ಧಾರವಾಡದಲ್ಲಿ ಭೀಕರ ಅಪಘಾತ- ಕ್ರೂಸರ್ ಮರಕ್ಕೆ ಡಿಕ್ಕಿ: ಏಳು ಜನ ಸಾವು

ಧಾರವಾಡ ಮೇ 21: ಧಾರವಾಡದಲ್ಲಿ ಭೀಕರ ಅಪಘಾತ ಸಂಭವಿಸಿದ್ದು ಏಳು ಜನ ಸಾವನ್ನಪ್ಪಿದ್ದಾರೆ. ಧಾರವಾಡ ತಾಲೂಕಿನ ಬಾಡ ಗ್ರಾಮದ ಬಳಿ‌ ಮರಕ್ಕೆ ಕ್ರೂಸರ್ ಡಿಕ್ಕಿ ಹೊಡೆದು ಸ್ಥಳದಲ್ಲೇ ಏಳು ಜನರು ಮೃತಪಟ್ಟ ಘಟನೆ ನಡೆದಿದೆ.

ಅಪಘಾತದಲ್ಲಿ ಆರು ಜನರಿಗೆ ಗಂಭೀರ ಗಾಯಗೊಂಡಿದ್ದು, ಮದುವೆ ಹಿಂದಿನ ದಿನ ನಿಶ್ಚಿತಾರ್ಥ ಮುಗಿಸಿಕೊಂಡು ವಾಹನ ಬರುತ್ತಿತ್ತು ಎನ್ನಲಾಗಿದೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆ ಮತ್ತು ಕಿಮ್ಸ್‌ಗೆ ದಾಖಲು ಮಾಡಲಾಗಿದೆ. ಧಾರವಾಡ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Crashes into cruiser tree in Dharwad, seven dead

Recommended Video

      Kohli ಈ ಬಾರಿ ಮೊದಲ ಬಾರಿ ಪಂದ್ಯ ಶ್ರೇಷ್ಠರಾಗಿ ಹೇಳಿದ್ದೇನು? | Oneindia Kannada

      ಇನ್ನು ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್ ಪಿ ಕೃಷ್ಣಕಾಂತ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮನಸೂರ ಗ್ರಾಮದಿಂದ ನಿಗದಿ (ಬೆನಕನಕಟ್ಟಿ) ಗೆ ಹೋಗುವಾಗ ಈ ಘಟನೆ ನಡೆದಿದೆ. ಒಟ್ಟು 7 ಜನ ಸಾವನ್ನಪ್ಪಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿ ವಾಹನ ಮರಕ್ಕೆ ಡಿಕ್ಕಿ ಸಂಭವಿಸಿದೆ. ಸಧ್ಯ ಪೊಲೀಸ್ ಅಧಿಕಾರಿಗಳು ಹೆಚ್ಚಿನ ಮಾಹಿತಿ ಕಲೆ ಹಾಕುತಿದ್ದಾರೆ. ಇನ್ನು ಅನನ್ಯ 14, ಹರೀಶ 13, ಶಿಲ್ಪಾ 34, ನೀಲವ್ಚ 60, ಮಧುಶ್ರೀ 20 ಮಹೇಶ್ವರಯ್ಯ 11, ಶಂಭುಲಿಂಗಯ್ಯ 35, ಸಾವನ್ನಪ್ಪಿದ ದುರ್ದೈವಿಗಳಾಗಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+