ಧಾರವಾಡ ಜಿಲ್ಲೆಯಲ್ಲಿ 81 ಕೆರೆಗಳ ಭರ್ತಿ: ಜಿಲ್ಲಾಧಿಕಾರಿ ಗುರುದತ್ತ ಹೆಗಡೆ
ಹುಬ್ಬಳ್ಳಿ, ಅಕ್ಟೋಬರ್, 21: ಧಾರವಾಡ ಜಿಲ್ಲೆಯಲ್ಲಿ ಯಾವುದೇ ಭಾಗದಲ್ಲಿ ಸದ್ಯಕ್ಕೆ ಕುಡಿಯುವ ನೀರಿನ ಸಮಸ್ಯೆ ಇಲ್ಲವಾಗಿದ್ದು, ಗ್ರಾಮೀಣ ಪ್ರದೇಶಕ್ಕೆ ಅನುಕೂಲ ಆಗುವಂತೆ ಸುಮಾರು 81 ಕೆರೆಗಳನ್ನು ತುಂಬಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದರು.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ರಾಮೀಣ ಪ್ರದೇಶಕ್ಕೆ ಕುಡಿಯುವ ನೀರಿನ ಸಮಸ್ಯೆ ತಪ್ಪಿಸುವ ನಿಟ್ಟಿನಲ್ಲಿ ಎಲ್ಲೆಲ್ಲಿ ಅನುಕೂಲತೆ ಇದೆಯೋ ಅಲ್ಲಿಯ ಎಲ್ಲ ಕೆರೆಗಳನ್ನು ತುಂಬಿಸಲಾಗಿದ್ದು, ಎಲ್ಲಿಯೂ ಸಹ ಟ್ಯಾಂಕರ್ ಮೂಲಕ ನೀರನ್ನು ಸದ್ಯಕ್ಕೆ ಪೂರೈಕೆ ಮಾಡುತ್ತಿಲ್ಲ ಎಂದರು.

ಮಳೆಯ ಕೊರತೆಯ ನಡುವೆಯೂ ಹುಬ್ಬಳ್ಳಿ-ಧಾರವಾಡ ಸೇರಿದಂತೆ ಜಿಲ್ಲೆಯಲ್ಲಿ ಇನ್ನು ಮೂರ್ನಾಲ್ಕು ತಿಂಗಳವರೆಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗದು. ಆದರೂ ಮುಂಜಾಗ್ರತಾ ಕ್ರಮವಾಗಿ ಪ್ರತಿವಾರ ಸಂಬಂಧಿಸಿದ ಇಲಾಖೆ ಹಾಗೂ ನೀರು ಪೂರೈಕೆ ಕಂಪನಿಯೊಂದಿಗೆ ಚರ್ಚೆ ನಡೆಸುತ್ತಿರುವುದಾಗಿ ಜಿಲ್ಲಾಧಿಕಾರಿಗಳು ತಿಳಿಸಿದರು. ಜಿಲ್ಲೆಯಲ್ಲಿ ಸುಮಾರು 15 ರಿಂದ 16 ಕಡೆ ಆರ್ಓ ಪ್ಲಾಂಟ್ಗಳು ದುರಸ್ತಿಯಲ್ಲಿವೆ ಎಂಬ ಮಾಹಿತಿ ಇದ್ದು, ಅವುಗಳನ್ನು ಸರಿಪಡಿಸುವ ಕಾರ್ಯ ನಡೆಯುತ್ತಿದೆ ಎಂದರು.
ಮಳೆಯ ಕೊರತೆಯಿಂದಾಗಿ ಮುಂಗಾರು ಬೆಳೆ ಹಾನಿಗೀಡಾಗಿದ್ದು, ಹಿಂಗಾರು ಹಂಗಾಮಿಗೆ ಜಿಲ್ಲೆಯ ಹಲವು ಕಡೆಗಳಲ್ಲಿ ರೈತರು ಬಿತ್ತನೆ ಮಾಡಿದ್ದು ಒಂದು ವೇಳೆ ಮುಂದಿನ ತಿಂಗಳು ಮಳೆ ಬಾಗದಿದ್ದರೆ ಬಿತ್ತಿದ ಬೆಳೆ ಸಹ ಹಾನಿ ಆಗಲಿದೆ ಎಂದರು. ಇನ್ನು ಬೆಳೆ ವಿಮೆ ಪರಿಹಾರ ನಿಟ್ಟಿನಲ್ಲಿ ಬರ ಅಥವಾ ಅತಿವೃಷ್ಟಿ ಸಂದರ್ಭದಲ್ಲಿ ತಕ್ಷಣಕ್ಕೆ ಶೇಕಡ 25 ರಷ್ಟು ಮಧ್ಯಂತರ ಪರಿಹಾರವನ್ನು ನೀಡಬೇಕು ಎಂಬ ನಿಯಮ ಇರುವುದು ನಿಜ. ವಿಮಾ ಕಂಪನಿ ಈ ಬಗ್ಗೆ ಈ ಬಗ್ಗೆ ಒಪ್ಪಿರಲಿಲ್ಲ.
ಆದರೆ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲೆಯ ಶಾಸಕರು ವಿಮಾ ಕಂಪನಿಯವರೊಂದಿಗೆ ಸಭೆ ನಡೆಸಿ ಒತ್ತಾಯ ಮಾಡಿದ್ದರಿಂದ ವಿಮಾ ಕಂಪನಿಯವರು ಶೇಕಡಾ 25ರಷ್ಟು ಮಧ್ಯಂತರ ಪರಿಹಾರ ನೀಡಲು ಒಪ್ಪಿದ್ದು, ಇನ್ನೊಂದು ವಾರದಲ್ಲಿ ಮಧ್ಯಂತರ ಪರಿಹಾರ ಬಿಡುಗಡೆಯಾಗುವ ವಿಶ್ವಾಸವಿದೆ. ಹಾಗೆಯೇ ಬರಗಾಲ ಸ್ಥಿತಿಯನ್ನು ಕೇಂದ್ರ ಅಧ್ಯಯನ ತಂಡ ವೀಕ್ಷಿಸಿದ್ದು, ನರೇಗಾ ಅಡಿಯಲ್ಲಿ 150 ದಿನಗಳ ಬರ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications