ಹು- ಧಾರವಾಡ ಪಾಲಿಕೆ ಚುನಾವಣೆ: ಕೇಸರಿ ಶಾಲು ಹಾಕಿಕೊಂಡು ನಾಮಪತ್ರ ಸಲ್ಲಿಕೆ: ಬಿಜೆಪಿ ಅಭ್ಯರ್ಥಿ ನಡೆಗೆ "ಕೈ" ನಾಯಕರ ಆಕ್ಷೇಪ
ಧಾರವಾಡ, ಜೂನ್, 20: ಬಿಜೆಪಿ ನಾಯಕರು ಕೇಸರಿ ಪಡೆಯ ಕಾರ್ಯಕರ್ತರು ಎಂಬುವಂತಹ ವಿಷಯವನ್ನು ಎಲ್ಲೆಡೆಯೂ ಸಾಕ್ಷಿಕರಿಸಲು ಮುಂದಾಗಿದ್ದಾರೆ. ಹಾಗೆಯೇ ಧಾರವಾಡದಲ್ಲಿ ಪಾಲಿಕೆ ಸದಸ್ಯರೊಬ್ಬರ ನಡೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.
ಪಾಲಿಕೆಯ 22ನೇ ಅವಧಿಯ ಮೇಯರ್, ಉಪಮೇಯರ್ ಆಯ್ಕೆಗೆ ಪಾಲಿಕೆಯ ಧಾರವಾಡದ ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಭಾಂಗಣದಲ್ಲಿ ಚುನಾವಣೆ ನಡೆಯುತ್ತಿದೆ. ಈ ನಡುವೆ ಸತೀಶ್ ಹಾನಗಲ್ ಅವರು ಕೇಸರಿ ಶಾಲು ಹಾಕಿಕೊಂಡು ಸಭಾಂಗಣಕ್ಕೆ ಬಂದು ನಾಮಪತ್ರ ಸಲ್ಲಿಸಿದರು.

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯ ಉಪಮೇಯರ್ ಅಭ್ಯರ್ಥಿ ಬಿಜೆಪಿಯ ಸತೀಶ್ ಹಾನಗಲ್ ಅವರು ಓಂ ಚಿಹ್ನೆ ಇರುವ ಶಾಲು ಹಾಕಿಕೊಂಡು ಬಂದಿದ್ದಕ್ಕೆ ಕಾಂಗ್ರೆಸ್ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು.
ಕಾಂಗ್ರೆಸ್ ಮೇಯರ್ ಅಭ್ಯರ್ಥಿ ಸುವರ್ಣ ಕಲ್ಲಕುಂಟ್ಲ ಮತ್ತು ದೊರೆರಾಜ ಮಣಿಕುಂಟ್ಲ ಸತೀಶ್ ಹಾನಗಲ್ ನಡೆಗೆ ಆಕ್ಷೇಪ ವ್ಯಕ್ತಪಡಿಸಿದರು. ಅಲ್ಲದೆ ಕೇಸರಿ ಶಾಲು ಹಾಕಿಕೊಂಡು ಬಂದ ಅವರ ನಾಮಪತ್ರವನ್ನು ತಿರಸ್ಕರಿಸಬೇಕು ಎಂದು ಆಗ್ರಹಿಸಿದರು. ಇನ್ನು ಈ ಕುರಿತು ಪಾಲಿಕೆ ಆಯುಕ್ತ ಡಾ.ಗೋಪಾಲಕೃಷ್ಣ ಬಿ. ಪ್ರತಿಕ್ರಿಯಿಸಿ, ಇದನ್ನು ಚುನಾವಣಾಧಿಕಾರಿ ಗಮನಕ್ಕೆ ತಂದು ನಿಯಮದ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದರು.
ಪಾಲಿಕೆ ಕಚೇರಿ ಪ್ರವೇಶಿಸಿದ ಬಿಜೆಪಿ ಸದಸ್ಯರು
ಇನ್ನು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮೇಯರ್, ಉಪಮೇಯರ್ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದ್ದು, ಮತದಾನ ಮಾಡಲು ಪಾಲಿಕೆಯ ಬಿಜೆಪಿ ಸದಸ್ಯರು ಮಹಾನಗರ ಪಾಲಿಕೆ ಕಚೇರಿಗೆ ಆಗಮಿಸಿದ್ದಾರೆ.
ಮಂದಾರ ಹೋಟೆಲ್ನಿಂದ ಖಾಸಗಿ ಬಸ್ ಮೂಲಕ ಪಾಲಿಕೆ ಕಚೇರಿಗೆ ಆಗಮಿಸಿದ ಸದಸ್ಯರು, ನೇರವಾಗಿ ಸಭೆಗೆ ತೆರಳಿದರು. ಕೇಂದ್ರ ಸಚಿವ ಪ್ರಲ್ಹದ್ ಜೋಶಿ, ಶಾಸಕರಾದ ಅರವಿಂದ ಬೆಲ್ಲದ್, ಮಹೇಶ್ ಟೆಂಗಿನಕಾಯಿ, ಪ್ರದೀಪ್ ಶೆಟ್ಟರ್ ಕೂಡ ಪಾಲಿಕೆಯ ಬಿಜೆಪಿ ಸದಸ್ಯರೊಂದಿಗೆ ಸಭೆಗೆ ತೆರಳಿದರು.
ವಿನಯ್ ಕುಲಕರ್ಣಿ ಖುರ್ಚಿ ಖಾಲಿ
ಇನ್ನು ಧಾರವಾಡ ತಾಲೂಕಿನ ಹೆಬ್ಬಳ್ಳಿ ಜಿಲ್ಲಾ ಪಂಚಾಯತಿ ಸದಸ್ಯರಾಗಿದ್ದ ಯೋಗೀಶಗೌಡ ಗೌಡರ ಕೊಲೆ ಪ್ರಕರಣ ಸಂಬಂಧ ಬಂಧಿತರಾಗಿ ಪ್ರಸ್ತುತ ಜಾಮೀನಿನ ಮೇಲೆ ಹೊರಗಿರುವ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಧಾರವಾಡ ಜಿಲ್ಲಾ ಪ್ರವೇಶಕ್ಕೆ ನಿರ್ಬಂಧವಿದೆ.
ಪಾಲಿಕೆಯ ಮೇಯರ್ ಉಪಮೇಯರ್ ಸ್ಥಾನಕ್ಕೆ ಇಂದು ಚುನಾವಣೆ ಜರುಗಿದ್ದು, ಈ ಚುನಾವಣೆಯಲ್ಲಿ ವಿನಯ್ ಕುಲಕರ್ಣಿ ಕೂಡ ಮತ ಹಾಕಬೇಕಿತ್ತು. ಮತ ಹಾಕಲು ತಮಗೆ ಅವಕಾಶ ಮಾಡಿಕೊಡುವಂತೆ ಕುಲಕರ್ಣಿ ನ್ಯಾಯಾಲಯಕ್ಕೆ ಅರ್ಜಿ ಕೂಡ ಸಲ್ಲಿಸಿದ್ದರು. ಆದರೆ, ನಿನ್ನೆಯಷ್ಟೇ ನ್ಯಾಯಾಲಯ ಅವರ ಅರ್ಜಿಯನ್ನು ವಜಾಗೊಳಿಸಿದೆ.
ಹೀಗಾಗಿ ಅವರು ಧಾರವಾಡಕ್ಕೆ ಬರಲು ಆಗಲಿಲ್ಲ. ಆದರೂ ಶಿಷ್ಟಾಚಾರದ ಪ್ರಕಾರ ಧಾರವಾಡ ಮಹಾನಗರ ಪಾಲಿಕೆ ಕಚೇರಿಯ ಸಭಾಭವನದಲ್ಲಿ ವಿನಯ್ ಕುಲಕರ್ಣಿ ಹೆಸರಿನಲ್ಲಿ ಒಂದು ಖುರ್ಚಿಯನ್ನು ಮೀಸಲಿರಿಸಲಾಗಿತ್ತು. ಆದರೆ, ಅವರು ಬಾರದೇ ಇದ್ದಿದ್ದರಿಂದ ಆ ಖುರ್ಚಿ ಖಾಲಿ ಉಳಿದಿತ್ತು ಎನ್ನುವ ಮಾಹಿತಿ ಲಭ್ಯವಾಗಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications