ಕುಂದಗೋಳ ಉಪ ಚುನಾವಣೆ, ಬಹಿರಂಗ ಪ್ರಚಾರಕ್ಕೆ ಶುಕ್ರವಾರ ತೆರೆ
ಧಾರವಾಡ, ಮೇ 16 : ಕುಂದಗೋಳ ವಿಧಾನಸಭೆ ಉಪ ಚುನಾವಣೆಯ ಬಹಿರಂಗ ಪ್ರಚಾರ ಕಾರ್ಯ ಮೇ 17ರ ಸಂಜೆ 6 ಗಂಟೆಗೆ ಅಂತ್ಯವಾಗಲಿವೆ. ಮೇ 19ರಂದು ಮತದಾನ ನಡೆಯಲಿದ್ದು, ಮೇ 23ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.
ಕುಂದಗೋಳ ಉಪಚುನಾವಣೆಯ ಬಹಿರಂಗ ಪ್ರಚಾರ ಶುಕ್ರವಾರ ಸಂಜೆ 06 ಗಂಟೆಗೆ ಅಂತ್ಯಗೊಳ್ಳಲಿದೆ. ಈ ಅವಧಿಯ ಬಳಿಕ ಚುನಾವಣಾ ಪ್ರಚಾರಕ್ಕಾಗಿ ಆಗಮಿಸಿರುವ ವಿವಿಧ ಕ್ಷೇತ್ರಗಳ ರಾಜಕೀಯ ಕಾರ್ಯಕರ್ತರು, ಕ್ಷೇತ್ರದ ಮತದಾರರಲ್ಲದವರು ಕ್ಷೇತ್ರದಿಂದ ನಿರ್ಗಮಿಸುವಂತೆ ಚುನಾವಣಾಧಿಕಾರಿ ವಿ.ಪ್ರಸನ್ನ ಸೂಚನೆ ನೀಡಿದ್ದಾರೆ.
ಚುನಾವಣಾ ಆಯೋಗದ ನಿರ್ದೇಶನದಂತೆ ಚುನಾವಣಾ ಬಹಿರಂಗ ಪ್ರಚಾರ ಶುಕ್ರವಾರ ಸಂಜೆ ಅಂತ್ಯಗೊಳ್ಳಲಿದೆ. ಈ ಅವಧಿಯ ನಂತರ ವಿವಿಧೆಡೆಗಳಿಂದ ಆಗಮಿಸಿರುವ ರಾಜಕೀಯ ಕಾರ್ಯಕರ್ತರು, ಕ್ಷೇತ್ರದ ಮತದಾರರಲ್ಲದವರು ಕುಂದಗೋಳ ಕ್ಷೇತ್ರದಲ್ಲಿ ಇರುವಂತಿಲ್ಲ.

ಕೂಡಲೇ ಅಂತಹವರು ಮತ ಕ್ಷೇತ್ರದಿಂದ ನಿರ್ಗಮಿಸಬೇಕು. ಬೇರೆ-ಬೇರೆ ಕ್ಷೇತ್ರದಿಂದ ಚುನಾವಣಾ ಪ್ರಚಾರಕ್ಕಾಗಿ ಆಗಮಿಸಿದ ರಾಜಕೀಯ ವ್ಯಕ್ತಿಗಳು ಕ್ಷೇತ್ರದ ವಿವಿಧ ಲಾಡ್ಜ್, ಫಾರ್ಮ್ಹೌಸ್, ಹೋಟೆಲ್ ಮತ್ತು ಇತರ ಸ್ಥಳಗಳಲ್ಲಿ ತಂಗಿರುವ ಸಾಧ್ಯತೆಗಳಿದ್ದು, ಅಂತಹವರು ಕೂಡಲೆ ಅಲ್ಲಿಂದ ನಿರ್ಗಮಿಸಬೇಕು ಎಂದು ಸೂಚನೆ ನೀಡಲಾಗಿದೆ.
ಏಜೆಂಟರಿಗೆ ಸೂಚನೆ : ಯಾವುದೇ ಪಕ್ಷ, ಅಭ್ಯರ್ಥಿಗಳು, ಏಜೆಂಟರು ಅಥವಾ ಅಭ್ಯರ್ಥಿಗಳ ಪರವಾಗಿ ಮೇ.19ರಂದು ಮತದಾನ ದಿನದಂದು ಮತದಾರರಿಗೆ ಮತಗಟ್ಟೆಗಳಿಗೆ ಕರೆದುಕೊಂಡು ಬರಲು ಮತ್ತು ಹೋಗಲು ವಾಹನದ ವ್ಯವಸ್ಥೆಯನ್ನು ಮಾಡುವಂತಿಲ್ಲ.
ತಿಂಡಿ ಅಥವಾ ಊಟದ ವ್ಯವಸ್ಥೆ ಮಾಡಬಾರದು. ಮತಗಟ್ಟೆ ಏಜೆಂಟರುಗಳು ನಿಗದಿತ ಸಮಯದೊಳಗೆ ಮತಗಟ್ಟೆಗಳಿಗೆ ಹಾಜರಾಗಬೇಕು. ಬೆಳಗ್ಗೆ 6 ಗಂಟೆಗೆ ಮತಗಟ್ಟೆಗಳಲ್ಲಿ ಮತಗಟ್ಟೆ ಸಿಬ್ಬಂದಿಗಳು ಅಣಕು ಮತದಾನ ನಡೆಸುವರು, ಈ ಸಂದರ್ಭದಲ್ಲಿ ಸಂಬಂಧಪಟ್ಟ ಏಜೆಂಟರು ಹಾಜರಿರಬೇಕು ಎಂದು ತಿಳಿಸಲಾಗಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications