ಅರೇ... ಹೆಂಡತಿ, ಗಂಡನನ್ನೇ ಯಾಕೆ ಕಿಡ್ನಾಪ್ ಮಾಡಿಸುತಿ?
ದಾವಣಗೆರೆ, ನವೆಂಬರ್ 29: ಮಹಿಳೆಯೊಬ್ಬಳು ಆರು ಮಂದಿ ಯುವಕರ ಜೊತೆ ಸೇರಿ ತನ್ನ ಗಂಡನನ್ನೇ ಕಿಡ್ನಾಪ್ ಮಾಡಿಸಿದ ಘಟನೆ ದಾವಣಗೆರೆಯಲ್ಲಿ ನಡೆದಿದೆ.
ದಾವಣಗೆರೆ ತಾಲೂಕು ಲೋಕಿಕೆರೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸಂಗೀತಾ ಎಂಬಾಕೆ ಈಗ ಹದಡಿ ಪೊಲೀಸರ ಅತಿಥಿಯಾಗಿದ್ದಾಳೆ. ಕಳೆದ ಎರಡು ವರ್ಷಗಳಿಂದ ಪತಿ-ಪತ್ನಿ ದೂರ ಇದ್ದು, ಹಣದ ಆಸೆಗೆ ಈಕೆ ಗಂಡನನ್ನು ಯುವಕರ ಜೊತೆ ಸೇರಿ ಕಿಡ್ನಾಪ್ ಮಾಡಿಸಿದ್ದಾಳೆ.
ಶ್ರೀನಿವಾಸ್ ಅಪಹರಣಕ್ಕೊಳಗಾಗಿದ್ದ ಪತಿ. ಪತ್ನಿ ಸಂಗೀತಾಳ ನಡವಳಿಕೆ ಸರಿ ಇಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ ಶ್ರೀನಿವಾಸ್ ಸಂಗೀತಾಳಿಂದ ದೂರವಿದ್ದು, ಜಮೀನು ಹಾಗೂ ಪೆಟ್ರೋಲ್ ಬಂಕ್ ಕೆಲಸ ನೋಡಿಕೊಂಡಿದ್ದರು. ಗಂಡನಿಂದ ದೂರವಿದ್ದ ಸಂಗೀತ ಕೆಲ ದಿನಗಳ ಹಿಂದೆ ಪಿಎಸ್ಐ ಒಬ್ಬರ ಜೊತೆ ಗಲಾಟೆ ಮಾಡಿಕೊಂಡು ವಿಷವನ್ನು ಕುಡಿಸಿದ್ದರು ಎಂದು ಹೇಳಿ ಮಹಿಳಾ ಪೊಲೀಸ್ ಠಾಣೆಯ ಮೆಟ್ಟಿಲನ್ನು ಕೂಡ ಏರಿದ್ದರು.

ಆದರೆ ಈಗ ಹಣದ ಅವಶ್ಯಕತೆ ಹಿನ್ನೆಲೆಯಲ್ಲಿ ಎರಡು ದಿನಗಳ ಹಿಂದೆ ಸಂಗೀತಾ ಹಾಗೂ 6 ಜನ ಸಹಚರರು ಸೇರಿ ಶ್ರೀನಿವಾಸ್ನನ್ನು ಕಿಡ್ನಾಪ್ ಮಾಡಿದ್ದರು. ಮಾಮೂಲಿಯಂತೆ ಶ್ರೀನಿವಾಸ್ ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮುಗಿಸಿ ಮನೆಗೆ ವಾಪಸ್ ಬರುವಾಗ ಶ್ರೀನಿವಾಸ್ ನನ್ನು ಕಿಡ್ನಾಪ್ ಮಾಡಿದ್ದರು. ಈ ಸಂಬಂಧ ದೂರು ದಾಖಲಿಸಿಕೊಂಡಿದ್ದ ಹದಡಿ ಪೊಲೀಸರು, ಪ್ರಕರಣ ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಂಗೀತಾ ಹಾಗೂ ಇಬ್ಬರನ್ನು ಬಂಧಿಸಿದ್ದು, ಉಳಿದ ನಾಲ್ವರು ಪರಾರಿಯಾಗಿದ್ದಾರೆ. ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
-
Karnataka Election: ಪಂಚರಾಜ್ಯಗಳ ಜೊತೆ ಕರ್ನಾಟಕದ ಬಾಗಲಕೋಟೆ, ದಾವಣಗೆರೆ ದಕ್ಷಿಣ ಉಪಚುನಾವಣೆ ದಿನಾಂಕ ಘೋಷಣೆ -
RCB Yash Dayal Marriage: ಸದ್ದಿಲ್ಲದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಆರ್ಸಿಬಿ ಸ್ಟಾರ್ ಯಶ್ ದಯಾಳ್: ಫೋಟೋಗಳು ವೈರಲ್ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ












Click it and Unblock the Notifications