ಧಾರವಾಡ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ತನ್ವೀರ್ ಸೇಠ್ ಮೇಲೆ ಹಲ್ಲೆ; ಧಾರವಾಡದಲ್ಲಿ ಜನ ಪ್ರತಿನಿಧಿಗಳ ಮನೆಗೆ ಭದ್ರತೆ

By ಧಾರವಾಡ ಪ್ರತಿನಿಧಿ
|
Google Oneindia Kannada News

ಧಾರವಾಡ, ನವೆಂಬರ್ 19: ಮಾಜಿ ಸಚಿವ ಹಾಗೂ ಶಾಸಕ ತನ್ವೀರ್ ಸೇಠ್ ಮೇಲಿನ ಹಲ್ಲೆ ಪ್ರಕರಣದಿಂದ ಹುಬ್ಬಳ್ಳಿ ಧಾರವಾಡ ಪೊಲೀಸರು ಎಚ್ಚತ್ತುಕೊಂಡಿದ್ದಾರೆ. ಇದೀಗ ಅವಳಿ ನಗರದ ಎಲ್ಲಾ ಜನ ಪ್ರತಿನಿಧಿಗಳ ಮನೆಗಳಿಗೆ ಗುಪ್ತಚರ ಇಲಾಖೆ ಮಾಹಿತಿ ಆಧಾರದ ಮೇಲೆ ಹೆಚ್ಚಿನ ಭದ್ರತೆ ನೀಡಲಾಗುತ್ತಿದೆ.

ತನ್ವೀರ್ ಸೇಠ್ ಹಲ್ಲೆ ಪ್ರಕರಣ; ಗನ್ ಮ್ಯಾನ್ ಅಮಾನತುತನ್ವೀರ್ ಸೇಠ್ ಹಲ್ಲೆ ಪ್ರಕರಣ; ಗನ್ ಮ್ಯಾನ್ ಅಮಾನತು

ಮದುರಾ ಕಾಲೋನಿ ನಿವಾಸಿಯಾದ ಜಗದೀಶ್ ಶೆಟ್ಟರ್, ಮಯೂರ್ ಪಾರ್ಕ್ ನಿವಾಸಿಯಾದ ಸಂಸದ ಪ್ರಹ್ಲಾದ ಜೋಶಿ, ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಹಾಗೂ ಶಾಸಕರಾದ ಅರವಿಂದ ಬೆಲ್ಲದ ನಿವಾಸ, ಶಂಕರ ಪಾಟೀಲ್ ಮುನೇನಕೊಪ್ಪ ಹಾಗೂ ಕಾಂಗ್ರೆಸ್ ಶಾಸಕರಾದ ಪ್ರಸಾದ ಅಬ್ಬಯ್ಯ, ಕುಸುಮಾ ಶಿವಳ್ಳಿ ಅವರ ಮನೆಗೆ ಪೊಲೀಸ್ ಭದ್ರತೆ ನೀಡಲಾಗಿದೆ. ಆಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಜನ ಪ್ರತಿನಿಧಿಗಳ ಮನೆಗಳಿಗೆ ಹೆಚ್ಚಿನ ಭದ್ರತೆ ನೀಡುವಂತೆ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ ಆರ್.ದಿಲೀಪ್ ಸೂಚಿಸಿದ್ದಾರೆ.

Attack on Tanveer Sait Security To Political Leades In Dharwad

ಹೀಗಾಗಿ ಅವಳಿ ನಗರದ ಎಲ್ಲಾ ಜನ ಪ್ರತಿನಿಧಿಗಳ ಮನೆಗಳಿಗೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ.

English summary
Hubballi Dharwad police have been alarmed by the attack on former minister Tanveer Sait. They have given Security for the homes of all the political leaders in district
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X