Amarnath Yatra: ಪಂಚತರಣಿಯಲ್ಲಿ ಸಿಲುಕಿಕೊಂಡ ಧಾರವಾಡದ ಐವರು
ಧಾರವಾಡ, ಜುಲೈ, 09: ಅಮರನಾಥ ಯಾತ್ರೆಗೆ ಹೋಗಿದ್ದ ಧಾರವಾಡದ ಐದು ಜನ ಪಂಚತರಣಿ ರಸ್ತೆ ಮಧ್ಯೆಯೇ ಸಿಲುಕಿಕೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಭಾರೀ ಮಳೆಯಾಗುತ್ತಿರುವ ಪರಿಣಾಮ ಅಮರನಾಥದಲ್ಲಿ ರಸ್ತೆ ಸಂಪರ್ಕ ಬಂದ್ ಆಗಿದೆ. ಅಲ್ಲದೆ ಜುಲೈ 3ರಂದು ಧಾರವಾಡದಿಂದ ಹೋಗಿದ್ದ ಐದು ಜನ ಜುಲೈ 6 ರಂದು ಅಮರನಾಥ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಸಂದರ್ಭದಲ್ಲಿ ವಿಪರೀತ ಮಳೆ ಆರಂಭಗೊಂಡು ರಸ್ತೆ ಸಂಪರ್ಕ ಕಡಿತಗೊಂಡಿದೆ.

ಇದರಿಂದ ಸೇನಾ ಪಡೆಯುವರು ಪ್ರವಾಸಕ್ಕೆ ಬಂದಿದ್ದ ಎಲ್ಲರನ್ನೂ ಪಂಚತರಣಿ ಎಂಬಲ್ಲಿ ಟೆಂಟ್ನಲ್ಲಿ ಇಟ್ಟಿದ್ದಾರೆ. ಅದರಲ್ಲಿ ಧಾರವಾಡದ ರಾಕೇಶ್ ನಾಝರೆ, ವಿಠ್ಠಲ ಬಾಚಗುಂಡೆ, ನಾಗರಾಜ ಹಳಕಟ್ಟಿ, ಹರೀಶ್ ಸಾಳುಂಕೆ, ಮಡಿವಾಳಪ್ಪ ಕೊಟಬಾಗಿ ಎಂಬುವವರೂ ಇದ್ದಾರೆ. ಇವರ ಜೊತೆಗೆ ಬೆಂಗಳೂರು, ರಾಯಚೂರು, ಗದಗ ಸೇರದಂತೆ ಕರ್ನಾಟಕದ ಅನೇಕ ಜಿಲ್ಲೆಯ ಜನರು ಕೂಡ ಇದ್ದಾರೆ.
ರಸ್ತೆ ಸಂಪರ್ಕ ಕಡಿತಗೊಂಡಿರುವುದರಿಂದ ಪ್ರವಾಸಿಗರನ್ನು ಖಾಸಗಿ ಟೆಂಟ್ನಲ್ಲಿ ಸೇನಾ ಪಡೆಯುವರು ಇಟ್ಟಿದ್ದಾರೆ. ಅಲ್ಲಿ ಊಟದ ವ್ಯವಸ್ಥೆ ಕೂಡ ಸರಿಯಾಗಿಲ್ಲ. ಒಬ್ಬೊಬ್ಬ ಟೆಂಟ್ನವರು 600 ರೂಪಾಯಿ ಪಡೆದುಕೊಳ್ಳುತ್ತಿದ್ದು, ಊಟ ಮಾಡಿದರೆ ವಾಂತಿ, ಬೇಧಿ ಆಗುತ್ತಿದೆ. ಮತ್ತೊಂದೆಡೆ ವಿಪರೀತ ಮಳೆ ಸುರಿಯುತ್ತಿರುವುದರಿಂದ ಟೆಂಟ್ ಬಿಟ್ಟು ಹೊರಗಡೆ ಬರಲಾರದ ಪರಿಸ್ಥಿತಿ ನಿರ್ಮಾಣವಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರ ಕೂಡಲೇ ಪ್ರವಾಸಿಗರನ್ನು ಕರೆತರಲು ವ್ಯವಸ್ಥೆ ಮಾಡಬೇಕು ಎಂಬ ಒತ್ತಾಯವನ್ನು ಅಲ್ಲಿ ಸಿಲುಕಿಕೊಂಡಿರುವ ಕನ್ನಡಿಗರು ಮಾಡಿದ್ದಾರೆ.
-
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ












Click it and Unblock the Notifications