ಗಂಗಗೊಂಡನಹಳ್ಳಿಯಲ್ಲಿ ಕೊಲೆ: ಶಿರಲಿಗಪುರ ಕಣಿವೆ ಬಳಿ ಪತ್ನಿ ಶವ ಹೂತಿಟ್ಟ ಪತಿಯ ಬಂಧನ
ದಾವಣಗೆರೆ, ನವೆಂಬರ್ 22: ಆರು ತಿಂಗಳ ಗರ್ಭಿಣಿಯನ್ನು ಕೊಂದು ಹೂತು ಹಾಕಿದ್ದ ಪತಿಯನ್ನು ಚನ್ನಗಿರಿ ಪೊಲೀಸರು ಬಂಧಿಸಿದ್ದು, ಇದೀಗ ಮೃತಳ ಅತ್ತೆ, ಮಾವ ಪತ್ತೆಗೆ ಬಲೆ ಬೀಸಿದ್ದಾರೆ.
ಚನ್ನಗಿರಿ ತಾಲೂಕಿನ ಉಬ್ರಾಣಿ ಹೋಬಳಿಯ ಗಂಗಗೊಂಡನಹಳ್ಳಿ ಗ್ರಾಮದಲ್ಲಿ ಪ್ರಕರಣ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮೋಹನ್ ಕುಮಾರ್ (25) ಬಂಧಿತ ಆರೋಪಿ ಆಗಿದ್ದಾನೆ. ದಾವಣಗೆರೆ ತಾಲೂಕಿನ ಐಗೂರು ಗ್ರಾಮದ ಲೋಕೇಶಪ್ಪ ಎಂಬುವವರ ಪುತ್ರಿ ಚಂದ್ರಕಲಾ ಅಲಿಯಾಸ್ ರಶ್ಮಿ (21) ಹತ್ಯೆಗೀಡಾದ ಮಹಿಳೆ ಆಗಿದ್ದಾರೆ. ಗಂಗಗೊಂಡನಹಳ್ಳಿಯ ಮೋಹನ್ ಕುಮಾರ್ ಜೊತೆ ಕಳೆದ ಏಳು ತಿಂಗಳ ಹಿಂದೆಯಷ್ಟೇ ಈಕೆಯ ವಿವಾಹವಾಗಿತ್ತು. ಮದುವೆಯಾದ ಕೆಲವೇ ದಿನಗಳಲ್ಲಿಯೇ ದಾಂಪತ್ಯದಲ್ಲಿ ಬಿರುಕು ಮೂಡಿತ್ತು. ಚಂದ್ರಕಲಾ ಅವರ ಶೀಲ ಶಂಕಿಸಿ ಮೋಹನ್ ಕುಮಾರ್ ಚಿತ್ರಹಿಂಸೆ ನೀಡುತ್ತಿದ್ದ. ಜೊತೆಗೆ ವರದಕ್ಷಿಣೆ ತರುವಂತೆ ಕಿರುಕುಳ ನೀಡಲಾರಂಭಿಸಿದ್ದ ಎನ್ನುವ ಮಾಹಿತಿ ಹೊರಬಿದ್ದಿದೆ.
ಚಂದ್ರಕಲಾ ಅಲಿಯಾಸ್ ರಶ್ಮಿ ಫೋನ್ನಲ್ಲಿ ಯಾರ ಜೊತೆಯೂ ಮಾತನಾಡದಂತೆ ಮೋಹನ್ ಕುಮಾರ್ ನಿರ್ಬಂಧ ವಿಧಿಸಿ ಚಿತ್ರಹಿಂಸೆ ನೀಡುತ್ತಿದ್ದನಂತೆ. ಅಲ್ಲದೇ ಯಾರ ಜೊತೆ ಮಾತನಾಡುತ್ತೀಯಾ, ಯಾರ್ಯಾರ ಜೊತೆ ನಿನಗೆ ಸಂಬಂಧ ಇದೆ ಎಂದು ಪ್ರಶ್ನಿಸುತ್ತಿದ್ದನಂತೆ.

ಮೋಹನ್ನಿಂದ ಚಂದ್ರಕಲಾಗೆ ಚಿತ್ರಹಿಂಸೆ
ಚಂದ್ರಕಲಾ ತವರು ಮನೆಯವರಿಗೂ ಕೂಡ ಕದ್ದು ಮುಚ್ಚಿ ಫೋನ್ ಮಾಡಬೇಕಿತ್ತು. ಅಷ್ಟರ ಮಟ್ಟಿಗೆ ಕಿರುಕುಳ ನೀಡುತ್ತಿದ್ದ ಈ ಭೂಪ ಎನ್ನುವುದು ತಿಳಿದುಬಂದಿದೆ. ಈ ವಿಚಾರ ಚಂದ್ರಕಲಾ ಕುಟುಂಬದವರಿಗೂ ಗೊತ್ತಿತ್ತು. ಮದುವೆಯಾದ ಆರಂಭದಲ್ಲಿ ಬೇಗ ಹೊಂದಾಣಿಕೆ ಆಗುವುದಿಲ್ಲ ಎಂಬ ಕಾರಣಕ್ಕೆ ಚಂದ್ರಕಲಾಳಿಗೆ ಬುದ್ಧಿವಾದ ಹೇಳಿ ಗಂಡನ ಮನೆಗೆ ಕಳುಹಿಸುತ್ತಿದ್ದರು.

ಚಂದ್ರಕಲಾಳ ಕತ್ತು ಹಿಸುಕಿ ಕೊಲೆ
ಒಂದೂವರೆ ತಿಂಗಳ ಹಿಂದೆ ಗಂಡ ಹೆಂಡತಿಯ ನಡುವಿನ ಜಗಳ ತಾರಕಕ್ಕೇರಿದೆ. ಆಗ ಮೋಹನ್ ಕುಮಾರ್ ಪತ್ನಿ ಚಂದ್ರಕಲಾಳ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ನಂತರ ಪತ್ನಿಯ ಶವವನ್ನು ಯಾರಿಗೂ ಗೊತ್ತಾಗದಂತೆ ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರ ತಾಲೂಕಿನ ಹುಣಘಟ್ಟ ಕಾಡಿನಲ್ಲಿ ಗುಂಡಿ ತೆಗೆದು ಹೂತಿಟ್ಟಿದ್ದ. ಬಳಿಕ ಚಂದ್ರಕಲಾ ಪೋಷಕರಿಗೆ ನಿಮ್ಮ ಮಗಳು ಕಾಣೆ ಆಗಿದ್ದಾಳೆ ಎಂದು ಹೇಳಿ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದ.

ತನ್ನ ಕಷ್ಟಗಳನ್ನು ಹೇಳಿಕೊಂಡಿದ್ದ ಚಂದ್ರಕಲಾ
ಚಂದ್ರಕಲಾ ಪೋಷಕರಿಗೆ ಮೋಹನ್ ಕುಮಾರ್ ಮೇಲೆ ಮೊದಲಿನಿಂದಲೂ ಅನುಮಾನ ಇತ್ತು. ಸಂಬಂಧಿಕರು ಹಾಗೂ ಕುಟುಂಬದವರಿಗೆ ಕರೆ ಮಾಡಿದ್ದ ಚಂದ್ರಕಲಾಳ ಮಾತುಗಳನ್ನು ಸೂಕ್ಷ್ಮವಾಗಿ ಆಲಿಸಿದ್ದಾರೆ. ತನ್ನ ನೋವುಗಳನ್ನು ಸಹ ಪೋಷಕರ ಬಳಿ ಹೇಳಿಕೊಂಡಿದ್ದಳು. ಗಂಡ, ಅತ್ತೆ, ಮಾವ ಚಿಕ್ಕಪುಟ್ಟ ವಿಷಯಕ್ಕೂ ತೊಂದರೆ ಕೊಡುವ ಕುರಿತಂತೆ ಮಾತನಾಡಿದ್ದು ಗೊತ್ತಾಗಿದೆ. ಆಗ ಮೋಹನ್ ವಿರುದ್ಧ ದೂರು ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿಕೊಟ್ಟಿದ್ದಾರೆ. ನಂತರ ತಹಶೀಲ್ದಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಅ. 8ರಂದು ಪತ್ನಿ ಕೊಂದ ಪಾಪಿ ಪತಿ
ಇವರಿಬ್ಬರ ನಡುವೆ ಪ್ರತಿದಿನವೂ ಜಗಳ ನಡೆಯುತಿತ್ತು. ಈ ಹಿನ್ನೆಲೆಯಲ್ಲಿ ಮೋಹನ್ ಕುಮಾರ್ ತಿಂಗಳ ಹಿಂದೆಯೇ ಚಂದ್ರಕಲಾ ಕೊಲೆಗೆ ಸಂಚುರೂಪಿಸಿದ್ದ ಎನ್ನಲಾಗಿದೆ. ಅಜ್ಜಂಪುರ ತಾಲೂಕಿನ ಶಿರಲಿಗಪುರ ಕಣಿವೆ ಬಳಿ ಗುಂಡಿ ತೋಡಿ ಗುರುತು ಮಾಡಿ ಹೋಗಿದ್ದ ಎಂದು ತಿಳಿದುಬಂದಿದೆ. ಅಕ್ಟೋಬರ್ 8ರಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ಚಂದ್ರಕಲಾ ಅವರನ್ನು ಕೊಲೆ ಮಾಡಿದ್ದಾನೆ. ನಂತರ ಮಧ್ಯರಾತ್ರಿ ಕಾರಿನಲ್ಲಿ ಮೃತದೇಹ ತೆಗೆದುಕೊಂಡು ಹೋಗಿ ತಾನು ತೆಗೆದಿದ್ದ ಗುಂಡಿಯಲ್ಲಿ ಹೂತಿಟ್ಟು ಬಂದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಒಟ್ಟಿನಲ್ಲಿ ಬದುಕಿ ಬಾಳಬೇಕಿದ್ದ ಚಂದ್ರಕಲಾ ಅಲಿಯಾಸ್ ರಶ್ಮಿ ಬದುಕು ದುರಂತದಲ್ಲಿ ಅಂತ್ಯ ಕಂಡಿದೆ. ಪಾಪಿ ಪತಿ ಮೋಹನ್ ಕುಮಾರ್ನನ್ನು ಪೊಲೀಸರು ಬಂಧಿಸಿದ್ದು, ಇದೀಗ ಅತ್ತೆ, ಮಾವನ ಪತ್ತೆಗೆ ಬಲೆ ಬೀಸಿದ್ದಾರೆ.
-
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ












Click it and Unblock the Notifications