ಧಾರವಾಡ:ಕೊರೊನಾ ಬಳಿಕ ಶಾಲೆಯಿಂದ ಹೊರಗುಳಿದ 688 ವಿದ್ಯಾರ್ಥಿಗಳು
ಸಮಗ್ರ ಶಿಕ್ಷಣ ಕರ್ನಾಟಕ ನಡೆಸಿದ ಸಮೀಕ್ಷೆಯಲ್ಲಿ ಜಿಲ್ಲೆಯಲ್ಲಿ ಬರೋಬ್ಬರಿ 688 ವಿದ್ಯಾರ್ಥಿಗಳು ಶಾಲೆಯಿಂದ ಹೊರಗುಳಿದಿರುವ ಮಾಹಿತಿ ಲಭ್ಯವಾಗಿದೆ. ಇದರಲ್ಲಿ ಕುಂದಗೋಳ ತಾಲೂಕಿನಲ್ಲಿಯೇ ಅತಿ ಹೆಚ್ಚು (230) ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದಾರೆ.
ಹುಬ್ಬಳ್ಳಿ,ಫೆಬ್ರವರಿ 10: ಹೆಣ್ಣೊಂದು ಕಲಿತರೇ ಶಾಲೆಯೊಂದು ತೆರದಂತೆ. ನಲಿ-ಕಲಿ, ಬಾ ಮಗು ಶಾಲೆಗೆ ಹೀಗೆ ಒಂದಲ್ಲಾ ಎರಡಲ್ಲ ಸುಮಾರು ಯೋಜನೆ ಜಾರಿಗೆ ಬಂದರೂ ಮಕ್ಕಳನ್ನು ಸಂಪೂರ್ಣವಾಗಿ ಶಾಲೆಯತ್ತ ಕರೆತರಲು ಸಾಧ್ಯವಾಗುತ್ತಿಲ್ಲ.
ಸಮಗ್ರ ಶಿಕ್ಷಣ ಕರ್ನಾಟಕ ನಡೆಸಿದ ಸಮೀಕ್ಷೆಯಲ್ಲಿ ಜಿಲ್ಲೆಯಲ್ಲಿ ಬರೋಬ್ಬರಿ 688 ವಿದ್ಯಾರ್ಥಿಗಳು ಶಾಲೆಯಿಂದ ಹೊರಗುಳಿದಿರುವ ಮಾಹಿತಿ ಲಭ್ಯವಾಗಿದೆ. ಇದರಲ್ಲಿ ಕುಂದಗೋಳ ತಾಲೂಕಿನಲ್ಲಿಯೇ ಅತಿ ಹೆಚ್ಚು (230) ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದಾರೆ.
2022 ಡಿಸೆಂಬರ್ 28ರಿಂದ 2023ರ ಜನವರಿ5ರ ವರೆಗೆ ಶಿಕ್ಷಣ ಇಲಾಖೆ ನಡೆಸಿದ ಸಮೀಕ್ಷೆಯಲ್ಲಿ ಈ ಮಾಹಿತಿ ಲಭ್ಯವಾಗಿದೆ. ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆ ನಡೆಸುವಂತೆ ಸಮಗ್ರ ಶಿಕ್ಷಣ ಕರ್ನಾಟಕದ ಯೋಜನಾ ನಿರ್ದೇಶಕರು ಎಲ್ಲ ಜಿಲ್ಲೆಗಳಿಗೆ ಸೂಚಿಸಿದ್ದರು. ಅದರಂತೆ ರಾಜ್ಯಾದ್ಯಂತ ಏಕಕಾಲದಲ್ಲಿ ಸಮೀಕ್ಷೆ ನಡೆದಿತ್ತು. ಧಾರವಾಡ ಜಿಲ್ಲಾಮಟ್ಟದಲ್ಲಿ ಸಿಆರ್ಪಿ, ಬಿಆರ್ಸಿ, ಮುಖ್ಯೋಪಾಧ್ಯಾಯರು, ಶಿಕ್ಷಕರು ಈ ಸಮೀಕ್ಷೆ ನಡೆಸಿದ್ದಾರೆ.

ಕೊರೊನಾ ಬಳಿಕ ವರ್ಗಾವಣೆ ಪ್ರಮಾಣ ಪತ್ರ ಪಡೆದ ವಿದ್ಯಾರ್ಥಿಗಳು ತಮ್ಮ ಶಿಕ್ಷಣ ಮುಂದುವರಿಸಿಲ್ಲ ಎನ್ನುವುದು ಸಮೀಕ್ಷೆಯಲ್ಲಿ ದೃಢವಾಗಿದೆ. ಜಿಲ್ಲೆಯಲ್ಲಿ 688ರಲ್ಲಿ 661 ಮಕ್ಕಳು ಆರ್ಥಿಕ, ಸಾಮಾಜಿಕ ಸೇರಿದಂತೆ ವಿವಿಧ ಕಾರಣಗಳಿಂದ ಶಾಲೆಯನ್ನು ಅರ್ಧಕ್ಕೆ ಮೊಟಕುಗೊಳಿಸಿದ್ದಾರೆ. ಉಳಿದ 27 ವಿದ್ಯಾರ್ಥಿಗಳು ಯಾವುದೇ ಶಾಲೆಗೆ ದಾಖಲಾಗಿಲ್ಲ. ಇದರಲ್ಲಿ 21 ಮಕ್ಕಳು ಹುಬ್ಬಳ್ಳಿ ನಗರದವರೇ ಇದ್ದಾರೆ. ಇವೆರಲ್ಲರೂ 6ರಿಂದ 14 ವರ್ಷದೊಳಗಿನವರಾಗಿದ್ದಾರೆ.
ಇನ್ನು 6ರಿಂದ 14 ವರ್ಷ 426, 15ರಿಂದ 19 ವರ್ಷದೊಳಗಿನ 262 ಮಕ್ಕಳು ಶಾಲೆಯಿಂದ ಹೊರಗುಳಿದಿದ್ದಾರೆ. ಇದರಲ್ಲಿ ಗಂಡು ಮಕ್ಕಳ ಸಂಖ್ಯೆಯೇ ಹೆಚ್ಚಾಗಿದೆ. 6ರಿಂದ 14 ವರ್ಷ 270, 15ರಿಂದ 19 ವರ್ಷದೊಳಗಿನ 178 ಗಂಡು ಮಕ್ಕಳು, 6ರಿಂದ 14 ವರ್ಷ 156, 15ರಿಂದ 19 ವರ್ಷದೊಳಗಿನ 84 ಹೆಣ್ಣು ಮಕ್ಕಳಿದ್ದಾರೆ.
ಒಟ್ಟಿನಲ್ಲಿ ಕುಂದಗೋಳ, ಧಾರವಾಡ ಗ್ರಾಮೀಣ, ನವಲಗುಂದ ತಾಲೂಕು ವ್ಯಾಪ್ತಿಯಲ್ಲಿ ಹೆಚ್ಚಿನ ಮಕ್ಕಳು ಶಾಲೆಯಿಂದ ಹೊರಗಿದ್ದಾರೆ ಎಂಬುದು ಸಮೀಕ್ಷೆಯಲ್ಲಿ ದಾಖಲಾಗಿದೆ. ಸದ್ಯ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರುತಿಸಿದ್ದು ಅವರನ್ನು ಮುಖ್ಯವಾಹಿನಿಗೆ ತರಲು ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ (ಸಿಆರ್ಪಿ) ಮತ್ತು ಮುಖ್ಯೋಪಾಧ್ಯಾಯರಿಗೆ ಸೂಚಿಸಲಾಗಿದೆ. ಮುಂಬರುವ ಶೈಕ್ಷಣಿಕ ವರ್ಷದೊಳಗೆ ಶಾಲೆಯಿಂದ ಹೊರಗುಳಿದ ಎಲ್ಲ ಮಕ್ಕಳನ್ನು ಸಮಾಜದ ಮುಖ್ಯವಾಹಿನಿಗೆ ತರಲು ಕ್ರಮಕೈಗೊಳ್ಳಲಾಗುವುದು ಎಂಬ ಭರವಸೆ ನೀಡುತ್ತಿದ್ದಾರೆ ವಿನಃ ಯಾವುದೇ ರೀತಿಯಲ್ಲಿ ಕಾರ್ಯರೂಪಕ್ಕೆ ಬರುತ್ತಿಲ್ಲ.
-
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
ಹಿಂದಿ ಹೆಚ್ಚು ಜನ ಮಾತನಾಡುವ ಭಾಷೆ, ವಿದ್ಯಾರ್ಥಿಗಳು ಎಲ್ಲ ಭಾಷೆ ಕಲಿಯಬೇಕು: ಶ್ರೀರಾಮುಲು -
SSLC ಪರೀಕ್ಷೆ ನಡೆಯುತ್ತಿರುವಾಗಲೇ ಅಂಕ 525ಕ್ಕೆ ಇಳಿಕೆ: ಸರ್ಕಾರದ ವಿರುದ್ಧ ಸುರೇಶ್ ಕುಮಾರ್ ವಾಗ್ದಾಳಿ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು












Click it and Unblock the Notifications