ಧಾರವಾಡ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅಂಗನವಾಡಿ ಕಾರ್ಯಕರ್ತೆ ಪುತ್ರನ ಡಾಕ್ಟರ್ ಕನಸು ನನಸು

|
Google Oneindia Kannada News

ಧಾರವಾಡ, ಡಿಸೆಂಬರ್ 16: ವೈದ್ಯಕೀಯ ಸೀಟು ಪಡೆಯಬೇಕು ಎಂಬ ಅಂಗನವಾಡಿ ಕಾರ್ಯಕತೆ ಪುತ್ರನ ಕನಸು ನನಸಾಗಿದೆ. ಧಾರವಾಡ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಕುಟುಂಬವನ್ನು ಸನ್ಮಾನಿಸಿ ಪ್ರೋತ್ಸಾಹ ನೀಡಿದ್ದಾರೆ.

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಕಮಡೊಳ್ಳಿ ಗ್ರಾಮದ ಅಂಗನವಾಡಿ ಕಾರ್ಯಕರ್ತೆ ಶೈಲಜಾ ಹೂಗಾರ ಹಾಗೂ ನಿಜಗುಣೇಶ ಹೂಗಾರ ದಂಪತಿಗಳ ಪುತ್ರ ಸಿದ್ಧಲಿಂಗೇಶ ಅವರಿಗೆ ಮೆಡಿಕಲ್ ಸೀಟು ಸಿಕ್ಕಿದೆ.

ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಒಡಿಶಾದ ಟಾಪರ್‌ಗೆ 720 ಅಂಕನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಒಡಿಶಾದ ಟಾಪರ್‌ಗೆ 720 ಅಂಕ

ಬೆಂಗಳೂರು ಮೆಡಿಕಲ್ ಕಾಲೇಜಿನಲ್ಲಿ ವೈದ್ಯಕೀಯ ಸೀಟು ಸಿಕ್ಕಿದ್ದು, ವೈದ್ಯನಾಗಬೇಕು ಎಂಬ ಕನಸು ಈಡೇರಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯತಿ ಸಿಇಓ ಡಾ. ಬಿ. ಸುಶೀಲಾ ತಮ್ಮ ಕಚೇರಿಯಲ್ಲಿ ಕುಟುಂಬವನ್ನು ಸನ್ಮಾನಿಸಿದರು.

ಸಿಎಂ, ವೈದ್ಯಕೀಯ ಸಚಿವರ ನೆರವಿನಿಂದ 'ನೀಟ್' ಆಯ್ತು ಪರೀಕ್ಷೆ ಸಿಎಂ, ವೈದ್ಯಕೀಯ ಸಚಿವರ ನೆರವಿನಿಂದ 'ನೀಟ್' ಆಯ್ತು ಪರೀಕ್ಷೆ

Anganwadi Worker Son Got Medical Seat

ಜವಾಹರ ನವೋದಯ ವಿದ್ಯಾಲಯದಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಹಿರೇಮಲ್ಲೂರು ಈಶ್ವರನ್ ಪದವಿಪೂರ್ವ ಕಾಲೇಜಿನಲ್ಲಿ ಪಿಯುಸಿಯನ್ನು ಶೇ 94.25 ಅಂಕಗಳೊಂದಿಗೆ ಸಿದ್ಧಲಿಂಗೇಶ ಪೂರ್ಣಗೊಳಿಸಿದ್ದಾರೆ.

Positive News; ಉಗ್ರ ಸಂಘಟನೆ ಸೇರುವ ಯುವಕರ ಸಂಖ್ಯೆ ಇಳಿಕೆ Positive News; ಉಗ್ರ ಸಂಘಟನೆ ಸೇರುವ ಯುವಕರ ಸಂಖ್ಯೆ ಇಳಿಕೆ

Anganwadi Worker Son Got Medical Seat

Recommended Video

ಕುಮಾರಸ್ವಾಮಿ ಅವರ ಹುಟ್ಟುಹಬ್ಬಕ್ಕೆ ಪ್ರಧಾನಿ Modi ಯವರ ಶುಭಹಾರೈಕೆಗಳು | Oneindia Kannada

ನೀಟ್ ಪ್ರವೇಶ ಪರೀಕ್ಷೆಯಲ್ಲಿ 967 ನೇ rank ಪಡೆದು ವೈದ್ಯಕೀಯ ಸೀಟನ್ನು ಪಡೆದಿದ್ದಾರೆ. ಕುಂದಗೋಳ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅನ್ನಪೂರ್ಣ ಸಂಗಳದ ವಿದ್ಯಾರ್ಥಿಯ ಮೊದಲ ವರ್ಷದ ಎಂಬಿಬಿಎಸ್ ಪಠ್ಯಪುಸ್ತಕ, ಎಪ್ರಾನ್, ಸ್ಟೆತೋಸ್ಕೋಪ್ ಕೊಡುಗೆಯಾಗಿ ನೀಡಿ ಪ್ರೋತ್ಸಾಹಿಸಿದ್ದಾರೆ.

English summary
Sylaja Hoogar working as Anganwadi worker in Dharwad district. Her son Siddalingesh got medical seat, he bagged 967 rank in the NEET exam. Dharwad zilla panchayat CEO appreciate the his hard work.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X