ಕುಂದಗೋಳ ಉಪ ಚುನಾವಣೆ : ಶೇ.82.42 ರಷ್ಟು ಮತದಾನ
ಧಾರವಾಡ, ಮೇ 20 : ಧಾರವಾಡ ಜಿಲ್ಲೆಯ ಕುಂದಗೋಳ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಶಾಂತಿಯುತವಾಗಿ ಮುಕ್ತಾಯಗೊಂಡಿದೆ. ಶೇ 82.42ರಷ್ಟು ಮತದಾನವಾಗಿದ್ದು, ಮೇ 23ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.
ಕುಂದಗೋಳ ವಿಧಾನಸಭಾ ಉಪಚುನಾವಣೆಗೆ ಭಾನುವಾರ ಮತದಾನ ನಡೆಯಿತು. 81,938 ಪುರುಷರು, 74,188 ಮಹಿಳೆಯರು, 2 ಇತರ ಮತದಾರರು ಸೇರಿ ಒಟ್ಟು 1,56,128 ಮತದಾರರು ಮತ ಚಲಾವಣೆ ಮಾಡಿದ್ದಾರೆ.
ಮೇ 19ರಂದು ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಯಿತು. 9 ಗಂಟೆವರೆಗೆ ಶೇ.9.59 ರಷ್ಟು, 11 ಗಂಟೆ ವೇಳೆಗೆ ಶೇ.24.20 ರಷ್ಟು, ಮಧ್ಯಾಹ್ನ 1 ಗಂಟೆ ವೇಳೆಗೆ ಶೇ 44.50, ಮಧ್ಯಾಹ್ನ 3 ಗಂಟೆಗೆ ಶೇ. 59.50ರಷ್ಟು ಮತದಾನ ನಡೆದಿತ್ತು. ಅಂತಿಮವಾಗಿ 82.42ರಷ್ಟು ಮತದಾನವಾಗಿದೆ.
2018ರ ವಿಧಾನಸಭೆ ಚುನಾವಣೆಯಲ್ಲಿ ಶೇ. 78.67 ರಷ್ಟು ಮತದಾನವಾಗಿತ್ತು. ಈ ಬಾರಿ ಶೇ. 3.75 ರಷ್ಟು ಮತದಾನ ಹೆಚ್ಚಳವಾಗಿದೆ. ಕಣದಲ್ಲಿದ್ದ ಎಲ್ಲಾ 8 ಅಭ್ಯರ್ಥಿಗಳ ಭವಿಷ್ಯ ಮತಯಂತ್ರದಲ್ಲಿ ಭದ್ರವಾಗಿದ್ದು, ಮೇ 23ರಂದು ಮತ ಎಣಿಕೆ ನಡೆಯಲಿದೆ....

8 ಅಭ್ಯರ್ಥಿಗಳ ಭವಿಷ್ಯ ಭದ್ರ
ಕುಂದಗೋಳ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಮೇ 19ರ ಭಾನುವಾರ ನಡೆಯಿತು. ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಿತು. ಎಡಗೈ ತೋರು ಬೆರಳಿಗೆ ಶಾಹಿ ಹಾಕಲಾಯಿತು. 8 ಅಭ್ಯರ್ಥಿಗಳ ಭವಿಷ್ಯ ಮತಯಂತ್ರ ಸೇರಿದ್ದು, ಮೇ 23ರಂದು ಫಲಿತಾಂಶ ಪ್ರಕಟವಾಗಲಿದೆ.

ಬಿಜೆಪಿ-ಮೈತ್ರಿಕೂಟ ನೇರ ಹಣಾಹಣಿ
ಕುಂದಗೋಳ ಉಪ ಚುನಾವಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಗಳ ನಡುವೆ ನೇರ ಹಣಾಹಣಿ ಇದೆ. ಬಿಜೆಪಿಯಿಂದ ಎಸ್.ಐ.ಚಿಕ್ಕನಗೌಡರ್ ಮತ್ತು ಕಾಂಗ್ರೆಸ್-ಜೆಡಿಎಸ್ನಿಂದ ಕುಸುಮಾ ಶಿವಳ್ಳಿ ಅವರು ಅಭ್ಯರ್ಥಿಗಳು.

ಈ ಬಾರಿ ಗೆಲುವು ಖಚಿತ
ಬಿಜೆಪಿ ಅಭ್ಯರ್ಥಿ ಎಸ್.ಐ.ಚಿಕ್ಕನಗೌಡ ಅವರು ಮಾಧ್ಯಮಗಳ ಜೊತೆ ಮಾತನಾಡಿ, 'ಕುಂದಗೋಳದಲ್ಲಿ ಈ ಬಾರಿ ಬಿಜೆಪಿ ಪರವಾದ ಅಲೆ ಇದೆ. ಕಳೆದ ಬಾರಿ ನಾನು 634 ಮತಗಳಿಂದ ಸೋತಿದ್ದೆ. ಈ ಬಾರಿ 21 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸುವ ವಿಶ್ವಾಸವಿದೆ' ಎಂದು ಹೇಳಿದರು.

ಉಪ ಚುನಾವಣೆ ಮೇಲೆ ಕಣ್ಣು
ಕುಂದಗೋಳ ಮತ್ತು ಚಿಂಚೋಳಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಫಲಿತಾಂಶ ಕುತೂಹಲಕ್ಕೆ ಕಾರಣವಾಗಿದೆ. ಮೈತ್ರಿ ಸರ್ಕಾರದ ಮೇಲಿನ ಜನರ ನಂಬಿಕೆ ಈ ಚುನಾವಣೆ ಮೇಲೆ ಅವಲಂಬಿತವಾಗಿವೆ. ಸರ್ಕಾರ ಅಳಿವು-ಉಳಿವಿನ ಲೆಕ್ಕಾಚಾರವೂ ಫಲಿತಾಂಶದ ಮೇಲೆ ನಿಂತಿದೆ.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications