'ಬೇಕೇ ಬೇಕು, ಬಾರ್ ಬೇಕು': ಧಾರವಾಡದಲ್ಲೊಂದು 'ಟೈಟ್' ಪ್ರತಿಭಟನೆ
ಧಾರವಾಡ, ನವೆಂಬರ್ 22: 'ಬೇಕೇ.. ಬೇಕು ಬಾರ್ ಬೇಕು, ಬೇಡ.. ಬೇಡ... ಬಾರ್ ಮುಚ್ಚೋದು ಬೇಡ' ಹೀಗೆ ಘೋಷಣೆ ಕೂಗುತ್ತಾ ಪ್ರತಿಭಟನೆ ಮಾಡುತ್ತಿದ್ದ ದೃಶ್ಯ ಧಾರವಾಡದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಇಂದು ಕಂಡುಬಂದಿತು.
ಧಾರವಾಡದ ಹೆಬ್ಬಳ್ಳಿ ಗ್ರಾಮದ 'ಗೌರವಾನ್ವಿತ' ಕುಡುಕರೆಲ್ಲಾ ಇಂದು ಒಗ್ಗಟ್ಟು ಪ್ರದರ್ಶಿಸಿ ತಮಗೆ ಆಗುತ್ತಿರುವ 'ಅನ್ಯಾಯ'ದ ವಿರುದ್ಧ ಸಿಡಿದು ನಿಂತಿದ್ದರು!
ತಮ್ಮ ಊರು ಹೆಬ್ಬಳ್ಳಿಯಲ್ಲಿ ಮದ್ಯದಂಗಡಿಯನ್ನು ಬಂದ್ ಮಾಡಬೇಕೆಂದು ಮದ್ಯ ವಿರೋಧಿ ಬಣ ಮಾಡಿದ್ದ ಪ್ರತಿಭಟನೆಯನ್ನು ಜಿಲ್ಲಾಧಿಕಾರಿಗಳು ಮನ್ನಿಸಿ ವೈನ್ ಶಾಪ್ ಮುಚ್ಚಲು ಕ್ರಮ ಕೈಗೊಂಡಿದ್ದರು. ಆದರೆ ಅವರನ್ನು ತಡೆಯಬೇಕೆಂದು ಇಂದು ಕುಡುಕರು ಒಗ್ಗಟ್ಟಾಗಿ ಪ್ರತಿಹೋರಾಟ ಮಾಡಿದರು.

ಕುಡಿದು ಟೈಟಾದ ಕೃಶ ಕಾಯದ ಕೆಲವು ಮಂದಿ ಕುಡುಕರು, ನಿಲ್ಲಲು ತ್ರಾಣವಿಲ್ಲದಿದ್ದರೂ ಸಹ ವೈನ್ ಶಾಪ್ಗಾಗಿ ಬಲು ಪ್ರಯಾಸಪಟ್ಟು ವೈನ್ ಶಾಪ್ ಪರ ಘೋಷಣೆಗಳನ್ನು ಕೂಗಿದರು.
ವೈನ್ ಶಾಪ್ ಮುಚ್ಚಿದರೆ ಕುಡಿಯಲು ನಗರಕ್ಕೆ ಬರಬೇಕಾಗುತ್ತದೆ. ನಮ್ಮ ಅತ್ಯಮೂಲ್ಯ ಸಮಯ ಮತ್ತು ಹಣ ಇದರಿಂದ ವ್ಯರ್ಥವಾಗುತ್ತದೆ ಹಾಗಾಗಿ ಹೆಬ್ಬಳ್ಳಿಯ ವೈನ್ ಶಾಪ್ ಮುಚ್ಚಬೇಡಿ ಎಂದು ಅವರು ಜಿಲ್ಲಾಡಳಿತದ ಬಳಿ ಅಳಲು ತೋಡಿಕೊಂಡರು.
ಜಿಲ್ಲಾಧಿಕಾರಿಗಳ ಕಚೇರಿ ಒಳಗೆ ಯಾರೋ ಒಬ್ಬ ಪ್ರಥಮ ದರ್ಜೆ ಅಧಿಕಾರಿಯೊಬ್ಬರನ್ನು ಹಿಡಿದು ಕರೆತಂದು ಅವರಿಗೆ ವೈನ್ ಶಾಪ್ ಮುಚ್ಚಬಾರದೆಂದು ಜಿಲ್ಲಾಡಳಿತಕ್ಕೆ ಮನವಿ ಪತ್ರವೊಂದನ್ನೂ ಬರೆದು ನೀಡಿದರು.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications