ಹುಬ್ಬಳ್ಳಿ-ಬೆಂಗಳೂರು ನಡುವೆ ಏರ್ ಪೆಗಾಸಸ್ ವಿಮಾನ ಸೇವೆ
ಹುಬ್ಬಳ್ಳಿ, ಏ.2 : ಬೆಂಗಳೂರು ಮೂಲದ ಏರ್ ಪೆಗಾಸಸ್ ವಿಮಾನಯಾನ ಸಂಸ್ಥೆ ಏ.12ರಿಂದ ಹುಬ್ಬಳ್ಳಿಗೆ ವಿಮಾನಯಾನ ಸಂಪರ್ಕ ಕಲ್ಪಿಸಲಿದೆ. ಬೆಂಗಳೂರು-ಹುಬ್ಬಳ್ಳಿ ಮತ್ತು ಬೆಂಗಳೂರು-ತಿರುವಂತನಪುರಕ್ಕೆ ನೂತನ ವಿಮಾನ ಸೇವೆ ಆರಂಭವಾಗಲಿದೆ.
ಏರ್ ಪೆಗಾಸಸ್ ಸಂಸ್ಥೆ ಮುಖ್ಯಸ್ಥ ಶೈಸನ್ ಥಾಮಸ್ ಈ ಕುರಿತು ಮಾಹಿತಿ ನೀಡಿದ್ದಾರೆ. ಕಡಿಮೆ ಬೆಲೆಯಲ್ಲಿ ಉತ್ತಮ ಪ್ರಯಾಣ ಸೇವೆ ಒದಗಿಸುವ ಉದ್ದೇಶದಿಂದ ಸಂಸ್ಥೆ ಬೆಂಗಳೂರು-ಹುಬ್ಬಳ್ಳಿ ಮತ್ತು ಬೆಂಗಳೂರು ತಿರುವನಂತಪುರ ನಡುವೆ ಸೇವೆಯನ್ನು ಆರಂಭಿಸಲಿದೆ ಎಂದರು. [ಹುಬ್ಬಳ್ಳಿಗೆ ಅಕ್ಟೋಬರ್ ವರೆಗೆ ಸ್ಪೈಸ್ ಜೆಟ್ ಹಾರಾಟವಿಲ್ಲ]

ಈ ಮಾರ್ಗಗಳಲ್ಲಿ 66 ಆಸನ ವ್ಯವಸ್ಥೆ ಹೊಂದಿರುವ ಎರಡು ವಿಮಾನಗಳು ಸಂಚಾರ ನಡೆಸಲಿವೆ. ಎರಡೂ ಮಾರ್ಗದಲ್ಲಿಯೂ 1,234 ರೂ. ದರ ನಿಗದಿ ಮಾಡಲಾಗಿದೆ ಎಂದರು. ಬೆಂಗಳೂರು-ಹುಬ್ಬಳ್ಳಿ ನಡುವೆ 1 ಗಂಟೆ ಮತ್ತು ಬೆಂಗಳೂರು ತಿರುವನಂತಪುರ ನಡುವೆ 1 ಗಂಟೆ 30 ನಿಮಿಷದಲ್ಲಿ ಪ್ರಯಾಣ ಮಾಡಬಹುದು ಎಂದು ಹೇಳಿದರು.[ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ತಪ್ಪಿದ ಭಾರೀ ಅನಾಹುತ]
ಏ.12ರಿಂದ ಈ ಪ್ರಾದೇಶಿಕ ವಿಮಾನಯಾನ ಸಂಚಾರ ಆರಂಭವಾಗಲಿದೆ. ಅಂದು ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನಿಂದ ಮೊದಲ ವಿಮಾನ ಹುಬ್ಬಳ್ಳಿಗೆ ಹಾರಾಟ ನಡೆಸಲಿದೆ ಎಂದು ಮಾಹಿತಿ ನೀಡಿದರು.
ಬೆಂಗಳೂರು-ಹುಬ್ಬಳ್ಳಿ ವೇಳಾಪಟ್ಟಿ : ಬೆಂಗಳೂರು-ಹುಬ್ಬಳ್ಳಿ ನಡುವೆ ಸಂಚರಿಸುವ ವಿಮಾನ ಪ್ರತಿದಿನ ಬೆಳಗ್ಗೆ 10.30ಕ್ಕೆ ಬೆಂಗಳೂರಿನಿಂದ ಹೊರಟು ಹುಬ್ಬಳ್ಳಿ ತಲುಪಲಿದೆ. ಹುಬ್ಬಳ್ಳಿಯಿಂದ ಮಧ್ಯಾಹ್ನ 12.30ಕ್ಕೆ ಹೊರಟು ಬೆಂಗಳೂರಿಗೆ ವಾಪಸ್ ಆಗಲಿದೆ.
ಸ್ಪೈಸ್ ಜೆಟ್ ಹಾರಾಟವಿಲ್ಲ : ಅಕ್ಟೋಬರ್ 2015ರ ತನಕ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ವಿಮಾನಯಾನ ಸೇವೆ ನೀಡುವುದಿಲ್ಲ ಎಂದು ಸ್ಪೈಸ್ಜೆಟ್ ಕೆಲವು ದಿನಗಳ ಹಿಂದೆ ಹೇಳಿತ್ತು. ಮಾ.8ರ ಭಾನುವಾರ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸ್ಪೈಸ್ಜೆಟ್ ವಿಮಾನ ಲ್ಯಾಂಡ್ ಆಗುವ ವೇಳೆ ಅಪಘಾತ ಸಂಭವಿಸಿತ್ತು. ಆನಂತರ ವಿಮಾನ ಸೇವೆ ರದ್ದುಗೊಳಿಸಲಾಗಿತ್ತು.
-
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Railway Food: ರೈಲು ಪ್ರಯಾಣಿಕರ ಬಳಿ ಬರುತ್ತೆ ಆಹಾರ: ರೈಲ್ವೆ ಇಲಾಖೆಗೆ ಕಂಪನಿಗಳ ಸಾಥ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ












Click it and Unblock the Notifications