ಮೊಬೈಲ್ ಕಳೆದುಹೋಗಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ಯುವಕ

ದಾವಣಗೆರೆ, ಸೆಪ್ಟೆಂಬರ್ 30: ಮೊಬೈಲ್ ಕಳೆದುಹೋದದ್ದಕ್ಕೆ ಮನೆಯವರು ಬೈಯುತ್ತಾರೆ ಎಂದು ಹೆದರಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ದಾವಣಗೆರೆಯಲ್ಲಿ ನಡೆದಿದೆ. ದಾವಣಗೆರೆಯ ನಿಟ್ಟುವಳ್ಳಿ ನಿವಾಸಿ ಸಿದ್ದೇಶ್ (22) ಆತ್ಮಹತ್ಯೆ ಮಾಡಿಕೊಂಡ ಯುವಕ.

ದಾವಣಗೆರೆಯ ಡಿಸಿಎಂ ಟೌನ್ ಶಿಪ್ ಬಳಿ ಈ ಘಟನೆ ನಡೆದಿದ್ದು, ರೈಲಿಗೆ ತಲೆ ಕೊಟ್ಟು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸೆಪ್ಟೆಂಬರ್ 29ರಂದು ಭಾನುವಾರ ತಮ್ಮ ಪಕ್ಕದ ಮನೆಯವರ ಮೊಬೈಲನ್ನು ಪಡೆದುಕೊಂಡಿದ್ದ ಸಿದ್ದೇಶ್ ಅಂದೇ ಅದನ್ನು ಕಳೆದುಕೊಂಡಿದ್ದ. ವಿಷಯ ತಿಳಿದು ಆ ಮನೆಯವರೂ ಈತನನ್ನು ಬೈದು, ಸಿದ್ದೇಶ್ ಮನೆಯವರಿಗೆ ವಿಷಯ ತಿಳಿಸುವುದಾಗಿ ಹೇಳಿದ್ದರು.

Young Man Committed Suicide For Losing Mobile In Davangere

ಈ ವಿಷಯಕ್ಕೆ ಮನೆಯವರು ಬೈಯುತ್ತಾರೆ ಎಂದು ಹೆದರಿ ಇಂದು ಬೆಳಗ್ಗಿನ ಜಾವ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳಕ್ಕೆ ಕೆಟಿಜೆ ನಗರ ಹಾಗೂ ರೈಲ್ವೆ ಪೋಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+