ಧಾರವಾಡ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

84ನೇ ಕನ್ನಡ ಸಾಹಿತ್ಯ ಸಮ್ಮೇಳನದ ದಿನಾಂಕ ಅಂತಿಮ

|
Google Oneindia Kannada News

ಧಾರವಾಡ, ನವೆಂಬರ್ 11 : 84ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ದಿನಾಂಕ ಅಂತಿಮವಾಗಿದೆ. ಜನವರಿ 4 ರಿಂದ ಮೂರು ದಿನಗಳ ಕಾಲ ಧಾರವಾಡದಲ್ಲಿ ಸಾಹಿತ್ಯ ಸಮ್ಮೇಳನ ನಡೆಯಲಿದೆ.

ಕಳೆದ ವರ್ಷದ ನವೆಂಬರ್‌ನಲ್ಲಿ ಮೈಸೂರಿನಲ್ಲಿ ಸಾಹಿತ್ಯ ಸಮ್ಮೇಳನ ನಡೆದಿತ್ತು. ಈ ವರ್ಷವೂ ನವೆಂಬರ್‌ನಲ್ಲಿ ಸಾಹಿತ್ಯ ಸಮ್ಮೇಳನ ನಡೆಸಬೇಕು ಎಂದು ಒತ್ತಾಯಿಸಲಾಗಿತ್ತು. ಆದರೆ, ಡಿಸೆಂಬರ್ 7ರಿಂದ ಸಾಹಿತ್ಯ ಸಮ್ಮೇಳನ ನಡೆಸುವುದಾಗಿ ದಿನಾಂಕ ಘೋಷಣೆಯಾಗಿತ್ತು.

ಕನ್ನಡ ಭಾಷೆಯ ಗುಣಮಟ್ಟವನ್ನು ಹೆಚ್ಚಿಸುವುದೇ ಕನ್ನಡದ ಅಭಿವೃದ್ಧಿಕನ್ನಡ ಭಾಷೆಯ ಗುಣಮಟ್ಟವನ್ನು ಹೆಚ್ಚಿಸುವುದೇ ಕನ್ನಡದ ಅಭಿವೃದ್ಧಿ

ಆದರೆ, ಸಾಹಿತ್ಯ ಸಮ್ಮೇಳನ ನಡೆಸಲು ಅಗತ್ಯ ಸಿದ್ಧತೆಗಳು ಆಗದ ಹಿನ್ನಲೆಯಲ್ಲಿ ಜನವರಿ 6, 2019ರಿಂದ ಸಾಹಿತ್ಯ ಸಮ್ಮೇಳನ ನಡೆಸುವುದಾಗಿ ಘೋಷಣೆ ಮಾಡಲಾಗಿತ್ತು. ಈಗ ದಿನಾಂಕ ಮತ್ತೆ ಬದಲಾವಣೆಯಾಗಿದ್ದು, ಜನವರಿ 4ರಿಂದ ಸಮ್ಮೇಳನ ನಡೆಯಲಿದೆ.

ಕನ್ನಡ ಆಡಳಿತ ಭಾಷೆಯಾಗಲು ಕುಮಾರಣ್ಣನ ದಿಟ್ಟ ಹೆಜ್ಜೆಕನ್ನಡ ಆಡಳಿತ ಭಾಷೆಯಾಗಲು ಕುಮಾರಣ್ಣನ ದಿಟ್ಟ ಹೆಜ್ಜೆ

84th Kannada Sahithya Sammelan from January 4

ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ್ ಅವರು, 'ಜನವರಿ 8ರಂದು ಸಾರಿಗೆ ಮುಷ್ಕರ ಇದೆ. ಅಂದು ಕೆಎಸ್ಆರ್‌ಟಿಸಿ ಬಸ್ ಮತ್ತು ಇತರ ವಾಹನಗಳ ಸಂಚಾರ ಇರುವುದು ಅನುಮಾನ. ಆದ್ದರಿಂದ, ಜನವರಿ 4ರಿಂದ ಸಾಹಿತ್ಯ ಸಮ್ಮೇಳನ ನಡೆಸಲು ತೀರ್ಮಾನಿಸಲಾಗಿದೆ' ಎಂದು ಹೇಳಿದ್ದಾರೆ.

ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ: ಬೆಳಗಾವಿ ಅಧಿವೇಶನದಲ್ಲಿ ಮಂಡನೆಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ: ಬೆಳಗಾವಿ ಅಧಿವೇಶನದಲ್ಲಿ ಮಂಡನೆ

84ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಧಾರವಾಡದಲ್ಲಿ ನಡೆಯಲಿದೆ. ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಚಂದ್ರಶೇಖರ್ ಕಂಬಾರ ಅವರು ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಮೈಸೂರಿನಲ್ಲಿ ನಡೆದ 83ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 1.5 ಲಕ್ಷ ಜನರು ಪಾಲ್ಗೊಂಡಿದ್ದರು. ಇದಕ್ಕಿಂತ ಹೆಚ್ಚಿನ ಸಂಖ್ಯೆಯ ಜನರು ಧಾರವಾಡದಲ್ಲಿ ಸೇರಬಹುದು ಎಂದು ಅಂದಾಜಿಸಲಾಗಿದೆ.

English summary
The Kannada Sahithya Parishat announced that, 84th Kannada Sahithya Sammelan will be held for three days from January 4, 2019 in Dharwad, Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X