'ಬೇಕೇ ಬೇಕು, ಬಾರ್ ಬೇಕು': ಧಾರವಾಡದಲ್ಲೊಂದು 'ಟೈಟ್' ಪ್ರತಿಭಟನೆ
ಧಾರವಾಡ, ನವೆಂಬರ್ 22: 'ಬೇಕೇ.. ಬೇಕು ಬಾರ್ ಬೇಕು, ಬೇಡ.. ಬೇಡ... ಬಾರ್ ಮುಚ್ಚೋದು ಬೇಡ' ಹೀಗೆ ಘೋಷಣೆ ಕೂಗುತ್ತಾ ಪ್ರತಿಭಟನೆ ಮಾಡುತ್ತಿದ್ದ ದೃಶ್ಯ ಧಾರವಾಡದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಇಂದು ಕಂಡುಬಂದಿತು.
ಧಾರವಾಡದ ಹೆಬ್ಬಳ್ಳಿ ಗ್ರಾಮದ 'ಗೌರವಾನ್ವಿತ' ಕುಡುಕರೆಲ್ಲಾ ಇಂದು ಒಗ್ಗಟ್ಟು ಪ್ರದರ್ಶಿಸಿ ತಮಗೆ ಆಗುತ್ತಿರುವ 'ಅನ್ಯಾಯ'ದ ವಿರುದ್ಧ ಸಿಡಿದು ನಿಂತಿದ್ದರು!
ತಮ್ಮ ಊರು ಹೆಬ್ಬಳ್ಳಿಯಲ್ಲಿ ಮದ್ಯದಂಗಡಿಯನ್ನು ಬಂದ್ ಮಾಡಬೇಕೆಂದು ಮದ್ಯ ವಿರೋಧಿ ಬಣ ಮಾಡಿದ್ದ ಪ್ರತಿಭಟನೆಯನ್ನು ಜಿಲ್ಲಾಧಿಕಾರಿಗಳು ಮನ್ನಿಸಿ ವೈನ್ ಶಾಪ್ ಮುಚ್ಚಲು ಕ್ರಮ ಕೈಗೊಂಡಿದ್ದರು. ಆದರೆ ಅವರನ್ನು ತಡೆಯಬೇಕೆಂದು ಇಂದು ಕುಡುಕರು ಒಗ್ಗಟ್ಟಾಗಿ ಪ್ರತಿಹೋರಾಟ ಮಾಡಿದರು.

ಕುಡಿದು ಟೈಟಾದ ಕೃಶ ಕಾಯದ ಕೆಲವು ಮಂದಿ ಕುಡುಕರು, ನಿಲ್ಲಲು ತ್ರಾಣವಿಲ್ಲದಿದ್ದರೂ ಸಹ ವೈನ್ ಶಾಪ್ಗಾಗಿ ಬಲು ಪ್ರಯಾಸಪಟ್ಟು ವೈನ್ ಶಾಪ್ ಪರ ಘೋಷಣೆಗಳನ್ನು ಕೂಗಿದರು.
ವೈನ್ ಶಾಪ್ ಮುಚ್ಚಿದರೆ ಕುಡಿಯಲು ನಗರಕ್ಕೆ ಬರಬೇಕಾಗುತ್ತದೆ. ನಮ್ಮ ಅತ್ಯಮೂಲ್ಯ ಸಮಯ ಮತ್ತು ಹಣ ಇದರಿಂದ ವ್ಯರ್ಥವಾಗುತ್ತದೆ ಹಾಗಾಗಿ ಹೆಬ್ಬಳ್ಳಿಯ ವೈನ್ ಶಾಪ್ ಮುಚ್ಚಬೇಡಿ ಎಂದು ಅವರು ಜಿಲ್ಲಾಡಳಿತದ ಬಳಿ ಅಳಲು ತೋಡಿಕೊಂಡರು.
ಜಿಲ್ಲಾಧಿಕಾರಿಗಳ ಕಚೇರಿ ಒಳಗೆ ಯಾರೋ ಒಬ್ಬ ಪ್ರಥಮ ದರ್ಜೆ ಅಧಿಕಾರಿಯೊಬ್ಬರನ್ನು ಹಿಡಿದು ಕರೆತಂದು ಅವರಿಗೆ ವೈನ್ ಶಾಪ್ ಮುಚ್ಚಬಾರದೆಂದು ಜಿಲ್ಲಾಡಳಿತಕ್ಕೆ ಮನವಿ ಪತ್ರವೊಂದನ್ನೂ ಬರೆದು ನೀಡಿದರು.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ












Click it and Unblock the Notifications