Get Updates
Get notified of breaking news, exclusive insights, and must-see stories!

ಮಹಿಳೆಯರು ಅಡುಗೆ ಮಾಡಲು ಲಾಯಕ್ ಎಂಬ ಮಾವ ಶಾಮನೂರು ಶಿವಶಂಕರಪ್ಪ ಹೇಳಿಕೆಗೆ ಸೊಸೆ ಪ್ರಭಾ ಮಲ್ಲಿಕಾರ್ಜುನ್‌ ಹೇಳಿದ್ದೇನು?

ದಾವಣಗೆರೆ, ಏಪ್ರಿಲ್‌, 01: ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್‌ ಅವರು ಹೊನ್ನಾಳಿ ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಚಾರದಲ್ಲಿ ಮತಯಾಚನೆ ಮಾಡುವಾಗ ಕಳೆದ 25 ವರ್ಷಳಿಂದ ಒಂದೇ ಅಭ್ಯರ್ಥಿಗೆ ಮತ ಹಾಕುತ್ತಿದ್ದೀರಿ, ಅವರು ಜಿಲ್ಲೆ ಅಭಿವೃದ್ಧಿಗೆ ಏನು ಮಾಡಿದ್ದಾರೆ ಎಂದು ಕೇಳಿದ್ದಾರೆ. ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ, ಎಸ್.ಎಸ್.ಮಲ್ಲಿಕಾರ್ಜುನ್ ಅವರು ಜಿಲ್ಲೆಗೆ ಕೊಟ್ಟಿರುವ ಕೊಡುಗೆ ಏನು ಎಂದು ಜಿಲ್ಲಾ ಬಿಜೆಪಿ ಪ್ರಶ್ನಿಸಿದೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಎನ್.ರಾಜಶೇಖರ್ ನಾಗಪ್ಪ ಅವರು, ದಾವಣಗೆರೆ ಜಿಲ್ಲೆಗೆ ನಿಮ್ಮ ಕುಟುಂಬದವರ ಕುರಿತು ಕೇಳುತ್ತಿದ್ದೇವೆ. ಕಳೆದ 20 ವರ್ಷಗಳಿಂದ ದಾವಣಗೆರೆ ನಗರ ಹಾಗೂ ದಕ್ಷಿಣ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುವ ನಿಮ್ಮ ಮಾವ ಶಾಮನೂರು ಶಿವಶಂಕರಪ್ಪನವರಿಗೆ ಈ ಕ್ಷೇತ್ರದ ಮತದಾರರು ಮತ ನೀಡಿದ್ದಾರೆ. ದಾವಣಗೆರೆಗೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ನಿಮ್ಮ ಕುಟುಂಬದ ಕೊಡುಗೆ ಏನು? ಪ್ರತಿ ಚುನಾವಣೆಯಲ್ಲಿ ಅಲ್ಪಸಂಖ್ಯಾತರು ಬಹಿರಂಗವಾಗಿ ಈ ಬಗ್ಗೆ ಪ್ರಶ್ನೆ ಮಾಡುತ್ತಿದ್ದಾರೆ. ಮೊದಲು ಅವರ ಪ್ರಶ್ನೆಗೆ ಉತ್ತರ ಕೊಡಿ ಎಂದು ಹೇಳಿದರು.

What was Shamanur Shivashankarappa s contribution to Davanagere

ಪ್ರಭಾ ಮಲ್ಲಿಕಾರ್ಜುನ್ ಅವರ ಪತಿ ಈ ಬಾರಿ ಒಂದು ವರ್ಷ ಸೇರಿ ಒಟ್ಟು 8 ವರ್ಷ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದವರು. ದಾವಣಗೆರೆ ಜಿಲ್ಲೆಯ ಎಷ್ಟು ಹಳ್ಳಿಗಳಿಗೆ ಭೇಟಿ ನೀಡಿದ್ದಾರೆ? ಮೊದಲು ಪಟ್ಟಿ ಕೊಡಿ. ಗ್ರಾಮಾಂತರ ಭಾಗದಲ್ಲಿ ಯಾವ ಹಳ್ಳಿಗಳಿಗೆ ಅನುದಾನ ನೀಡಿದ್ದಾರೆ ಎನ್ನುವುದನ್ನು ಮೊದಲು ಲೆಕ್ಕ ಕೊಡಿ ಎಂದರು.

8 ವರ್ಷ ಉಸ್ತುವಾರಿ ಸಚಿವರಾಗಿ ಯಾವ ಹಳ್ಳಿಗೆ ಹೋಗಿದ್ದಾರೆ ಎಂಬುದನ್ನು ಮೊದಲು ತಿಳಿಸಿ. ಸಂಸದರಾಗಿ ಕಳೆದ 20 ವರ್ಷಗಳಲ್ಲಿ ಜಿ.ಎಂ.ಸಿದ್ದೇಶ್ವರ ಅವರು 1,300 ಹಳ್ಳಿಗಳಿಗೆ ಎಷ್ಟು ಬಾರಿ ಭೇಟಿ ನೀಡಿದ್ದಾರೆ ಅನ್ನೋದನ್ನು ನಾವು ಪಟ್ಟಿ ಕೊಡ್ತೀವಿ. ಎಷ್ಟು ಅನುದಾನ ಕೊಟ್ಟಿದ್ದಾರೆ ಅನ್ನುವ ಲೆಕ್ಕ ಕೊಡ್ತೀವಿ ಎಂದು ಸವಾಲು ಹಾಕಿದರು.

ಪ್ರಭಾ ಮಲ್ಲಿಕಾರ್ಜುನ್ ಅವರು ಲೆಕ್ಕ ಕೊಡಲು ಸಿದ್ಧರಿದ್ದೀರಾ? ನಿಮ್ಮ ಶಾಸಕರ ಪರವಾಗಿ ವಿಧಾನಸಭಾ ಚುನಾವಣೆಗಳಲ್ಲಿ ಎಲ್ಲೆಲ್ಲಿ ಪ್ರಚಾರ ಮಾಡಿದ್ದಾರೆ ಅನ್ನೋದರ ಬಗ್ಗೆ ಮಾತನಾಡಿ. ದಾವಣಗೆರೆ ಈ ದಿನ ಸುಂದರವಾಗಿ ಕಾಣುತ್ತಿರುವುದು ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಮಹಾನಗರ ಪಾಲಿಕೆಗೆ ಪ್ರತಿ ವರ್ಷ 100 ಕೋಟಿಯಂತೆ ಮೂರು ವರ್ಷದಂತೆ ಒಟ್ಟು 300 ಕೋಟಿ ರೂಪಾಯಿ ಅನುದಾನ ಬಂದಿತ್ತು ಎಂದರು.

ಕೇಂದ್ರ ಸರ್ಕಾರದಿಂದ ಬಂದ ಯುಐಡಿಎಸ್‌ಎಸ್ಎಂಟಿ ಯೋಜನೆಯಿಂದ ಬಂದ 88 ಕೋಟಿ ಅನುದಾನದಿಂದ. ಸ್ಮಾರ್ಟ್ ಸಿಟಿ ಯೋಜನೆಯಡಿ ಬಂದ 1,070 ಕೋಟಿ ರೂಪಾಯಿ ಅನುದಾನದಿಂದ. ದಾವಣಗೆರೆ ನಗರಕ್ಕೆ ನಿಮ್ಮ ಕೊಡುಗೆ ಏನು ಎಂಬುದನ್ನು ಮೊದಲು ದಾವಣಗೆರೆ ನಗರದ ಜನತೆಗೆ ತಿಳಿಸಿ ಎಂದು ಹೇಳಿದರು.

ಶಾಮನೂರು ಶಿವಶಂಕರಪ್ಪ ಹಾಗೂ ಎಸ್.ಎಸ್.ಮಲ್ಲಿಕಾರ್ಜುನ್ ಅವರ ಕೊಡುಗೆ ಶೂನ್ಯ. ಇನ್ನು ವಿಮಾನ ನಿಲ್ದಾಣದ ಬಗ್ಗೆ ಪ್ರಸ್ತಾಪ ಮಾಡಿದ್ದೀರಿ. ನಾವು ಈಗಾಗಲೇ ಸರ್ವೆ ಮಾಡಿಸಿ, ಅಗತ್ಯ ಜಮೀನು ಗುರುತಿಸಿ ಏರ್‌ಪೋರ್ಟ್ ಅಥಾರಿಟಿಯಿಂದ ಅನುಮತಿ ಪಡೆಯುವ ಪ್ರಯತ್ನ ಮಾಡಿದ್ದೇವೆ. ಅಗತ್ಯ ಜಮೀನು ಭೂಸ್ವಾಧೀನಕ್ಕಾಗಿ 142 ಕೋಟಿ ರೂಪಾಯಿ ಬೇಕಾಗಿದೆ ಎಂದು ರಾಜ್ಯ ಸರ್ಕಾರಕ್ಕೆ ವರದಿಯನ್ನೂ ಸಹ ನೀಡಿದ್ದೇವೆ ಎಂದರು.

ಮೊದಲು ಜಮೀನು ಭೂಸ್ವಾಧೀನಕ್ಕೆ ಬೇಕಾಗಿರುವ ಹಣವನ್ನು ರಾಜ್ಯ ಸರ್ಕಾರದಿಂದ ಕೊಡಿಸುವ ಕೆಲಸ ಮಾಡಿ. ನಮ್ಮ ಅಭ್ಯರ್ಥಿ ಕುರಿತು ನಿಮ್ಮ ಮಾವನವರು ಮಹಿಳೆಯರು ಅಡುಗೆ ಮಾಡಲು ಲಾಯಕ್ ಎಂಬ ಹೇಳಿಕೆ ನೀಡಿದ್ದು, ಈ ಬಗ್ಗೆ ನಿಮ್ಮ ಪ್ರತಿಕ್ರಿಯೆ ಏನೆಂಬುದನ್ನು ಮೊದಲು ಜನರಿಗೆ ತಿಳಿಸಿ ಎಂದರು.

ನಿಮ್ಮ ಮಾವನವರ ಹೇಳಿಕೆಯನ್ನು ಸಮರ್ಥಿಸಿಕೊಳ್ಳಿ. ಇಲ್ಲದಿದ್ದರೆ ಹೇಳಿಕೆ ನೀಡಿದ್ದು ತಪ್ಪು ಎಂದಾದರೂ ಹೇಳಿ. ಇದನ್ನು ಬಿಟ್ಟು ಜನರನ್ನು ದಿಕ್ಕು ತಪ್ಪಿಸುವ ಹೇಳಿಕೆ ನೀಡುವ ಮೂಲಕ ಪಲಾಯನ ಮಾಡುತ್ತಿದ್ದೀರಿ. ಜನ ನಿಮ್ಮನ್ನು ನಂಬುವುದಾದರೂ ಹೇಗೆ? ಎಂದು ಪ್ರಶ್ನಿಸಿದರು.

ಗೋಷ್ಠಿಯಲ್ಲಿ ದೂಡಾ ಮಾಜಿ ಅಧ್ಯಕ್ಷ ಎ.ವೈ.ಪ್ರಕಾಶ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಧನಂಜಯ ಕಡ್ಲೇಬಾಳು, ಸತೀಶ್ ಕೊಳೇನಹಳ್ಳಿ, ಹೆಚ್.ಪಿ.ವಿಶ್ವಾಸ್ ಸೇರಿದಂತೆ ಮತ್ತಿತರರು ಹಾಜರಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+