ಕಾಳಿಕಾ ದೇವಿಗೆ ಅಪಮಾನ: 40ಕ್ಕೂ ಹೆಚ್ಚು ಸ್ವಾಮೀಜಿಗಳ ಆಕ್ರೋಶ
ದಾವಣಗೆರೆ, ಜುಲೈ 11: ವಿಶ್ವಕರ್ಮ ಸಮಾಜದ ಆರಾಧ್ಯ ದೈವ ಕಾಳಿಕಾದೇವಿಗೆ ಅಪಚಾರ ಮಾಡಲಾಗಿದೆ. ಈ ಕೃತ್ಯದಿಂದ ಜಗತ್ತಿನಾದ್ಯಂತ ಕಾಳಿಕಾದೇವಿ ಆರಾಧಕರಿಗೆ ನೋವಾಗಿದೆ. ಈ ನಿಟ್ಟಿನಲ್ಲಿ ಇಂದು ಕಾಳಿಕಾದೇವಿ ವಿಕೃತ ರೂಪ ನೀಡಿದವರಿಗೆ ಧಿಕ್ಕಾರ ಹಾಕುತ್ತೇವೆ ಎಂದು ಸ್ವಾಮೀಜಿ ಹೇಳಿದರು.
ವಿಶ್ವಕರ್ಮ ಮಠಾಧೀಶರಷ್ಟೇ ಅಲ್ಲ ಸನಾತನ ಧರ್ಮದ ಮಠಾಧಿಪತಿಗಳು ಹಾಗೂ ಗುರುಹಿರಿಯರು ಖಂಡಿಸುತ್ತೇವೆ. ಮುಂದಿನ ಹೋರಾಟದ ಬಗ್ಗೆ ಯೋಜನೆ ರೂಪಿಸಿದ್ದೇವೆ ಎಂದು ಹಾಸನ ಜಿಲ್ಲೆ ಅರೆಮಾದನಹಳ್ಳಿ ವಿಭೂಷಿತ ಶಿವಸುಜ್ಞಾನತೀರ್ಥ ಸ್ವಾಮೀಜಿ ತಿಳಿಸಿದರು.
ವಿಶ್ವ ಕರ್ಮ ಸಮಾಜದ ಸಮಾವೇಶದ ಪ್ರಯುಕ್ತ ಸುಮಾರು 40ಕ್ಕೂ ಹೆಚ್ಚು ವಿವಿಧ ಮಠಗಳ ಸ್ವಾಮೀಜಿಗಳು ದಾವಣಗೆರೆ ಜಯದೇವ ವೃತ್ತದಲ್ಲಿ ಏರ್ಪಡಿಸಿದ್ದ ಪಾದಯಾತ್ರೆಯ ಉದ್ಘಾಟನೆ ವೇಳೆ ಅವರು ಮಾತನಾಡಿದರು.

ಕಾಳಿಕಾ ಮಾತೆಗೆ ಅವಮಾನ ಮಾಡಿದವರಿಗೆ ಶಿಕ್ಷೆ ಆಗಲೇಬೇಕು. ದೇಶದ ಸನಾನತನ ಪರಂಪರೆಯಲ್ಲಿ ಆದಿಶಕ್ತಿಯಾದ ಕಾಳಿಕಾದೇವಿಗೆ ಹಿರಿದಾದ ಮಹತ್ವವಿದೆ. ಗುರು ಹಿರಿಯರು, ಋಷಿಮುನಿಗಳು ಸಾಧು ಸಂತರು ದೇವಿಗೆ ಅಪಾರ ಮಹತ್ವ ನೀಡಿದ್ದಾರೆ. ಅಂತಹ ದೇವಿಯನ್ನು ಇಂದು ಪ್ರತ್ಯೇಕವಾಗಿ ವಿಕೃತ ರೂಪದಲ್ಲಿ ಪ್ರದರ್ಶನ ನೀಡಿರುವುದು ಖಂಡನೀಯ ಎಂದರು.
ದಾವಣಗೆರೆಯಲ್ಲಿ ನಡೆಯುವ ಸಮಾವೇಶದಲ್ಲಿ ವಿಶ್ವಕರ್ಮ ಸಮಾಜದ ಮಠಾಧಿಪತಿಗಳ ಒಕ್ಕೂಟದಿಂದ ಇದನ್ನು ಖಂಡಿಸಿ, ಮುಂದಿನ ನಿರ್ಣಯ ಕೈಗೊಳ್ಳಲಾಗುವುದು. ಹಿಂದೂ ದೇವರಿಗೆ ಅಪಚಾರ ಮಾಡದರೆ ಸಹಿಸಲಾಗದು. ಕಾಳಿಕಾ ದೇವಿಗೆ ಅಪಮಾನ ಮಾಡಿದವರು ಈ ಕೂಡಲೇ ಕ್ಷಮಾಪಣೆ ಕೇಳಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ನಮ್ಮ ಸಮಾಜದ ಎಲ್ಲಾ ಮಠಾಧೀಶರು ಒಟ್ಟಾಗಿದ್ದೇವೆ. ಪ್ರತ್ಯೇಕ ಮಠದ ಅವಶ್ಯಕತೆ ಇಲ್ಲ. ಪರಂಪರೆಯಿಂದ ಬಂದ ಮಠ ನಮ್ಮದು. ಆದ್ದರಿಂದ ಪ್ರತ್ಯೇಕತೆಯ ಪ್ರಶ್ನೆಯೇ ಇಲ್ಲ ಎಂದರು.

ವಿಶ್ವಕರ್ಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುಪತ್ತಾರ್ ಮಾತನಾಡಿ ದಾವಣಗೆರೆಯ ಸಮಾವೇಶದಲ್ಲಿ ಸುಮಾರು 67 ಮಠಾಧೀಶರು ಸೇರಿದ್ದೇವೆ. ಸಾಧುಸಂತರ ಸಮಾವೇಶ ಹಮ್ಮಿಕೊಂಡಿದ್ದೇವೆ. ಜಗತ್ತಿನಲ್ಲೇ ಕಾಳಿಕಾದೇವಿ ಆರಾಧಕರಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಕಾಳಿಕಾದೇವಿಗೆ ಅಪಮಾನ ಮಾಡಲಾಗಿದೆ. ಇದು ಖಂಡನೀಯ ಎಂದರು.
ಕೊರೊನಾ ಹೋಗಿಸಲು ಕಾಳಿಕಾದೇವಿಯ ಆರಾಧನೆ ಮಾಡಿದ ಸಮಾಜ ನಮ್ಮದು. ಅಂತಹ ಮಾತೆಗೆ ಅಪಮಾನ ಮಾಡಿರುವುದು ಸರಿಯಲ್ಲ. ಹಿಂದೂ ದೇವಿಗಳಿಗೆ ಅಪಮಾನ ಮಾಡುವುದು ಖಂಡನೀಯ. ನಿರ್ದೇಶಕಿ ಲೀನಾ ಅವರ ಚಿತ್ರ ತಡೆಯುವಂತೆ ಸಂಬಂಧಪಟ್ಟವರಿಗೆ ಒತ್ತಾಯಿಸಿದ್ದೇವೆ.
ಈ ಬಗ್ಗೆ ದೇಶಾದ್ಯಂತ ಸಮಾಜ ಬಾಂಧವರು ಕಾರ್ಯಪ್ರವೃತ್ತರಾಗಿದ್ದಾರೆ. ಕ್ರಮಕ್ಕೆ ಒತ್ತಾಯಿಸಿ ಎಲ್ಲಾ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದೇವೆ. ಬೆಂಗಳೂರಿನಲ್ಲಿಯೂ ಹೋರಾಟ ಮಾಡಲಾಗುವುದು ಎಂದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್












Click it and Unblock the Notifications