Amarnath Yatra: ಪಂಚತರಣಿಯಲ್ಲಿ ಸಿಲುಕಿಕೊಂಡ ಧಾರವಾಡದ ಐವರು
ಧಾರವಾಡ, ಜುಲೈ, 09: ಅಮರನಾಥ ಯಾತ್ರೆಗೆ ಹೋಗಿದ್ದ ಧಾರವಾಡದ ಐದು ಜನ ಪಂಚತರಣಿ ರಸ್ತೆ ಮಧ್ಯೆಯೇ ಸಿಲುಕಿಕೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಭಾರೀ ಮಳೆಯಾಗುತ್ತಿರುವ ಪರಿಣಾಮ ಅಮರನಾಥದಲ್ಲಿ ರಸ್ತೆ ಸಂಪರ್ಕ ಬಂದ್ ಆಗಿದೆ. ಅಲ್ಲದೆ ಜುಲೈ 3ರಂದು ಧಾರವಾಡದಿಂದ ಹೋಗಿದ್ದ ಐದು ಜನ ಜುಲೈ 6 ರಂದು ಅಮರನಾಥ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಸಂದರ್ಭದಲ್ಲಿ ವಿಪರೀತ ಮಳೆ ಆರಂಭಗೊಂಡು ರಸ್ತೆ ಸಂಪರ್ಕ ಕಡಿತಗೊಂಡಿದೆ.

ಇದರಿಂದ ಸೇನಾ ಪಡೆಯುವರು ಪ್ರವಾಸಕ್ಕೆ ಬಂದಿದ್ದ ಎಲ್ಲರನ್ನೂ ಪಂಚತರಣಿ ಎಂಬಲ್ಲಿ ಟೆಂಟ್ನಲ್ಲಿ ಇಟ್ಟಿದ್ದಾರೆ. ಅದರಲ್ಲಿ ಧಾರವಾಡದ ರಾಕೇಶ್ ನಾಝರೆ, ವಿಠ್ಠಲ ಬಾಚಗುಂಡೆ, ನಾಗರಾಜ ಹಳಕಟ್ಟಿ, ಹರೀಶ್ ಸಾಳುಂಕೆ, ಮಡಿವಾಳಪ್ಪ ಕೊಟಬಾಗಿ ಎಂಬುವವರೂ ಇದ್ದಾರೆ. ಇವರ ಜೊತೆಗೆ ಬೆಂಗಳೂರು, ರಾಯಚೂರು, ಗದಗ ಸೇರದಂತೆ ಕರ್ನಾಟಕದ ಅನೇಕ ಜಿಲ್ಲೆಯ ಜನರು ಕೂಡ ಇದ್ದಾರೆ.
ರಸ್ತೆ ಸಂಪರ್ಕ ಕಡಿತಗೊಂಡಿರುವುದರಿಂದ ಪ್ರವಾಸಿಗರನ್ನು ಖಾಸಗಿ ಟೆಂಟ್ನಲ್ಲಿ ಸೇನಾ ಪಡೆಯುವರು ಇಟ್ಟಿದ್ದಾರೆ. ಅಲ್ಲಿ ಊಟದ ವ್ಯವಸ್ಥೆ ಕೂಡ ಸರಿಯಾಗಿಲ್ಲ. ಒಬ್ಬೊಬ್ಬ ಟೆಂಟ್ನವರು 600 ರೂಪಾಯಿ ಪಡೆದುಕೊಳ್ಳುತ್ತಿದ್ದು, ಊಟ ಮಾಡಿದರೆ ವಾಂತಿ, ಬೇಧಿ ಆಗುತ್ತಿದೆ. ಮತ್ತೊಂದೆಡೆ ವಿಪರೀತ ಮಳೆ ಸುರಿಯುತ್ತಿರುವುದರಿಂದ ಟೆಂಟ್ ಬಿಟ್ಟು ಹೊರಗಡೆ ಬರಲಾರದ ಪರಿಸ್ಥಿತಿ ನಿರ್ಮಾಣವಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರ ಕೂಡಲೇ ಪ್ರವಾಸಿಗರನ್ನು ಕರೆತರಲು ವ್ಯವಸ್ಥೆ ಮಾಡಬೇಕು ಎಂಬ ಒತ್ತಾಯವನ್ನು ಅಲ್ಲಿ ಸಿಲುಕಿಕೊಂಡಿರುವ ಕನ್ನಡಿಗರು ಮಾಡಿದ್ದಾರೆ.
-
Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು












Click it and Unblock the Notifications