ಧಾರವಾಡ:ಕೊರೊನಾ ಬಳಿಕ ಶಾಲೆಯಿಂದ ಹೊರಗುಳಿದ 688 ವಿದ್ಯಾರ್ಥಿಗಳು
ಸಮಗ್ರ ಶಿಕ್ಷಣ ಕರ್ನಾಟಕ ನಡೆಸಿದ ಸಮೀಕ್ಷೆಯಲ್ಲಿ ಜಿಲ್ಲೆಯಲ್ಲಿ ಬರೋಬ್ಬರಿ 688 ವಿದ್ಯಾರ್ಥಿಗಳು ಶಾಲೆಯಿಂದ ಹೊರಗುಳಿದಿರುವ ಮಾಹಿತಿ ಲಭ್ಯವಾಗಿದೆ. ಇದರಲ್ಲಿ ಕುಂದಗೋಳ ತಾಲೂಕಿನಲ್ಲಿಯೇ ಅತಿ ಹೆಚ್ಚು (230) ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದಾರೆ.
ಹುಬ್ಬಳ್ಳಿ,ಫೆಬ್ರವರಿ 10: ಹೆಣ್ಣೊಂದು ಕಲಿತರೇ ಶಾಲೆಯೊಂದು ತೆರದಂತೆ. ನಲಿ-ಕಲಿ, ಬಾ ಮಗು ಶಾಲೆಗೆ ಹೀಗೆ ಒಂದಲ್ಲಾ ಎರಡಲ್ಲ ಸುಮಾರು ಯೋಜನೆ ಜಾರಿಗೆ ಬಂದರೂ ಮಕ್ಕಳನ್ನು ಸಂಪೂರ್ಣವಾಗಿ ಶಾಲೆಯತ್ತ ಕರೆತರಲು ಸಾಧ್ಯವಾಗುತ್ತಿಲ್ಲ.
ಸಮಗ್ರ ಶಿಕ್ಷಣ ಕರ್ನಾಟಕ ನಡೆಸಿದ ಸಮೀಕ್ಷೆಯಲ್ಲಿ ಜಿಲ್ಲೆಯಲ್ಲಿ ಬರೋಬ್ಬರಿ 688 ವಿದ್ಯಾರ್ಥಿಗಳು ಶಾಲೆಯಿಂದ ಹೊರಗುಳಿದಿರುವ ಮಾಹಿತಿ ಲಭ್ಯವಾಗಿದೆ. ಇದರಲ್ಲಿ ಕುಂದಗೋಳ ತಾಲೂಕಿನಲ್ಲಿಯೇ ಅತಿ ಹೆಚ್ಚು (230) ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದಾರೆ.
2022 ಡಿಸೆಂಬರ್ 28ರಿಂದ 2023ರ ಜನವರಿ5ರ ವರೆಗೆ ಶಿಕ್ಷಣ ಇಲಾಖೆ ನಡೆಸಿದ ಸಮೀಕ್ಷೆಯಲ್ಲಿ ಈ ಮಾಹಿತಿ ಲಭ್ಯವಾಗಿದೆ. ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆ ನಡೆಸುವಂತೆ ಸಮಗ್ರ ಶಿಕ್ಷಣ ಕರ್ನಾಟಕದ ಯೋಜನಾ ನಿರ್ದೇಶಕರು ಎಲ್ಲ ಜಿಲ್ಲೆಗಳಿಗೆ ಸೂಚಿಸಿದ್ದರು. ಅದರಂತೆ ರಾಜ್ಯಾದ್ಯಂತ ಏಕಕಾಲದಲ್ಲಿ ಸಮೀಕ್ಷೆ ನಡೆದಿತ್ತು. ಧಾರವಾಡ ಜಿಲ್ಲಾಮಟ್ಟದಲ್ಲಿ ಸಿಆರ್ಪಿ, ಬಿಆರ್ಸಿ, ಮುಖ್ಯೋಪಾಧ್ಯಾಯರು, ಶಿಕ್ಷಕರು ಈ ಸಮೀಕ್ಷೆ ನಡೆಸಿದ್ದಾರೆ.

ಕೊರೊನಾ ಬಳಿಕ ವರ್ಗಾವಣೆ ಪ್ರಮಾಣ ಪತ್ರ ಪಡೆದ ವಿದ್ಯಾರ್ಥಿಗಳು ತಮ್ಮ ಶಿಕ್ಷಣ ಮುಂದುವರಿಸಿಲ್ಲ ಎನ್ನುವುದು ಸಮೀಕ್ಷೆಯಲ್ಲಿ ದೃಢವಾಗಿದೆ. ಜಿಲ್ಲೆಯಲ್ಲಿ 688ರಲ್ಲಿ 661 ಮಕ್ಕಳು ಆರ್ಥಿಕ, ಸಾಮಾಜಿಕ ಸೇರಿದಂತೆ ವಿವಿಧ ಕಾರಣಗಳಿಂದ ಶಾಲೆಯನ್ನು ಅರ್ಧಕ್ಕೆ ಮೊಟಕುಗೊಳಿಸಿದ್ದಾರೆ. ಉಳಿದ 27 ವಿದ್ಯಾರ್ಥಿಗಳು ಯಾವುದೇ ಶಾಲೆಗೆ ದಾಖಲಾಗಿಲ್ಲ. ಇದರಲ್ಲಿ 21 ಮಕ್ಕಳು ಹುಬ್ಬಳ್ಳಿ ನಗರದವರೇ ಇದ್ದಾರೆ. ಇವೆರಲ್ಲರೂ 6ರಿಂದ 14 ವರ್ಷದೊಳಗಿನವರಾಗಿದ್ದಾರೆ.
ಇನ್ನು 6ರಿಂದ 14 ವರ್ಷ 426, 15ರಿಂದ 19 ವರ್ಷದೊಳಗಿನ 262 ಮಕ್ಕಳು ಶಾಲೆಯಿಂದ ಹೊರಗುಳಿದಿದ್ದಾರೆ. ಇದರಲ್ಲಿ ಗಂಡು ಮಕ್ಕಳ ಸಂಖ್ಯೆಯೇ ಹೆಚ್ಚಾಗಿದೆ. 6ರಿಂದ 14 ವರ್ಷ 270, 15ರಿಂದ 19 ವರ್ಷದೊಳಗಿನ 178 ಗಂಡು ಮಕ್ಕಳು, 6ರಿಂದ 14 ವರ್ಷ 156, 15ರಿಂದ 19 ವರ್ಷದೊಳಗಿನ 84 ಹೆಣ್ಣು ಮಕ್ಕಳಿದ್ದಾರೆ.
ಒಟ್ಟಿನಲ್ಲಿ ಕುಂದಗೋಳ, ಧಾರವಾಡ ಗ್ರಾಮೀಣ, ನವಲಗುಂದ ತಾಲೂಕು ವ್ಯಾಪ್ತಿಯಲ್ಲಿ ಹೆಚ್ಚಿನ ಮಕ್ಕಳು ಶಾಲೆಯಿಂದ ಹೊರಗಿದ್ದಾರೆ ಎಂಬುದು ಸಮೀಕ್ಷೆಯಲ್ಲಿ ದಾಖಲಾಗಿದೆ. ಸದ್ಯ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರುತಿಸಿದ್ದು ಅವರನ್ನು ಮುಖ್ಯವಾಹಿನಿಗೆ ತರಲು ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ (ಸಿಆರ್ಪಿ) ಮತ್ತು ಮುಖ್ಯೋಪಾಧ್ಯಾಯರಿಗೆ ಸೂಚಿಸಲಾಗಿದೆ. ಮುಂಬರುವ ಶೈಕ್ಷಣಿಕ ವರ್ಷದೊಳಗೆ ಶಾಲೆಯಿಂದ ಹೊರಗುಳಿದ ಎಲ್ಲ ಮಕ್ಕಳನ್ನು ಸಮಾಜದ ಮುಖ್ಯವಾಹಿನಿಗೆ ತರಲು ಕ್ರಮಕೈಗೊಳ್ಳಲಾಗುವುದು ಎಂಬ ಭರವಸೆ ನೀಡುತ್ತಿದ್ದಾರೆ ವಿನಃ ಯಾವುದೇ ರೀತಿಯಲ್ಲಿ ಕಾರ್ಯರೂಪಕ್ಕೆ ಬರುತ್ತಿಲ್ಲ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications