ಧಾರವಾಡ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮರಳಿನಲ್ಲಿ ವರ್ಣರಂಜಿತ ಸ್ವಾಮಿ ವಿವೇಕಾನಂದ ಕಲಾಕೃತಿ ರಚಿಸಿದ ಕಲಾವಿದ ಮಂಜುನಾಥ ಹಿರೇಮಠ

By ಹುಬ್ಬಳ್ಳಿ ಪ್ರತಿನಿಧಿ
|
Google Oneindia Kannada News

ಧಾರವಾಡ, ಜನವರಿ 23: ವಿಶ್ವ ಸಂತ ಸ್ವಾಮಿ ವಿವೇಕಾನಂದ ಜಯಂತ್ಯುತ್ಸವದ ಅಂಗವಾಗಿ ಧಾರವಾಡದ ದೊಡ್ಡನಾಯಕನಕೊಪ್ಪ ಬಡಾವಣೆಯಲ್ಲಿ ಮರಳಿನಲ್ಲಿ ಸ್ವಾಮಿ ವಿವೇಕಾನಂದರ ಕಲಾಕೃತಿ ಅರಳಿದ್ದು ಎಲ್ಲರ ಗಮನ ಸೆಳೆಯುತ್ತಿದೆ.

ಧಾರವಾಡದ ದೊಡ್ಡನಾಯಕನಕೊಪ್ಪ ಬಡಾವಣೆಯಲ್ಲಿ ಸ್ವಾಮಿ ವಿವೇಕಾನಂದರ ಜಯಂತ್ಯುತ್ಸವ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ದೊಡ್ಡನಾಯಕನಕೊಪ್ಪದಲ್ಲಿ ಪರಿಸರ ಸ್ನೇಹಿ ಕಲಾವಿದ ಮಂಜುನಾಥ ಹಿರೇಮಠ ಅವರು ಮರಳಿನಲ್ಲಿ ಸ್ವಾಮಿ ವಿವೇಕಾನಂದರ ಕಲಾಕೃತಿ ರಚಿಸಿ ಅದಕ್ಕೆ ಬಣ್ಣ ಕೂಡ ಲೇಪನ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿರುವ ಧಾರವಾಡದ ಐಐಟಿಯಲ್ಲಿ ಕಳ್ಳತನ, ಆರೋಪಿಗಳ ಬಂಧನಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿರುವ ಧಾರವಾಡದ ಐಐಟಿಯಲ್ಲಿ ಕಳ್ಳತನ, ಆರೋಪಿಗಳ ಬಂಧನ

ದೊಡ್ಡನಾಯಕನಕೊಪ್ಪದ ಜನ ಈ ಮರಳು ಕಲಾಕೃತಿಗೆ ಮನಸೋತಿದ್ದು, ತಂಡೋಪಾದಿಯಲ್ಲಿ ಬಂದು ಮರಳಿನಲ್ಲಿ ಮಾಡಿದ ಸ್ವಾಮಿ ವಿವೇಕಾನಂದರ ಕಲಾಕೃತಿ ನಮನ ಸಲ್ಲಿಸಿದ್ದಾರೆ. ಸದ್ಯ ಮರಳಿನಲ್ಲಿ ಅರಳಿ ನಿಂತ ಸ್ವಾಮಿ ವಿವೇಕಾನಂದರ ಮೂರ್ತಿ ಎಲ್ಲರ ಗಮನ ಸೆಳೆಯುತ್ತಿದ್ದು, ದೊಡ್ಡನಾಯಕನಕೊಪ್ಪದ ಸುತ್ತಮುತ್ತಲಿನ ಜನರು ಈ ಕಲಾಕೃತಿಯನ್ನು ನೋಡಲು ಆಗಮಿಸುತ್ತಿದ್ದಾರೆ.

Artist Creates Swami Vivekananda Artifact In Sand

ವಿಶ್ವ ಸಂತ ಸ್ವಾಮಿ ವಿವೇಕಾನಂದ ಜಯಂತ್ಯುತ್ಸವದ ಅಂಗವಾಗಿ ಧಾರವಾಡದ ಆರ್.ಎನ್.ಶೆಟ್ಟಿ ಕ್ರೀಡಾಂಗಣದಲ್ಲಿ ಹೋಟೆಲ್ ಒಡೆಯರ ಸಂಘದ ವತಿಯಿಂದ ಅವರ ಕುಟುಂಬಸ್ಥರಿಗಾಗಿ ವಿವಿಧ ಕ್ರೀಡಾಕೂಟ ಆಯೋಜನೆ ಮಾಡಲಾಗಿತ್ತು.

ಹೋಟೆಲ್ ಒಡೆಯರ ಸಂಘದ ಕುಟುಂಬದ ಸದಸ್ಯರಿಗಾಗಿಯೇ ಆಯೋಜನೆಗೊಂಡಿದ್ದ ಈ ಕ್ರೀಡಾಕೂಟದಲ್ಲಿ 100 ಮೀಟರ್ ಓಟ, ರಿಂಗ್ ಎಸೆತ, ಗುಂಡು ಎಸೆತ ಸೇರಿದಂತೆ ಇತ್ಯಾದಿ ಕ್ರೀಡೆಗಳನ್ನು ಆಯೋಜನೆ ಮಾಡಲಾಗಿತ್ತು. ಈ ಕ್ರೀಡಾಕೂಟದಲ್ಲಿ ಹೋಟೆಲ್ ಒಡೆಯರ ಸಂಘದ ಸದಸ್ಯರು ಉತ್ಸಾಹದಿಂದಲೇ ಪಾಲ್ಗೊಂಡು ಎಲ್ಲರ ಗಮನಸೆಳೆದರು.

English summary
an eco-friendly Artist Manjunath Hiremath creates Swami Vivekananda Artifact in sand at Dharwad Doddanayakanakoppa.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X