ಧಾರವಾಡ ಜಿಲ್ಲೆಯ ಹಲವು ಗ್ರಾಮ ಪಂಚಾಯ್ತಿಗಳಲ್ಲಿ ಖಾಲಿ ಇರುವ ಸ್ಥಾನಗಳಿಗೆ ಜುಲೈ 23ರಂದು ಉಪಚುನಾವಣೆ
ಧಾರವಾಡ, ಜುಲೈ, 06: ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಧಾರವಾಡ ಜಿಲ್ಲೆಯ ವಿವಿಧ ಗ್ರಾಮ ಪಂಚಾಯ್ತಿಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಜುಲೈ 23 ರಂದು ಉಪಚುನಾವಣೆ ನಡೆಸಲು ವೇಳಾಪಟ್ಟಿಯನ್ನು ಜಿಲ್ಲಾ ಚುನಾವಣಾಧಿಕಾರಿಗಳಾದ ಗುರುದತ್ತ ಹೆಗಡೆ ಅವರು ಪ್ರಕಟಿಸಿದ್ದಾರೆ.
ಉಪ ಚುನಾವಣಾ ವೇಳಾ ಪಟ್ಟಿಯಲ್ಲಿ ವಿವಿಧ ಕಾರಣಗಳಿಂದ ತೆರವಾದ ಗ್ರಾಮ ಪಂಚಾಯತ್ ಸದಸ್ಯ ಸ್ಥಾನಗಳಿಗೆ ಅನ್ವಯಿಸುವ ಮೀಸಲಾತಿಯನ್ನು ನಿಗದಿಪಡಿಸಲಾಗಿದೆ. ಚುನಾವಣೆಗೆ ನಾಮಪತ್ರ ಸಲ್ಲಿಕೆಯು ಜುಲೈ 6 ರಿಂದ ಆರಂಭವಾಗಿದ್ದು, ಜುಲೈ 12ರಂದು ಕೊನೆಯ ದಿನ ಆಗಿರುತ್ತದೆ. ಜುಲೈ 13 ರಂದು ನಾಮಪತ್ರಗಳ ಪರಿಶೀಲನೆ ಮತ್ತು ಉಮೇದುವಾರಿಕೆ ಹಿಂಪಡೆಯಲು ಜುಲೈ 15 ಕೊನೆಯ ದಿನವಾಗಿದೆ.

ಅವಶ್ಯವಿದ್ದಲ್ಲಿ ಜುಲೈ 23ರಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ. ಮರು ಮತದಾನ ಅಗತ್ಯವಾದರೆ ಜುಲೈ 25ರಂದು ಜರುಗಲಿದೆ. ಮತಗಳ ಎಣಿಕೆಯು ಆಯಾ ತಾಲೂಕು ಕೇಂದ್ರದಲ್ಲಿ ಜುಲೈ 26ರಂದು ಬೆಳಗ್ಗೆ 8 ಗಂಟೆಗೆ ನಡೆಯುತ್ತದೆ. ಮತ್ತು ಜುಲೈ 26ರೊಳಗೆ ಗ್ರಾಮ ಪಂಚಾಯತ್ ಉಪಚುನಾವಣೆ ಪ್ರಕ್ರಿಯೆಯನ್ನು ಮುಕ್ತಾಯಗೊಳಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ಆಗಿರುವ ಜಿಲ್ಲಾ ಚುನಾವಣಾಧಿಕಾರಿ ಗುರುದತ್ತ ಹೆಗಡೆ ಅವರು ತಿಳಿಸಿದ್ದಾರೆ.
ಕಲಘಟಗಿ ತಾಲೂಕಿನ ಮುಕ್ಕಲ ಗ್ರಾಮ ಪಂಚಾಯತಿಯ ಮುಕ್ಕಲ (2) ಗ್ರಾಮದ ಒಂದು (ಸಾಮಾನ್ಯ ಮಹಿಳೆ) ಸ್ಥಾನಕ್ಕೆ, ಹಿರೇಹೊನ್ನಳ್ಳಿ ಗ್ರಾಮ ಪಂಚಾಯಿತಿಯ ಹಿರೇಹೊನ್ನಳ್ಳಿ (3) ಗ್ರಾಮದ ಒಂದು (ಅನುಸೂಚಿತ ಪಂಗಡ ಮಹಿಳೆ) ಸ್ಥಾನಕ್ಕೆ, ಬೀರವಳ್ಳಿ ಗ್ರಾಮ ಪಂಚಾಯಿತಿಯ ಬೀರವಳ್ಳಿ(1) ಗ್ರಾಮದ ಒಂದು (ಅನುಸೂಚಿತ ಜಾತಿ) ಸ್ಥಾನಕ್ಕೆ ಹಾಗೂ ಕುಂದಗೋಳ ತಾಲೂಕಿನ ಬು.ತರ್ಲಗಟ್ಟ ಗ್ರಾಮ ಪಂಚಾಯಿತಿಯ ನೆಲೆಗುಡ್ಡ ಗ್ರಾಮದ ಒಂದು (ಹಿಂದುಳಿದ ಅ ವರ್ಗ ಮಹಿಳೆ) ಸ್ಥಾನಕ್ಕೆ ಚುನಾವಣೆ ನಡೆಯಲಿದೆ.
ಹಾಗೆಯೇ ಕಮಡೊಳ್ಳಿ ಗ್ರಾಮ ಪಂಚಾಯತಿಯ ಕಮಡೊಳ್ಳಿ(4) ಗ್ರಾಮದ ಒಂದು (ಹಿಂದುಳಿದ ಅ ವರ್ಗ) ಸ್ಥಾನಕ್ಕೆ ಹಾಗೂ ಧಾರವಾಡ ತಾಲೂಕಿನ ಕೊಟಬಾಗಿ ಗ್ರಾಮ ಪಂಚಾಯಿತಿಯ ಕೊಟಬಾಗಿ(1) ಗ್ರಾಮದ ಎರಡು (ಹಿಂದುಳಿದ ಅ ವರ್ಗ ಮತ್ತು ಅನುಸೂಚಿತ ಪಂಗಡ ಮಹಿಳೆ) 2 ಸ್ಥಾನಕ್ಕೆ, ಜೀರಿಗವಾಡ ಗ್ರಾಮದ ಒಂದು (ಹಿಂದುಳಿದ ಅ ವರ್ಗ ಮಹಿಳೆ) ಸ್ಥಾನಕ್ಕೆ, ಕೋಟುರ ಗ್ರಾಮ ಪಂಚಾಯಿತಿಯ ಕೋಟುರು(1) ಗ್ರಾಮದ ಒಂದು (ಸಾಮಾನ್ಯ) ಸ್ಥಾನಕ್ಕೆ ಚುನವಾಣೆ ನಡೆಯಲಿದೆ.
ನವಲಗುಂದ ತಾಲೂಕಿನ ಯಮನೂರು ಗ್ರಾಮ ಪಂಚಾಯಿತಿಯ ಅರೇಕುರಹಟ್ಟಿ (1) ಗ್ರಾಮದ ಕ್ಷೇತ್ರ 1ರಲ್ಲಿ ಎರಡು (ಸಾಮಾನ್ಯ ಮಹಿಳೆ-1, ಸಾಮಾನ್ಯ -1) ಸ್ಥಾನಕ್ಕೆ, ಕ್ಷೇತ್ರ 2 ರಲ್ಲಿ ಎರಡು (ಪ.ಜಾ. ಮಹಿಳೆ-1, ಹಿಂದುಳಿದ ಅ ಪ್ರವರ್ಗ-1) ಸ್ಥಾನಕ್ಕೆ, ಕ್ಷೇತ್ರ 3ರಲ್ಲಿ ನಾಲ್ಕು (ಹಿಂದುಳಿದ ಬ ಪ್ರವರ್ಗ ಮಹಿಳೆ-1, ಹಿಂದುಳಿದ ಅ. ಪ್ರವರ್ಗ-1, ಸಾಮಾನ್ಯ ಮಹಿಳೆ-1, ಸಾಮಾನ್ಯ-1) ಸ್ಥಾನಗಳಿಗೆ ಉಪಚುನಾವಣೆಗಳು ನಡೆಯಲಿವೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications