Get Updates
Get notified of breaking news, exclusive insights, and must-see stories!

Amarnath Yatra: ಸಂಕಷ್ಟಕ್ಕೆ ಸಿಲುಕಿದ್ದ ಯಾತ್ರಾರ್ಥಿಗಳ ಏರ್‌ ಲಿಫ್ಟ್ ಆರಂಭ

ಧಾರವಾಡ, ಜುಲೈ, 09: ವಿಪರೀತ ಮಳೆ ಹಾಗೂ ಗುಡ್ಡ ಕುಸಿತದಿಂದ ಅಮರನಾಥ ಯಾತ್ರೆಗೆ ಹೋದವರು ರಸ್ತೆ ಮಧ್ಯೆಯೇ ಸಿಲುಕಿಕೊಂಡು ಪರದಾಡುವಂತಾಗಿದೆ. ಹಾಗೆಯೇ ಧಾರವಾಡದಿಂದಲೂ ಐದು ಜನ ಅಮರನಾಥ ಯಾತ್ರೆಗೆ ಹೋಗಿದ್ದು, ಅವರು ಪಂಚತರಣಿಯಲ್ಲಿ ಸಿಲುಕಿಕೊಂಡಿದ್ದಾರೆ. ಸದ್ಯ ಇದೀಗ ಕೇಂದ್ರ ಸರ್ಕಾರ ಇವರನ್ನು ಹೆಲಿಕಾಪ್ಟರ್‌ ಮೂಲಕ ಏರ್ ಲಿಫ್ಟ್ ಮಾಡುವ ಕಾರ್ಯ ಆರಂಭಿಸಿದೆ.

ಸದ್ಯ ಧಾರವಾಡದ ಐದು ಜನ ಸಿಲುಕಿರುವ ಪಂಚತರಣಿಯಲ್ಲಿ ಏರ್‌ಲಿಫ್ಟ್ ಆರಂಭವಾಗಿದ್ದು, ಈಗಾಗಲೇ 300-350 ಜನರನ್ನು ಸುರಕ್ಷಿತ ಜಾಗಕ್ಕೆ ಕರೆದುಕೊಂಡು ಹೋಗಿ ಬಿಡಲಾಗಿದೆ. ಹೆಲಿಕಾಪ್ಟರ್ ಮುಖಾಂತರ ನಮ್ಮನ್ನೂ ಸುರಕ್ಷಿತ ಜಾಗಕ್ಕೆ ಕರೆದುಕೊಂಡು ಹೋಗುವ ಎಲ್ಲಾ ವ್ಯವಸ್ಥೆ ಆಗಿದೆ ಎಂದು ಪಂಚತರಣಿಯಲ್ಲಿ ಲಾಕ್ ಆಗಿರುವ ರಾಕೇಶ್‌ ನಾಝರೆ ಎಂಬುವವರು ಮಾಹಿತಿ ಹಂಚಿಕೊಂಡಿದ್ದಾರೆ.

Amarnath Yatra

ಜುಲೈ 6 ರಂದು ಅಮರನಾಥ ದರ್ಶನ

ಜುಲೈ 3ರಂದು ಧಾರವಾಡದಿಂದ ಹೋಗಿದ್ದ ಐದು ಜನ ಜುಲೈ 6 ರಂದು ಅಮರನಾಥ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಸಂದರ್ಭದಲ್ಲಿ ವಿಪರೀತ ಮಳೆ ಆರಂಭಗೊಂಡು ರಸ್ತೆ ಸಂಪರ್ಕ ಕಡಿತಗೊಂಡಿದೆ.

ಇದರಿಂದ ಸೇನಾ ಪಡೆಯುವರು ಪ್ರವಾಸಕ್ಕೆ ಬಂದಿದ್ದ ಎಲ್ಲರನ್ನೂ ಪಂಚತರಣಿ ಎಂಬಲ್ಲಿ ಟೆಂಟ್‌ನಲ್ಲಿ ಇಟ್ಟಿದ್ದಾರೆ. ಅದರಲ್ಲಿ ಧಾರವಾಡದ ರಾಕೇಶ್‌ ನಾಝರೆ, ವಿಠ್ಠಲ ಬಾಚಗುಂಡೆ, ನಾಗರಾಜ ಹಳಕಟ್ಟಿ, ಹರೀಶ್‌ ಸಾಳುಂಕೆ, ಮಡಿವಾಳಪ್ಪ ಕೊಟಬಾಗಿ ಎಂಬುವವರೂ ಇದ್ದಾರೆ. ಇವರ ಜೊತೆಗೆ ಬೆಂಗಳೂರು, ರಾಯಚೂರು, ಗದಗ ಸೇರದಂತೆ ಕರ್ನಾಟಕದ ಅನೇಕ ಜಿಲ್ಲೆಯ ಜನರು ಕೂಡ ಇದ್ದಾರೆ.

ರಸ್ತೆ ಸಂಪರ್ಕ ಕಡಿತಗೊಂಡಿರುವುದರಿಂದ ಪ್ರವಾಸಿಗರನ್ನು ಖಾಸಗಿ ಟೆಂಟ್‌ನಲ್ಲಿ ಸೇನಾ ಪಡೆಯುವರು ಇಟ್ಟಿದ್ದಾರೆ. ಅಲ್ಲಿ ಊಟದ ವ್ಯವಸ್ಥೆ ಕೂಡ ಸರಿಯಾಗಿಲ್ಲ. ಒಬ್ಬೊಬ್ಬ ಟೆಂಟ್‌ನವರು 600 ರೂಪಾಯಿ ಪಡೆದುಕೊಳ್ಳುತ್ತಿದ್ದು, ಊಟ ಮಾಡಿದರೆ ವಾಂತಿ, ಬೇಧಿ ಆಗುತ್ತಿದೆ. ಮತ್ತೊಂದೆಡೆ ವಿಪರೀತ ಮಳೆ ಸುರಿಯುತ್ತಿರುವುದರಿಂದ ಟೆಂಟ್ ಬಿಟ್ಟು ಹೊರಗಡೆ ಬರಲಾರದ ಪರಿಸ್ಥಿತಿ ನಿರ್ಮಾಣವಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರ ಕೂಡಲೇ ಪ್ರವಾಸಿಗರನ್ನು ಕರೆತರಲು ವ್ಯವಸ್ಥೆ ಮಾಡಬೇಕು ಎಂಬ ಒತ್ತಾಯವನ್ನು ಅಲ್ಲಿ ಸಿಲುಕಿಕೊಂಡಿರುವ ಕನ್ನಡಿಗರು ಮಾಡಿದ್ದಾರೆ.

ಮಳೆ ಆರ್ಭಟ ಹೆಚ್ಚಾದ ಪರಿಣಾಮ ಅಮರನಾಥದಲ್ಲಿ ರಸ್ತೆ ಸಂಪರ್ಕ ಬಂದ್ ಆಗಿದೆ. ಇದರಿಂದ ಕರ್ನಾಟದಿಂದ ತೆರಳಿದ್ದ ಹಲವು ಜಿಲ್ಲೆಗಳ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಪೈಕಿ ಯಾತ್ರೆಗೆ ಹೋಗಿದ್ದ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆ ಮೂಲದ ಪ್ರವಾಸಿಗರು ಯಾವುದೇ ತೊಂದರೆ ಇಲ್ಲದೆ ಸೇಫ್ ಆಗಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದೆ.

ಚಿಕ್ಕಮಗಳೂರಿನಿಂದ ಅಮರನಾಥ ಯಾತ್ರೆಗೆ ತೆರಳಿದ್ದ ಶ್ರೀನಿವಾಸ್, ಮಣಿ, ಭರತ್, ಚಂದ್ರಶೇಖರ್, ಮನೋಜ್ ಎಂಬ ಐವರು ಸುರಕ್ಷಿತವಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಕಳೆದ ವಾರ ಯಾತ್ರೆಗೆ ತೆರಳಿದ್ದ ಈ ಐವರ ತಂಡ ಇದೀಗ ಶೇಷನಾಗ್ ಪ್ರದೇಶದಲ್ಲಿದೆ ಎಂದು ತಿಳಿದುಬಂದಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+