ಧಾರವಾಡ: ದಿಂಗಾಲೇಶ್ವರ ಶ್ರೀಗಳ ಬೆನ್ನಿಗೆ ನಿಂತ 'ವೀರಶೈವ ಲಿಂಗಾಯತ ಮಹಾಸಭಾ'
ಧಾರವಾಡ, ಮಾರ್ಚ್ 28: ಧಾರವಾಡ ಲೋಕಸಭಾ ಕ್ಷೇತ್ರವನ್ನು ಬಹುಸಂಖ್ಯಾತ ಲಿಂಗಾಯತ ಸಮುದಾಯದ ನಾಯಕರಿಗೆ ನೀಡಬೇಕು ಎಂದು 'ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ' ಮನವಿ ಮಾಡಿದೆ. ಈ ಮೂಲಕ ಬಿಜೆಪಿ ಅಭ್ಯರ್ಥಿ ಧ್ವನಿ ಎತ್ತಿದ್ದ ಶ್ರೀ ಶಿರಹಟ್ಟಿ ಮಠದ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಪರ ಮಹಾಸಭಾ ನಿಂತಿದೆ.
ಬಿಜೆಪಿ ಅಭ್ಯಥಿ ಪ್ರಹ್ಲಾದ್ ಜೋಶಿ ವಿರುದ್ಧ ಮಾತನಾಡಿದ್ದ ಶ್ರೀ ದಿಂಗಾಲೇಶ್ವರ ಸ್ವಾಮೀಜಿಗಳ ಪರ ನಿಂತ 'ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ' ಮುಖ್ಯಸ್ಥರು ಗುರುವಾರ ಧಾರವಾಡದಲ್ಲಿ ಸುದ್ದಿಗೋಷ್ಠಿ ನಡೆಸಿದರು.

ಈ ವೇಳೆ ಮಾತನಾಡಿದ ಮಹಾಸಭಾದ ಈಶ್ವರ ಚಂದ್ರ ಹೊಸಮನಿ ಮತ್ತು ವೀರಣ್ಣ ಎಳಲ್ಲಿ ಅವರು, ಕಳೆದ ಹತ್ತಾರು ವರ್ಷಗಳಿಂದ ಧಾರವಾಡ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಲಿಂಗಾಯತ ವ್ಯಕ್ತಿ ಗುರುತಿಸಿಲ್ಲ. ಸಮಾಜದ ಒಂದು ಕಳಕಳಿ ಏನೆಂದರೆ, ನಾವು ನಮ್ಮ ಲಿಂಗಾಯತ ಸಮುದಾಯದ ವ್ಯಕ್ತಿಗೆ ಕೊಡಿ ಎಂದು ಅವರು ಆಗ್ರಹಿಸಿದರು.
ಏನು ಅಭಿವೃದ್ಧಿ ಆಗಿಲ್ಲ ಎಂದು ಆರೋಪ
ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ವೀರಶೈವ ಲಿಂಗಾಯತರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಇಲ್ಲಿ 6 ಲಕ್ಷ ಜನಸಂಖ್ಯೆ ಇದೆ, 25 ವರ್ಷಗಳಿಂದ ಸಮಾಜಮುಖಿ ಕೆಲಸ ಮಾಡಿದರೂ ಏನು ಅಭಿವೃದ್ಧಿ ಆಗಿಲ್ಲ ಎಂದು ಅವರು ದೂರಿದರು.
ನಾವು ಮಹಾಸಭೆಯನ್ನ ಹುಟ್ಟು ಹಾಕಿದ್ದೇವೆ. ನಾವು ರಾಜ್ಯದಲ್ಲಿ 45ರಷ್ಟು ಇದ್ದೇವೆ. ಧಾರವಾಡ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಶ್ರೀ ದಿಂಗಾಲೇಶ್ವರ ಶ್ರೀಗಳು ಮಠಾಧೀಶರ ಜೊತೆ ಸಭೆ ನಡೆಸಿದ್ದಾರೆ. ಅದರ ಪೂರಕವಾಗಿ ನಾವು ಅವರ ಬೆಂಬಲಕ್ಕೆ ನಿಲ್ಲುತಿದ್ದೇವೆ. ಸ್ವಾಮೀಜಿ ಧ್ವನಿಗೆ ಧ್ವನಿ ಗೂಡಿಸುತಿದ್ದೇವೆ ಎಂದು ಮಹಾಸಭಾ ಸದಸ್ಯರು ಸ್ಪಷ್ಟಪಡಿಸಿದರು.
ದಿಂಗಾಲೇಶ್ವರ ಶ್ರೀಗಳ ತೀರ್ಮಾನಕ್ಕೆ ಬದ್ಧ
ನಮಗೆ ಲಿಂಗಾಯತ ಅಭ್ಯರ್ಥಿ ಬೇಕು. ನಾವು ಬಿಜೆಪಿ ಪಕ್ಷ ಎಂದು ಹೋಗುತ್ತಿಲ್ಲ. ಈ ಕುರಿತು ಬಿಜೆಪಿ ನಾಯಕರಿಗೂ ಒತ್ತಾಯ ಮಾಡಿದ್ದೇವೆ. ಪ್ರಹ್ಲಾದ್ ಜೋಶಿ ಅವರಿಗೆ ಟಿಕೆಟ್ಗೆ ಮಹಾಸಭಾ ಸಹ ವಿರೋಧ ಮಾಡುತ್ತದೆ. ಇದೇ ಮಾರ್ಚ್ 31 ರೊಳಗೆ ಅಭ್ಯರ್ಥಿ ಬದಲಾವಣೆ ಮಾಡದಿದ್ದಲ್ಲಿ ನಾವು ತಿರ್ಮಾನ ಮಾಡುತ್ತೇವೆ ಎಂದು ಶ್ರೀಗಳು ತೀರ್ಮಾನಿಸಿದ್ದಾರೆ. ಅವರ ತೀರ್ಮಾನಕ್ಕೆ ಮಹಾಸಭಾ ಬದ್ಧವಾಗಿರಲಿದೆ ಎಂದರು.

ಸಮಾಜದ ಅಭ್ಯರ್ಥಿಗೆ ಸ್ಥಾನ ಸಿಗಬೇಕು
ಇಡೀ ಲಿಂಗಾಯತ ಸಮುದಾಯ ದಿಂಗಾಲೇಶ್ವರರಿಗೆ ಬೆಂಬಲಕ್ಕೆ ನಿಲ್ಲಲಿದೆ. ನಮ್ಮ ಜಿಲ್ಲಾ ಹಾಗೂ ರಾಜ್ಯ ಪದಾಧಿಕಾರಿಗಳಿಂದ ಬೆಂಬೆಲ ನೀಡುತ್ತೇವೆ. ಇದು ನಮ್ಮ ಸಮಾಜದ ಧ್ವನಿ, ನಮ್ಮ ಸಮಾಜ ತುಳಿತಕ್ಕೆ ಒಳಗಾಗುತ್ತಿದೆ. ಪ್ರಮುಖ ಘಟ್ಟ ಎಂದರೆ ಕೆಲಸ, ಆ ಕೆಲಸ ಆಗಬೇಕಾದರೆ ಅಭಿವೃದ್ಧಿ ಆಗಬೇಕು. ಆದರೆ ಕ್ಷೇತ್ರದಲ್ಲಿ ಅಭಿವೃದ್ಧಿಗಳು ಆಗುತ್ತಿಲ್ಲ. ನಮ್ಮ ಅಭ್ಯರ್ಥಿಯು ಸಮಾಜವನ್ನು ಕಟ್ಟುವ ಜೊತೆಗೆ ಕ್ಷೇತ್ರ ಅಭಿವೃದ್ಧಿಗೊಳಿಸಬೇಕು ಎಂಬುದೇ ನಮ್ಮ ಆಶಯವಾಗಿದೆ ಎಂದು ಅವರು ತಿಳಿಸಿದರು.
ಧಾರವಾಡ ಕ್ಷೇತ್ರದಿಂದ ಈ ಬಾರಿ ತಾವು ಚುನಾವಣಾ ಕಣಕ್ಕೆ ಇಳಿಯುವುದಾಗಿ ಹೇಳುವ ಮೂಲಕ ಹಾಗೂ ಅಭ್ಯರ್ಥಿ ಬದಲಾವಣೆಗೆ ಧ್ವನಿ ಎತ್ತು ಮೂಲಕ ಶ್ರೀ ದಿಂಗಾಲೇಶ್ವರ ಸ್ವಾಮೀಜಿ ಅವರು ಕಣ್ಣು ತೆರೆಸುವ ಕೆಲಸ ಮಾಡಿದ್ದಾರೆ.
ಎಲ್ಲ ಸ್ವಾಮೀಜಿಗಳು ಮಠ ಬಿಟ್ಟು ಹೊರ ಬಂದಿದ್ದಾರೆ. ಅವರು ತೊರಿಸಿದ ದಾರಿಯಲ್ಲಿ ನಾವು ಸಹ ಸಾಗುತ್ತೇವೆ. ನಮ್ಮ ಸಮುದಾಯಕ್ಕೆ ಎಲ್ಲಿ ರೀತಿಯ ಸೌಲಭ್ಯ ಸಿಗಲೆಂದು ನಾವು ಶ್ರೀಗಳ ಬೆಂಬಲಕ್ಕೆ ನಿಂತಿದ್ದೇವೆ. ಮಾರ್ಚ್ 31ರ ನಂತರ ಸ್ವಾಮೀಜಿ ತೆಗೆದುಕೊಳ್ಳುವ ನೀರ್ಣಯಕ್ಕೆ ನಾವು ಬದ್ಧ ಎಂದು ಹೇಳಿದರು.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video












Click it and Unblock the Notifications