84ನೇ ಕನ್ನಡ ಸಾಹಿತ್ಯ ಸಮ್ಮೇಳನದ ನಿರ್ಣಯಗಳು
ಧಾರವಾಡ, ಜನವರಿ 06 : ಧಾರವಾಡದಲ್ಲಿ ನಡೆಯುತ್ತಿದ್ದ 84ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ತೆರೆ ಬಿದ್ದಿದೆ. 4 ನಿರ್ಣಯವನ್ನು ಸಮ್ಮೇಳನದಲ್ಲಿ ತೆಗೆದುಕೊಳ್ಳಲಾಗಿದೆ. 85ನೇ ಸಾಹಿತ್ಯ ಸಮ್ಮೇಳನ ಕಲಬುರಗಿಯಲ್ಲಿ ನಡೆಯಲಿದೆ.
ಡಾ.ಚಂದ್ರಶೇಖರ ಕಂಬಾರ ಅವರ ಅಧ್ಯಕ್ಷತೆಯಲ್ಲಿ ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ಮೂರು ದಿನಗಳಿಂದ ನಡೆಯುತ್ತಿದ್ದ ಕನ್ನಡ ಸಾಹಿತ್ಯ ಸಮ್ಮೇಳನ ಭಾನುವಾರ ಅಂತ್ಯಗೊಂಡಿತು. ನಾಲ್ಕು ನಿರ್ಣಯವನ್ನು ಸಮ್ಮೇಳನದಲ್ಲಿ ಕೈಗೊಳ್ಳಲಾಗಿದೆ.
ಚಿತ್ರಗಳು : ಧಾರವಾಡದಲ್ಲಿ ಸಮ್ಮೇಳನಾಧ್ಯಕ್ಷರ ಭವ್ಯ ಮೆರವಣಿಗೆ
ಧಾರವಾಡದಲ್ಲಿ ನಡೆದ ಸಾಹಿತ್ಯ ಪರಿಷತ್ತಿನ ಕಾರ್ಯಕಾರಣಿ ಸಭೆಯಲ್ಲಿ ಕಲಬುರಗಿಯಲ್ಲಿ 85ನೇ ಸಾಹಿತ್ಯ ಸಮ್ಮೇಳನ ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ. ಕಲಬುರಗಿ ಜಿಲ್ಲಾ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಈ ನಿರ್ಧಾರಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ.
ಸಮ್ಮೇಳನದ 4 ನಿರ್ಣಯಗಳು
* ನಾಡಗೀತೆ ಹಾಡುವ ನಿಮಿಷವನ್ನು ಗರಿಷ್ಠ 2 ನಿಮಿಷ 30 ಸೆಕೆಂಡ್ಗಳಿಗೆ ನಿಗದಿಗೊಳಿಸಲು ಆಗ್ರಹ
* ಆಂಗ್ಲ ಮಾಧ್ಯಮ ಶಾಲೆ ಆರಂಭಿಸುವುದಾಗಿ ಘೋಷಣೆ ವಿಚಾರ. ರಾಜ್ಯ ಸರ್ಕಾರದ ನಿರ್ಣಯವನ್ನು ಅನುಷ್ಠಾನ ಮಾಡದಂತೆ ಆಗ್ರಹ
ಕನ್ನಡ ಉಳಿಸಲು ಪಾಶ್ಚಾತ್ಯ ಶಿಕ್ಷಣದ ಗುಂಗಿನಿಂದ ಹೊರಬನ್ನಿ: ಕಂಬಾರ
* ಕೇಂದ್ರ ಸರ್ಕಾರ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅವಕಾಶ. ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ಆಗ್ರಹ
* ಪ್ರಾಥಮಿಕ ಶಿಕ್ಷಣವನ್ನು ರಾಷ್ಟ್ರೀಕರಣಗೊಳಿಸುವಂತೆ ಒತ್ತಾಯ. ಎಲ್ಕೆಜಿ, ಯುಕೆಜಿ ಸಹಿತ 7ನೇ ತರಗತಿವರೆಗೆ ರಾಷ್ಟ್ರೀಕರಣಗೊಳಿಸಿ