'ವಿನಯ್ ಕುಲಕರ್ಣಿ ಬದಲು ವಿಜಯ ಕುಲಕರ್ಣಿ ಸ್ಪರ್ಧಿಸಿ ಗೆದ್ದು ತೋರಿಸಲಿ'
ಧಾರವಾಡ, ಡಿಸೆಂಬರ್ 26 : ಜಿಲ್ಲಾ ಉಸ್ತುವಾರಿ ಸಚಿವ ವಿನಯ್ ಕುಲಕರ್ಣಿ ಅವರು ಪೊಲೀಸ್ ಇಲಾಖೆಯನ್ನು ದುರಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ಬಿಜೆಪಿ ಮುಖಂಡ ತವನಪ್ಪ ಅಷ್ಟಗಿ ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉದ್ದೇಶಪೂರ್ವಕವಾಗಿಯೇ ಸಚಿವರ ಸಹೋದರ ವಿಜಯ ಕುಲಕರ್ಣಿ ಅವರು ನನ್ನ ಮೇಲೆ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಸಿವಿಲ್ ವಾರೆಂಟ್ ಪ್ರಕಾರ ಮಲ್ಲಮ್ಮ ಗೌಡರ ಅವರನ್ನು ಮೊದಲು ಬಂಧಿಸಬೇಕಿತ್ತು. ಆದರೆ, ಅವರು ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಜ್ಯೋತಿ ಬೆಳಗಿಸುತ್ತಿದ್ದಾರೆ ಎಂದರು.

ಇಂಥ ಕುತಂತ್ರ ರಾಜಕಾರಣ ಮಾಡುವುದನ್ನು ಕಾಂಗ್ರೆಸ್ ಮೊದಲು ಬಿಡಬೇಕು ಎಂದರು. ವಿಜಯ ಕುಲಕರ್ಣಿಗೆ ತಾಕತ್ತಿದ್ದರೆ ನಮ್ಮ ವಿರುದ್ಧ ಚುನಾವಣೆಗೆ ಸ್ಪರ್ಧಿಸಲಿ. ಸಚಿವ ವಿನಯ ಅವರು ಈಗಾಗಲೇ ಹೆಸರು ಗಳಿಸಿದ್ದಾರೆ. ತಮ್ಮ ಸಹೋದರ ವಿಜಯ ಅವರಿಗೆ ತಮ್ಮ ಕ್ಷೇತ್ರವನ್ನು ಬಿಟ್ಟು ವಿನಯ್ ಅವರು ಬೇರೆ ಕ್ಷೇತ್ರದಿಂದ ಸ್ಪರ್ಧೆ ಮಾಡಿ ತೋರಿಸಲಿ ಎಂದರು.
ಧಾರವಾಡ 71 ಕ್ಷೇತ್ರದಿಂದ ವಿಜಯ ಕುಲಕರ್ಣಿ ಸ್ಪರ್ಧೆ ಮಾಡಿ ನೋಡಲಿ ಎಂದು ಅವರು ಸವಾಲು ಹಾಕಿದರು. ಯೋಗೀಶಗೌಡ ಹತ್ಯೆ ಪ್ರಕರಣದಲ್ಲಿ ಸಚಿವ ವಿನಯ್ ಅವರ ಸಹೋದರ ವಿಜಯ ಕುಲಕರ್ಣಿ ಅವರ ಕೈವಾಡ ಇದೆ ಎಂದು ತವನಪ್ಪ ಅಷ್ಟಗಿ ಅವರು ಆರೋಪ ಮಾಡಿದ್ದಾರೆ ಎಂದು ವಿಜಯ ಕುಲಕರ್ಣಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.
ತವನಪ್ಪ ಅವರು ವಿಚಾರಣೆಗೆ ಹಾಜರಾಗದೇ ಇದ್ದಕ್ಕೆ ಬೆಂಗಳೂರು ಪೊಲೀಸರು ತವನಪ್ಪ ಅವರನ್ನು ಬಂಧಿಸಿ ಕರೆದೊಯ್ದಿದ್ದರು. ತವನಪ್ಪ ಅವರಿಗೆ ಈ ಪ್ರಕರಣ ಸಂಬಂಧ ಮೊನ್ನೆಯಷ್ಟೇ ಜಾಮೀನು ದೊರೆತಿದೆ. ಬಿಜೆಪಿ ಮುಖಂಡ ಈರೇಶ ಅಂಚಟಗೇರಿ ಸುದ್ದಿಗೋಷ್ಠಿಯಲ್ಲಿದ್ದರು.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications