ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಹೊರಟ್ಟಿಗೆ ದಾಖಲೆ ಗೆಲುವು
ಹುಬ್ಬಳ್ಳಿ, ಜೂನ್, 13: ರಾಜ್ಯದ ಜೆಡಿಎಸ್ ಕಾರ್ಯಕರ್ತರಿಗೆ ಇದು ಸಂತಸದ ಸುದ್ದಿ. ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ಜೆಡಿಎಸ್ ನ ಬಸವರಾಜ್ ಹೊರಟ್ಟಿ ಜಯಭೇರಿ ಬಾರಿಸಿದ್ದಾರೆ.
ಎರಡನೇ ಸುತ್ತಿನ ಮತ ಎಣಿಕೆಯಲ್ಲೇ ವಿಜಯಮಾಲೆಯನ್ನು ಕೊರಳಿಗೆ ಹಾಕಿಕೊಂಡಿದ್ದಾರೆ. 1980ರಿಂದಲೂ ಸೋಲರಿಯದ ಸರದಾರನಂತಿದ್ದ ಹೊರಟ್ಟಿ ಸತತ 7ನೇ ಬಾರಿಗೆ ಪರಿಷತ್ಗೆ ಆಯ್ಕೆಯಾಗಿ ದಾಖಲೆ ನಿರ್ಮಿಸಿದ್ದಾರೆ. 7 ಸಾವಿರಕ್ಕೂ ಅಧಿಕ ಮತಗಳ ಅಂತರದ ಜಯ ಹೊರಟ್ಟಿಯವರಿಗೆ ಸಿಕ್ಕಿದೆ. [ಪರಿಷತ್ ಇತರ ಸ್ಥಾನಗಳ ಕತೆ ಏನು?]

ಬಸವರಾಜ್ ಹೊರಟ್ಟಿ ಎರಡನೇ ಸುತ್ತಿನ ಮತ ಎಣಿಕೆಯಲ್ಲೇ ವಿಜಯ ಸಂಪಾದನೆ ಮಾಡಿಕೊಂಡಿದ್ದಾರೆ. ಎರಡನೇ ಸುತ್ತಿನ ಅಂತ್ಯಕ್ಕೆ 7228 ಮೊದಲ ಪ್ರಾಶಸ್ತ್ಯದ ಮತಗಳನ್ನು ಪಡೆದ ಹೊರಟ್ಟಿ ವಿಜಯ ಸಂಪಾದನೆ ಮಾಡಿದರು. ಗೆಲ್ಲಲು ಬೇಕಿದ್ದ 7094 ಮತಗಳನ್ನು ಮೀರಿ ನಿಂತರು.[ವಿಧಾನಪರಿಷತ್ ಸದಸ್ಯರು ಹೇಗೆ ಆಯ್ಕೆಯಾಗುತ್ತಾರೆ?]
ಪಶ್ಚಿಮ ಶಿಕ್ಷಕರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಏಳನೇ ಬಾರಿಗೆ ಗೆದ್ದು ಗಿನ್ನೆಸ್ ದಾಖಲೆ ನಿರ್ಮಿಸಿದ್ದಾರೆ. ಬಿಜೆಪಿಯ ಮಾ. ನಾಗರಾಜ ಅವರನ್ನು 3411 ಮತಗಳ ಅಂತರದಿಂದ ಸೋಲಿಸಿದ್ದಾರೆ. ಹೊರಟ್ಟಿಯವರು ಪಡೆದ ಮತಗಳು 7480. ಮಾ.ನಾಗರಾಜ್ ಅವರು 4371 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ ಪಕ್ಷದ ಟಿ.ಈಶ್ವರ ಕೇವಲ 1352 ಮತಗಳನ್ನು ಪಡೆದು ಹೀನಾಯವಾಗಿ ಸೋಲುಂಡಿದ್ದಾರೆ. ಬಿಜೆಪಿ ಬಂಡಾಯ ಅಭ್ಯರ್ಥಿ ಎಂ.ಕುಬೇರಪ್ಪ ಕೇವಲ 883 ಮತಗಳನ್ನು ಪಡೆದಿದ್ದಾರೆ. ಚಲಾವಣೆಯಾದ ಮತಗಳಲ್ಲಿ 784 ಮತಗಳು ತಿರಸ್ಕೃತಗೊಂಡಿದ್ದಾರೆ. 43 ಮತಗಳು ನೋಟಾ ಮತಗಳಿವೆ.

ಧಾರವಾಡ, ಗದಗ, ಹಾವೇರಿ, ಉತ್ತರ ಕನ್ನಡ ಜಿಲ್ಲೆಗಳನ್ನು ಒಳಗೊಂಡಿರುವ ಪಶ್ಚಿಮ ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಚುನಾವಣೆ ಜೂ.9ರಂದು ನಡೆದಿತ್ತು. 2010ರವರೆಗಿನ ಚುನಾವಣೆಗಳವರೆಗೆ ಗೆಲುವಿನ ಅಂತರ ಹೆಚ್ಚಿಸಿಕೊಳ್ಳುತ್ತಲೇ ಬಂದಿದ್ದ ಹೊರಟ್ಟಿಗೆ 2010ರಲ್ಲಿ ಬಿಜೆಪಿ ಕೊಂಚ ಪ್ರಮಾಣದ ಸ್ಪರ್ಧೆ ನೀಡಿತ್ತು.
ಈ ಚುನಾವಣೆಯಲ್ಲಿ ಒಟ್ಟು 8 ಅಭ್ಯರ್ಥಿಗಳು ಕಣದಲ್ಲಿದ್ದರು. ಕಾಂಗ್ರೆಸ್ ಟಿ.ಈಶ್ವರ ಮೊದಲ ಬಾರಿಗೆ ಸ್ಪರ್ಧೆ ಮಾಡಿದ್ದರೆ, ಬಿಜೆಪಿಯ ಮಾ. ನಾಗರಾಜ, ಬಿಜೆಪಿ ಬಂಡಾಯ ಅಭ್ಯರ್ಥಿ ಕುಬೇರಪ್ಪ ಹೊರಟ್ಟಿಗೆ ಸವಾಲು ಒಡ್ಡಲು ಸಾಧ್ಯವಾಗಲಿಲ್ಲ. ಹೊರಟ್ಟಿ ಬೆಂಬಲಿಗರು ಪರಸ್ಪರ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು.

-
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications