Yatnal vs Vijayendra: ಬಿಜೆಪಿ ಬಣ ರಾಜಕೀಯ ಜಗಳ ಶಾಂತವಾಯಿತಾ!: ಅರವಿಂದ್ ಬೆಲ್ಲದ್ ಹೇಳಿದ್ದೇನು
ಬೆಂಗಳೂರು, ಡಿಸೆಂಬರ್ 05: ಭಾರತೀಯ ಜನತಾ ಪಕ್ಷವು ಒಂದು ಪ್ರಮುಖ ರಾಜಕೀಯ ದೊಡ್ಡ ಪಕ್ಷ. ಪಕ್ಷವೆಂದ ಮೇಲೆ ಕೊಂಚ ಭಿನ್ನಾಭಿಪ್ರಾಯಗಳು ಉಂಟಾಗುವುದು ಸಹಜ. ಇಂತಹ ಭಿನ್ನಾಭಿಪ್ರಾಯಗಳನ್ನು ಪಕ್ಷದ ಬಿಜೆಪಿ ಹಿರಿಯ ನಾಯಕರ ಸಮ್ಮುಖದಲ್ಲಿ ಇತ್ಯರ್ಥಗೊಳ್ಳುಲಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಣ ರಾಜಕೀಯ ಜಗಳ ಕುರಿತು ಅವರು ಹೇಳಿದರು.
ಧಾರವಾಡದಲ್ಲಿ ಮಾತನಾಡಿದ ಅವರು, ಬಿಜೆಪಿ ಹಿತ ದೃಷ್ಟಿಯಿಂದ ಒಳ್ಳೆಯ ಬೆಳವಣಿಗೆ ನಡೆದಿದೆ. ಪಕ್ಷದಲ್ಲಿ ಉಂಟಾಗಿದ್ದ ಸಣ್ಣ ಪುಟ್ಟ ಗೊಂದಲಗಳು ಹೈಕಮಾಂಡ್ ಮಧ್ಯಸ್ಥಿಕೆಯಿಂದ ಶಾಂತವಾಗಿದೆ. ಸದ್ಯ ಭಿನ್ನಾಭಿಪ್ರಾಯವು ಶಾಂತವಾಗಿದ್ದು, ಪಕ್ಷದ ಲಕ್ಷಾಂತರ ಕಾರ್ಯಕರ್ತರಿಗೆ ಸಂತೋಷ ಉಂಟು ಮಾಡಿದೆ.

ಶಾಮನೂರು ಹೇಳಿಕೆ: ಯುತ್ನಾಳ್ ಪರ ನಿಂತ ಬೆಲ್ಲದ್
ಬೀದರ್ ಪ್ರತಿಭಟನೆಯಲ್ಲಿ ಬಸವಣ್ಣನವರು ಹೊಳೆಗೆ ಹಾರಿ ಪ್ರಾಣ ಬಿಟ್ಟರು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹೇಳಿದ್ದಕ್ಕೆ ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರು ವಾಗ್ದಾಳಿ ನಡೆಸಿದ್ದರು. ಯತ್ನಾಳ್ ಅವರು ಸ್ವತಃ ಬಾಯಿಗೆ ಬೀಗ ಹಾಕಿಕೊಳ್ಳಬೇಕು. ಇಲ್ಲವಾದರೆ ನಿಮ್ಮನ್ನು ಹಾಳು ಬಾವಿಗೆ ತಳ್ಳಬೇಕಾಗುತ್ತದೆ ಎಂದು ಹೇಳಿದ್ದನ್ನು ಬೆಲ್ಲದ್ ಅವರು ಖಂಡಿಸಿದ್ದಾರೆ.
ಶಾಮನೂರು ಶಿವಶಂಕರಪ್ಪನವರು ಅಖಿಲ ಭಾರತ ಮಹಾಸಭಾದ ಅಧ್ಯಕ್ಷರು, ಮೇಲಾಗಿ ಹಿರಿಯರು. ಅವರ ಬಾಯಿಯಲ್ಲಿ ಹಾಳು ಬಾವಿಗೆ ತಳ್ಳುತ್ತೇವೆ ಎಂಬ ಮಾತು ಬರಬಾರದು. ಅದು ನಿಮಗೆ ಶೋಭೆ ತರುವಂತದ್ಧಲ್ಲ. ಬಸನಗೌಡ ಪಾಟೀಲ್ ಯತ್ನಾಳ್ ಅವರು ಹೇಳಿದ್ದು ಸರಿ ಇದೆ.

ಪ್ರಶ್ನಿಸದ ಶಾಮನೂರು ಅವರು ಮನೆಯಲ್ಲಿರಲಿ
ಶಾಮನೂರು ಶಿವಶಂಕರಪ್ಪನವರು ಬಸವ ಕಲ್ಯಾಣದಲ್ಲಿ ಏನು ಮಾಡಿದ್ದಾರೆ. ಬಸವಣ್ಣ ಇರುವ ಅನುಭವ ಮಂಟಪ ಇವತ್ತು ಅನುಭವ ಮಂಟಪ ಆಗಿ ಉಳಿದಿಲ್ಲ. ಅಲ್ಲಿ ಪೀರ ಬಾಷಾ ಅವರ ಒಂದು ಪೀರ್ ನಡೆಯುತ್ತಿದೆ. ಅದನ್ನು ತಡೆಯಲು ಚಕಾರ ಎತ್ತಿಲ್ಲ. ಈ ಸರ್ಕಾರ ಲಿಂಗಾಯತ ಅಭಿವೃದ್ಧಿ ಪ್ರಾಧಿಕಾರಕ್ಕೆ ಒಂದೇ ಒಂದು ರೂಪಾಯಿ ಬಿಡುಗಡೆ ಮಾಡಿಲ್ಲ. ಅದರ ಬಗ್ಗೆ ಇವರು ಚಕಾರವನ್ನೇ ಎತ್ತುತ್ತಿಲ್ಲ. ಶಾಮನೂರು ಅವರಿಗೆ ವಯಸ್ಸು ಆಗಿದೆ, ಅವರು ಮನೆಯಲ್ಲಿ ಕುತಕೊಳೊದು ಒಳ್ಳೆಯದು. ಬಾಯಿಗೆ ಬಂದಂತೆ ಮಾತನಾಡಬಾರದು ಎಂದು ಹೇಳಿದರು.
ಬೆಳಗಾವಿ ಚಳಿಗಾಲ ಅಧಿವೇಶನ ವೇಳೆ ಪಂಚಮಸಾಲಿ 2ಎ ಮೀಸಲಾತಿಗೆ ಆಗ್ರಹಿಸಿ ಹೋರಾಟ ವಿಚಾರಕ್ಕೆ ಪ್ರತಿಕ್ರಿಯಿಸಿದ ಬೆಲ್ಲದ್ ಅವರು, ಲಿಂಗಾಯತ ಪಂಚಮಸಾಲಿ ಸಮಾಜದ ಅನಿಸಿಕೆಗಳನ್ನು ವ್ಯಕ್ತ ಪಡಿಸಲು ಬೆಳಗಾವಿಯಲ್ಲಿ ಬೃಹತ್ ಸಭೆ ಇಟ್ಟುಕೊಂಡಿದ್ದೇವೆ. ಬಿಜೆಪಿ ಸರ್ಕಾರ ಇದ್ದಾಗ ಮೀಸಲಾತಿ ಕೊಡಲಾಗಿತ್ತು, ಈ ಕಾಂಗ್ರೆಸ್ ಸರ್ಕಾರ ಅದನ್ನು ಅಡೆತಡೆ ಹಾಕುವಂತಹ ಕೆಲಸ ಮಾಡುತ್ತಿದೆ. ಅದಕ್ಕೆ ನಾವು ಇದು ಸರಿ ಮಾಡಲು ಹೋರಾಟ ಮಾಡುತಿದ್ದೇವೆ ಎಂದರು.
ಸಿಎಂಗೆ ಮುಡಾ ಹಗ್ಗ ಉರಳಾಗುವುದು ಪಕ್ಕಾ
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣದಲ್ಲಿ ಇಡಿ ಪ್ರಮುಖ ಸಾಕ್ಷ್ಯ ಸಂಗ್ರಹಿಸಿದೆ. ಸುಮಾರು 5000 ಕೋಟಿ ರೂ.ಅಕ್ರಮದಲ್ಲಿ ಸಿಎಂ ಕುಟುಂಬ ಭಾಗಿಯಾಗಿದೆ. ಈ ಸಂಬಂಧ ಇಡಿ ಅಧಿಕಾರಿಗಳಿಗೆ ಮಾಹಿತಿ ಬಂದಿದ್ದು, ತನಿಖೆ ಕೈಗೊಂಡಿದ್ದಾರೆ. ಈ ಮುಡಾ ಹಗ್ಗವು ಮುಖ್ಯಮಂತ್ರಿ ಕೊರಳಿಗೆ ಬಿಗಿಯಾಗುವ ಕಾಲ ದೂರವಿಲ್ಲ ಎಂದು ಅವರು ಎಚ್ಚರಿಸಿದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications