ಧಾರವಾಡ-ಬೆಳಗಾವಿ ರೈಲು ಮಾರ್ಗಕ್ಕೆ 335 ಹೆಕ್ಟೇರ್ ಭೂ ಸ್ವಾಧೀನ
ಧಾರವಾಡ, ಅಕ್ಟೋಬರ್ 19 : ಧಾರವಾಡ-ಬೆಳಗಾವಿ ನೇರ ರೈಲು ಮಾರ್ಗ ಯೋಜನೆಗೆ ರೈಲ್ವೆ ಇಲಾಖೆ, ರಾಜ್ಯ ಸರ್ಕಾರ ಈಗಾಗಲೇ ಒಪ್ಪಿಗೆ ನೀಡಿವೆ. ಈ ಯೋಜನೆಗೆ 335 ಹೆಕ್ಟೇರ್ ಭೂಮಿ ಅಗತ್ಯವಿದೆ ಎಂದು ಅಂದಾಜಿಸಲಾಗಿದೆ.
73 ಕಿ. ಮೀ. ಉದ್ದದ ಧಾರವಾಡ-ಬೆಳಗಾವಿ ಏಕಪಥ ರೈಲು ಮಾರ್ಗದ ಯೋಜನಾ ವೆಚ್ಚ ಸುಮಾರು 927.40 ಕೋಟಿ ರೂ.ಗಳು. ನೂತನ ಮಾರ್ಗದ ಕಾಮಗಾರಿ ಕೈಗೊಳ್ಳಲು ಈಗಾಗಲೇ ಟೆಂಡರ್ ಕರೆಯಲಾಗಿದೆ.
ನೈಋತ್ಯ ರೈಲ್ವೆ ಈ ರೈಲು ಮಾರ್ಗ ನಿರ್ಮಾಣಕ್ಕೆ 335 ಹೆಕ್ಟೇರ್ ಭೂಮಿ ಅಗತ್ಯವಿದೆ ಎಂದು ಅಂದಾಜಿಸಿದೆ. ಈ ಕುರಿತು ವರದಿ ತಯಾರು ಮಾಡಿದ್ದು, ಭೂಮಿಯನ್ನು ಹಸ್ತಾಂತರ ಮಾಡಲು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ ಮಾಡಲಿದೆ.

ಭೂಮಿ ಹಸ್ತಾಂತರಗೊಂಡರೆ 2 ವರ್ಷಗಳಲ್ಲಿ ಯೋಜನೆಯನ್ನು ಪೂರ್ಣಗೊಳಿಸುವ ಗುರಿಯನ್ನು ಹೊಂದಲಾಗಿದೆ. ರೈಲ್ವೆ ಇಲಾಖೆ ಭೂಮಿಯನ್ನು ಗುರುತಿಸುವ ಕಾರ್ಯವನ್ನು ಅಂತಿಮಗೊಳಿಸಿದ್ದು, ಪ್ರಸ್ತಾವನೆ ಸಿದ್ಧಪಡಿಸುತ್ತಿದೆ.
ಧಾರವಾಡ-ಬೆಳಗಾವಿ ನೇರ ರೈಲು ಮಾರ್ಗ ಕೇಂದ್ರ ರೈಲ್ವೆ ಸಚಿವರಾಗಿದ್ದ ದಿ. ದಿವಂಗತ ಸುರೇಶ್ ಅಂಗಡಿ ಅವರ ಕನಸು. ಧಾರವಾಡ ಸಂಸದ ಪ್ರಹ್ಲಾದ್ ಜೋಶಿ ಸಹ ಇದಕ್ಕೆ ಅಗತ್ಯ ಸಹಕಾರ ನೀಡಿದ್ದರು.
ಕೇವಲ 1 ತಾಸು ಪ್ರಯಾಣ : ಧಾರವಾಡ ಮತ್ತು ಬೆಳಗಾವಿ ನಡುವಿನ ನೇರ ರೈಲು ಮಾರ್ಗ ನಿರ್ಮಾಣವಾದರೆ ಕೇವಲ 1 ತಾಸಿನಲ್ಲಿ ಉಭಯ ನಗರಗಳ ನಡುವೆ ಸಂಚಾರ ನಡೆಸಬಹುದಾಗಿದೆ.
ಪ್ರಸ್ತುತ ಧಾರವಾಡದಿಂದ ಬೆಳಗಾವಿಗೆ ಹೋಗಲು ಲೋಂಡಾ ಮೂಲಕ ಸಂಚಾರ ನಡೆಸಬೇಕು. 130 ಕಿ. ಮೀ. ಪ್ರಯಾಣಕ್ಕೆ 3 ಗಂಟೆಗಳು ಬೇಕು. ಆದರೆ, ನೂತನ ಮಾರ್ಗ ಕಿತ್ತೂರು ಮೂಲಕ ಧಾರವಾಡಕ್ಕೆ ಸಂಪರ್ಕ ಕಲ್ಪಿಸಲಿದೆ.
ಈ ಮಾರ್ಗ ಪೂರ್ಣಗೊಂಡರೆ ಧಾರವಾಡ-ಹುಬ್ಬಳ್ಳಿ-ಬೆಳಗಾವಿ ನಡುವೆ ಸಂಚಾರ ನಡೆಸುವ ಜನರಿಗೆ ಅನುಕೂಲವಾಗಲಿದೆ. ಮೂರು ನಗರಗಳ ನಡುವೆ ಸರಕುಗಳ ಸಾಗಣೆಗೆಗೂ ಸಹಾಯಕವಾಗಲಿದೆ.
-
New Railway Line: 6000 ಕಿಮೀ ರೈಲ್ವೆ ಜಾಲ ವಿಸ್ತರಣೆ, 100 ಯೋಜನೆಗಳ ಜಾರಿಗೆ ₹1.53 ಲಕ್ಷ ಕೋಟಿ ಹೂಡಿಕೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ












Click it and Unblock the Notifications