಚಾಲನೆ ನೀಡಿದ್ದರು.

ಅಲ್ಲದೆ ಕೋಚ್‌ಗೆ ಕಲ್ಲುಗಳು ತೂರಿಲ್ಲ. ಮತ್ತು ಘಟನೆಯಲ್ಲಿ ಯಾವುದೇ ಪ್ರಯಾಣಿಕರು ಗಾಯಗೊಂಡಿಲ್ಲ ಎಂದು ಅವರು ಹೇಳಿದರು. ಈಗಾಗಲೇ ಘಟನೆ ಸಂಬಂಧ ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+