ದೋಷಯುಕ್ತ ಐಫೋನ್ ಕೊಟ್ಟ Apple; ಹೊಸ ಮೊಬೈಲ್ ಕೊಡಲು ಕಂಪನಿಗೆ ಆದೇಶ
ಧಾರವಾಡ, ಫೆಬ್ರವರಿ.18: ಫ್ಲಿಪ್ಕಾರ್ಟ್ ವೇದಿಕೆಯಲ್ಲಿ ಮೊಬೈಲ್ ಆರ್ಡರ್ ಮಾಡಿ ಮೋಸಕ್ಕೆ ಒಳಗಾದ ಧಾರವಾಡದ ಮಹೇಂದ್ರಕರ ಚಾಳದ ಕಾಲೇಜು ವಿದ್ಯಾರ್ಥಿಯೊಬ್ಬರಿಗೆ ಹೊಸ ಐಫೋನ್ ಕೊಡುವಂತೆ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗ ಆದೇಶಿಸಿದೆ.
ಮಹೇಂದ್ರಕರ ಚಾಳ ನಿವಾಸಿ ಕಾರ್ತಿಕ ಎಲಿಗಾರ ಎಂಬುವವರು ಕಾಲೇಜ ವಿದ್ಯಾರ್ಥಿಯಾಗಿದ್ದು ಗಿಟಾರ್ ವಾದ್ಯ ಕಲಿಯುತ್ತಿದ್ದರು. ಅವರು ತಮ್ಮ ವಿದ್ಯಾಭ್ಯಾಸ ಮತ್ತು ಗಿಟಾರ್ ಕಲಿಯಲು ಸಹಾಯವಾಗಲೆಂದು ಆನ್ಲೈನ್ ಮೂಲಕ ಪ್ಲಿಪ್ಕಾರ್ಟ್ನಿಂದ 22/09/2022 ರಂದು 54,019 ರೂಪಾಯಿ ಮೌಲ್ಯದ ಆಪಲ್ ಐಫೋನ್ ಖರೀದಿಸಿದ್ದರು. ಆ ಐಫೋನ್ ಮೂರು ದಿನಗಳ ನಂತರ ಅಂದರೆ 25 ರಂದು ದೂರುದಾರನಿಗೆ ತಲುಪಿತ್ತು.

ಆದರೆ, ಆ ಫೋನ್ ಖರೀದಿಸಿದ ಒಂದೇ ದಿನದಲ್ಲಿ ದೋಷ ಉಂಟಾಗಿ ಸರಿಯಾಗಿ ಕಾರ್ಯ ನಿರ್ವಹಿಸುತ್ತಿರಲಿಲ್ಲ. ಆ ವಿಷಯವನ್ನು ದೂರುದಾರ ಕೂಡಲೇ ಫ್ಲಿಪ್ಕಾರ್ಟ್ ಹಾಗೂ ಐಫೋನ್ ಕಂಪನಿಯವರಿಗೆ ದೂರು ನೀಡಿದ್ದಾರೆ. ಬಳಿಕ ಹುಬ್ಬಳ್ಳಿಯ ಸರ್ವಿಸ್ ಸೆಂಟರ್ನಲ್ಲಿ ತಪಾಸಣೆ ಮಾಡಿಸಿದಾಗ ಅದರಲ್ಲಿ ದೋಷ ಇರುವುದು ಖಚಿತವಾಗಿದೆ. ನಂತರ ದೂರುದಾರ ಬೆಂಗಳೂರಿನ ಆಪಲ್ ಕಂಪನಿಯ ಅಧಿಕೃತ ಸರ್ವಿಸ್ ಸೆಂಟರನಲ್ಲಿ ತೋರಿಸಿದಾಗಲೂ ದೋಷ ಇರುವುದು ಕಂಡುಬಂತು.
ಇನ್ನು, ಐಫೋನ್ ಮೇಲೆ ಜಖಂಗಳು ಇರುವುದರಿಂದ ಅವುಗಳು ವಾರಂಟಿಯಲ್ಲಿ ಕವರ್ ಆಗುವುದಿಲ್ಲ ಎಂದಿದ್ದಾರೆ. ಅದಕ್ಕೆ ತಗಲುವ ವೆಚ್ಚ ಕೊಟ್ಟಲ್ಲಿ ಸರಿಪಡಿಸಿಕೊಡುವುದಾಗಿ ಬೆಂಗಳೂರಿನ ಸರ್ವಿಸ್ ಸೆಂಟರ್ನವರು ಹೇಳಿದ್ದಾರೆ. ಐಫೋನ್ ಖರೀದಿಸಿದ ಒಂದೇ ದಿನದಲ್ಲಿ ದೋಷ ಕಂಡುಬಂದಿರುವುದರಿಂದ ಅದನ್ನು ಪುಕ್ಕಟೆಯಾಗಿ ಸರಿಪಡಿಸಿಕೊಡುವುದು ಉತ್ಪಾದರು ಮತ್ತು ಇತರೆ ಎದುರುದಾರರ ಕರ್ತವ್ಯವಾಗಿದೆ. ಅದರೆ ಎಲ್ಲ ಎದುರುದಾರರು ತಮ್ಮ ಕರ್ತವ್ಯ ನಿರ್ವಹಣೆಯಲ್ಲಿ ವಿಫಲರಾಗಿ ತನಗೆ ಗ್ರಾಹಕರ ರಕ್ಷಣಾ ಕಾಯ್ದೆ ಅಡಿ ಸೇವಾ ನ್ಯೂನ್ಯತೆ ಎಸಗಿದ್ದಾರೆ ಎಂದು ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕೋರಿ ದೂರುದಾರ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗಕ್ಕೆ 28.02.2023 ರಂದು ದೂರು ಸಲ್ಲಿಸಿದ್ದಾರೆ.

ದೂರಿನ ಬಗ್ಗೆ ಕೂಲಂಕುಷವಾಗಿ ವಿಚಾರಣೆ ನಡೆಸಿದ ಆಯೋಗದ ಅಧ್ಯಕ್ಷ ಈಶಪ್ಪ ಭೂತೆ, ಸದಸ್ಯರಾದ ವಿಶಾಲಾಕ್ಷಿ.ಅ. ಬೋಳಶೆಟ್ಟಿ ಹಾಗೂ ಪ್ರಭು .ಸಿ ಹಿರೇಮಠ ಸದರಿ ಆಪಲ್ ಐಫೋನ್ ಖರೀದಿಸಿದ ಒಂದೇ ದಿನದಲ್ಲಿ ಅದರಲ್ಲಿ ದೋಷ ಕಂಡುಬಂದಿದ್ದರಿಂದ ಮತ್ತು ಆ ಬಗ್ಗೆ ದೂರುದಾರ ದೂರಿದರೂ ಆಪಲ್ ಕಂಪನಿಯವರು ಅದರ ದೋಷ ಸರಿಪಡಿಸಲು ಸೂಕ್ತ ಕ್ರಮ ಕೈಗೊಳ್ಳದೇ ಸೇವಾ ನ್ಯೂನ್ಯತೆ ಎಸಗಿರುವುದು ಮೇಲ್ನೊಟಕ್ಕೆ ಕಂಡುಬಂದಿದೆ ಎಂದು ಆಯೋಗತೀರ್ಪು ನೀಡಿದೆ.
ಸದರಿ ಐಫೋನಿನಲ್ಲಿ ಉತ್ಪಾದನಾ ದೋಷ ಕಂಡು ಬಂದಿದ್ದರಿಂದ ಆಪಲ್ ಕಂಪನಿಯವರನ್ನು ಮಾತ್ರ ಹೊಣೆಗಾರರನ್ನಾಗಿಸಿ ಆಯೋಗ ಆದೇಶಿಸಿದೆ. ಸದರಿ ಆಪಲ್ ಕಂಪನಿಯವರು ಈ ತೀರ್ಪು ನೀಡಿದ ಒಂದು ತಿಂಗಳೊಳಗೆ ದೂರುದಾರನಿಂದ ಹಳೆಯ ಆಪಲ್ ಐಫೋನ್ ಪಡೆದುಕೊಂಡು ಹೊಸ ಐಫೋನ್ ಕೊಡುವಂತೆ ಆಯೋಗ ನಿರ್ದೇಶಿಸಿದೆ.
ಇಲ್ಲದಿದ್ದಲ್ಲಿ ಆ ಐಫೋನಿನ ಒಟ್ಟು ಮೊತ್ತ ರೂ.54,019 ಮತ್ತು ಅದರ ಮೇಲೆ ಶೇಕಡಾ 8 ರಷ್ಟು ತೀರ್ಪು ಆದ ದಿನದಿಂದ ಪೂರ್ತಿ ಹಣ ಸಂದಾಯವಾಗುವವರೆಗೆ ಬಡ್ಡಿ ಲೆಕ್ಕ ಹಾಕಿ ಹಣ ಸಂದಾಯ ಮಾಡುವಂತೆ ಆಪಲ್ ಕಂಪನಿಗೆ ತೀರ್ಪಿನಲ್ಲಿ ತಿಳಿಸಿದೆ. ಇದಲ್ಲದೆ, ದೂರುದಾರರಿಗೆ ಆಗಿರುವ ಅನಾನುಕೂಲ ಮತ್ತು ಮಾನಸಿಕ ತೊಂದರೆಗಾಗಿ ಕಂಪನಿಯವರು 25,000 ರೂಪಾಯಿಗಳ ಪರಿಹಾರ ಹಾಗೂ 10,000 ರೂಪಾಯಿಗಳ ಪ್ರಕರಣದ ಖರ್ಚು ವೆಚ್ಚ ನೀಡುವಂತೆ ಆಯೋಗ ನಿರ್ದೇಶಿಸಿದೆ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications