ಧಾರವಾಡ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

84ನೇ ಕನ್ನಡ ಸಾಹಿತ್ಯ ಸಮ್ಮೇಳನದ ನಿರ್ಣಯಗಳು

|
Google Oneindia Kannada News

ಧಾರವಾಡ, ಜನವರಿ 06 : ಧಾರವಾಡದಲ್ಲಿ ನಡೆಯುತ್ತಿದ್ದ 84ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ತೆರೆ ಬಿದ್ದಿದೆ. 4 ನಿರ್ಣಯವನ್ನು ಸಮ್ಮೇಳನದಲ್ಲಿ ತೆಗೆದುಕೊಳ್ಳಲಾಗಿದೆ. 85ನೇ ಸಾಹಿತ್ಯ ಸಮ್ಮೇಳನ ಕಲಬುರಗಿಯಲ್ಲಿ ನಡೆಯಲಿದೆ.

ಡಾ.ಚಂದ್ರಶೇಖರ ಕಂಬಾರ ಅವರ ಅಧ್ಯಕ್ಷತೆಯಲ್ಲಿ ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ಮೂರು ದಿನಗಳಿಂದ ನಡೆಯುತ್ತಿದ್ದ ಕನ್ನಡ ಸಾಹಿತ್ಯ ಸಮ್ಮೇಳನ ಭಾನುವಾರ ಅಂತ್ಯಗೊಂಡಿತು. ನಾಲ್ಕು ನಿರ್ಣಯವನ್ನು ಸಮ್ಮೇಳನದಲ್ಲಿ ಕೈಗೊಳ್ಳಲಾಗಿದೆ.

ಚಿತ್ರಗಳು : ಧಾರವಾಡದಲ್ಲಿ ಸಮ್ಮೇಳನಾಧ್ಯಕ್ಷರ ಭವ್ಯ ಮೆರವಣಿಗೆ ಚಿತ್ರಗಳು : ಧಾರವಾಡದಲ್ಲಿ ಸಮ್ಮೇಳನಾಧ್ಯಕ್ಷರ ಭವ್ಯ ಮೆರವಣಿಗೆ

ಧಾರವಾಡದಲ್ಲಿ ನಡೆದ ಸಾಹಿತ್ಯ ಪರಿಷತ್ತಿನ ಕಾರ್ಯಕಾರಣಿ ಸಭೆಯಲ್ಲಿ ಕಲಬುರಗಿಯಲ್ಲಿ 85ನೇ ಸಾಹಿತ್ಯ ಸಮ್ಮೇಳನ ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ. ಕಲಬುರಗಿ ಜಿಲ್ಲಾ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಈ ನಿರ್ಧಾರಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ.

4 resolutions of the 84th Kannada Sahitya Sammelana Dharwad

ಸಮ್ಮೇಳನದ 4 ನಿರ್ಣಯಗಳು

* ನಾಡಗೀತೆ ಹಾಡುವ ನಿಮಿಷವನ್ನು ಗರಿಷ್ಠ 2 ನಿಮಿಷ 30 ಸೆಕೆಂಡ್‌ಗಳಿಗೆ ನಿಗದಿಗೊಳಿಸಲು ಆಗ್ರಹ

* ಆಂಗ್ಲ ಮಾಧ್ಯಮ ಶಾಲೆ ಆರಂಭಿಸುವುದಾಗಿ ಘೋಷಣೆ ವಿಚಾರ. ರಾಜ್ಯ ಸರ್ಕಾರದ ನಿರ್ಣಯವನ್ನು ಅನುಷ್ಠಾನ ಮಾಡದಂತೆ ಆಗ್ರಹ

ಕನ್ನಡ ಉಳಿಸಲು ಪಾಶ್ಚಾತ್ಯ ಶಿಕ್ಷಣದ ಗುಂಗಿನಿಂದ ಹೊರಬನ್ನಿ: ಕಂಬಾರ ಕನ್ನಡ ಉಳಿಸಲು ಪಾಶ್ಚಾತ್ಯ ಶಿಕ್ಷಣದ ಗುಂಗಿನಿಂದ ಹೊರಬನ್ನಿ: ಕಂಬಾರ

* ಕೇಂದ್ರ ಸರ್ಕಾರ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅವಕಾಶ. ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ಆಗ್ರಹ

* ಪ್ರಾಥಮಿಕ ಶಿಕ್ಷಣವನ್ನು ರಾಷ್ಟ್ರೀಕರಣಗೊಳಿಸುವಂತೆ ಒತ್ತಾಯ. ಎಲ್‌ಕೆಜಿ, ಯುಕೆಜಿ ಸಹಿತ 7ನೇ ತರಗತಿವರೆಗೆ ರಾಷ್ಟ್ರೀಕರಣಗೊಳಿಸಿ

English summary
84th Kannada Sahitya Sammelana chaired by Dr.Chandra Shekhar Kambar passed the 4 resolution. Three days of Sahitya Sammelana concluded in Dharwad, Karnataka on January 6, 2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X