SPಗೆ ಅಲ್ಲ, ನಾವ್ ಏನಿದ್ರೂ DGಗೇ ದೂರು ಕೊಡೋದು: ಎಂ.ಪಿ.ರೇಣುಕಾಚಾರ್ಯ ಹೀಗೆ ಗುಡುಗಿದ್ಯಾಕೆ?
ದಾವಣಗೆರೆ, ನವೆಂಬರ್, 21: ನಾನು ಎಸ್ಪಿ ಗಿಸ್ಪಿಗೆ ದೂರು ಕೊಡಲ್ಲ. ಡಿಜಿಗೆ ಹೋಗಿ ಕೇಸ್ ಕೊಡುತ್ತೇನೆ ಎಂದು ಹೇಳುವ ಮೂಲಕ ಮಾಜಿ ಸಚಿವ ಹಾಗೂ ಹೊನ್ನಾಳಿ ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರು ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿರುದ್ಧ ಗುಡುಗಿದ್ದಾರೆ.
ದಾವಣಗೆರೆ ಜಿಲ್ಲೆ ಹೊನ್ನಾಳಿಯ ಹಿರೇಕಲ್ಮಠ ಸಮೀಪದ ತನ್ನ ನಿವಾಸದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹೊನ್ನಾಳಿ ತಾಲೂಕಿನಲ್ಲಿ ಮಟ್ಕಾ, ಇಸ್ಪೀಟ್ ಅಡ್ಡೆಗಳು ಜಾಸ್ತಿ ಆಗುತ್ತಿವೆ. ಮಹಿಳೆಯರ ಮಾಂಗಲ್ಯ ಸರ ಉಳಿಯುವ ಲಕ್ಷಣ ಗೋಚರಿಸುತ್ತಿಲ್ಲ. ಆದಷ್ಟು ಬೇಗ ಎಸ್ಪಿ ಉಮಾ ಪ್ರಶಾಂತ್ ಅವರು ಕಡಿವಾಣ ಹಾಕಬೇಕು. ಇಲ್ಲದಿದ್ದರೆ, ಎಸ್ಪಿ ಗಿಸ್ಪಿಗೆ ಕಂಪ್ಲೆಂಟ್ ಕೊಡಲ್ಲ. ಸೀದಾ ಡಿಜಿಗೆ ಹೋಗಿ ಕೇಸ್ ಕೊಡುತ್ತೇನೆ ಎಂದು ಹೇಳಿದರು.
ಈ ಹಿಂದೆ ಎಸ್ಪಿ ರಿಷ್ಯಂತ್ ಅವರು ಬಂದಾಗ ಅಕ್ರಮ ಮರಳು ದಂಧೆಕೋರರ ವಿರುದ್ಧ ಕ್ರಮ ಕೈಗೊಂಡಾಗ ರೇಣುಕಾಚಾರ್ಯ ಎಸ್ಪಿ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದರು. ಆಗ ಬಿಜೆಪಿ ಸರ್ಕಾರವೇ ಅಧಿಕಾರದಲ್ಲಿತ್ತು. ಎಸ್ಪಿ ಅವರು ಅಕ್ರಮ ಮರಳುಗಾರಿಕೆಗೆ ಕಡಿವಾಣ ಹಾಕಿದ್ದರು. ಆಗಲೂ ಎಸ್ಪಿ ವಿರುದ್ಧ ಕೆಂಡಕಾರಿದ್ದ ರೇಣುಕಾಚಾರ್ಯ ವಿರುದ್ಧ ಆಕ್ರೋಶ ಭುಗಿಲೆದ್ದಿತ್ತು. ಮತ್ತೆ ಈಗ ಎಸ್ಪಿ ಗಿಸ್ಪಿಗೆ ಕೊಡಲ್ಲ, ನಾನು ಡಿಜಿಗೆ ಕೊಡುತ್ತೇನೆ ಎಂದು ಹೇಳುವ ಮೂಲಕ ಎಸ್ಪಿ ಕಾರ್ಯವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.
ಲೋಕಸಭೆ, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ವಿಚಾರದಲ್ಲಿ ರಾಜಕಾರಣ ಮಾಡುತ್ತೇನೆ. ಬಡವರ ವಿಷಯದಲ್ಲಿ ಮಾಡುವುದಿಲ್ಲ. ಕಡಿಮೆ ದರಕ್ಕೆ ಮರಳು ಸಿಗಬೇಕು. ಇದು ನಮ್ಮ ಉದ್ದೇಶ. ಮಟ್ಕಾ, ಇಸ್ಪೀಟ್ ಅಡ್ಡೆಗಳು ಜಾಸ್ತಿಯಾಗುತ್ತಿವೆ. ಈ ಬಗ್ಗೆ ಪೊಲೀಸ್ ವರಿಷ್ಠಾಧಿಕಾರಿಗಳು ಗಮನ ಹರಿಸಬೇಕು. ಬೆಕ್ಕು ಕಣ್ಣು ಮುಚ್ಚಿ ಹಾಲು ಕುಡಿದರೆ ಗೊತ್ತಾಗುವುದಿಲ್ವಾ? ಓಸಿ, ಇಸ್ಪೀಟ್ ಇದೇ ರೀತಿಯಲ್ಲಿ ಮುಂದುವರೆದರೆ, ಕಡಿಮೆ ದರಕ್ಕೆ ಮರಳು ಸಿಗದಿದ್ದರೆ ಹೋರಾಟ ನಡೆಸುತ್ತೇನೆ ಎಂದು ಎಚ್ಚರಿಕೆ ನೀಡಿದರು.

ನಮ್ಮ ಸರ್ಕಾರದ ಅವಧಿಯಲ್ಲಿ ಪಕ್ಷಾತೀತವಾಗಿ ಕಡಿಮೆ ದರಕ್ಕೆ ಮರಳ ಸಿಗುತ್ತಿತ್ತು. ಈಗ 10 ಸಾವಿರಕ್ಕೂ ಒಂದು ಲೋಡ್ ಮರಳು ಸಿಕ್ತಾ ಇಲ್ಲ. ಕಳೆದ 15-20 ದಿನಗಳಿಂದ ಮರಳಿನ ದಂಧೆ ಆರಂಭವಾಗಿದೆ. ಪಕ್ಷಾತೀತವಾಗಿ ಎಲ್ಲರಿಗೂ ಕಡಿಮೆ ದರಕ್ಕೆ ಮರಳ ಸಿಗಬೇಕು. ಮುಕ್ತವಾಗಿ ಕಡಿಮೆ ದರಕ್ಕೆ ಮರಳು ಸಿಗಬೇಕು. ಪೊಲೀಸರು, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು, ಎಸಿ ಅವರಿಗೂ ಹೇಳಿದ್ದೇನೆ. ಕಡಿಮೆ ದರ ನಿಗದಿಪಡಿಸುವಂತೆ ಹೇಳಿದ್ದೇನೆ ಎಂದರು.
ವಿನಾಃ ಕಾರಣ ನನ್ನ ಮೇಲೆ ಅಪಪ್ರಚಾರ ಮಾಡುತ್ತಿದ್ದಾರೆ. ಇಲ್ಲಿ ಸೀಜಾದ ಮರಳು ಹೊಸದುರ್ಗಕ್ಕೆ ಕಳುಹಿಸಲಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿದರು. ನಾನು ಮೌನವಾಗಿ ಇರೋದು ದೌರ್ಬಲ್ಯ ಅಲ್ಲ. ಮುಕ್ತವಾಗಿ ಪಕ್ಷಾತೀತವಾಗಿ ಬಡವರಿಗೆ ಕಡಿಮೆ ದರಕ್ಕೆ ಮರಳು ಸಿಗಬೇಕು. ಮರಳಿನ ವಿಚಾರವಾಗಿ ಭ್ರಷ್ಟಾಚಾರ ಮಾಡಿದರೆ ಉಗ್ರ ಹೋರಾಟ ಮಾಡುತ್ತೇನೆ. ಹೊನ್ನಾಳಿ ನಗರದಲ್ಲಿ ಓಸಿ, ಇಸ್ಪೀಟ್ ಜಾಸ್ತಿಯಾಗಿದ್ದು, ಪೊಲೀಸರು ಕಡಿವಾಣ ಹಾಕಬೇಕು. ಇಲ್ಲದೇ ಇದ್ದರೇ ಡಿಜಿ ಅವರಿಗೆ ಕಂಪ್ಲೇಂಟ್ ಮಾಡುತ್ತೇನೆ ಎಂದು ಎಚ್ಚರಿಕೆ ನೀಡಿದರು. ಈ ಸಂದರ್ಭದಲ್ಲಿ ಬಿಜೆಪಿ ತಾಲೂಕು ಅಧ್ಯಕ್ಷರು ಸೇರಿದಂತೆ ಇತರರು ಹಾಜರಿದ್ದರು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications