ಕುಂದಗೋಳ ಉಪ ಚುನಾವಣೆ, ಬಹಿರಂಗ ಪ್ರಚಾರಕ್ಕೆ ಶುಕ್ರವಾರ ತೆರೆ
ಧಾರವಾಡ, ಮೇ 16 : ಕುಂದಗೋಳ ವಿಧಾನಸಭೆ ಉಪ ಚುನಾವಣೆಯ ಬಹಿರಂಗ ಪ್ರಚಾರ ಕಾರ್ಯ ಮೇ 17ರ ಸಂಜೆ 6 ಗಂಟೆಗೆ ಅಂತ್ಯವಾಗಲಿವೆ. ಮೇ 19ರಂದು ಮತದಾನ ನಡೆಯಲಿದ್ದು, ಮೇ 23ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.
ಕುಂದಗೋಳ ಉಪಚುನಾವಣೆಯ ಬಹಿರಂಗ ಪ್ರಚಾರ ಶುಕ್ರವಾರ ಸಂಜೆ 06 ಗಂಟೆಗೆ ಅಂತ್ಯಗೊಳ್ಳಲಿದೆ. ಈ ಅವಧಿಯ ಬಳಿಕ ಚುನಾವಣಾ ಪ್ರಚಾರಕ್ಕಾಗಿ ಆಗಮಿಸಿರುವ ವಿವಿಧ ಕ್ಷೇತ್ರಗಳ ರಾಜಕೀಯ ಕಾರ್ಯಕರ್ತರು, ಕ್ಷೇತ್ರದ ಮತದಾರರಲ್ಲದವರು ಕ್ಷೇತ್ರದಿಂದ ನಿರ್ಗಮಿಸುವಂತೆ ಚುನಾವಣಾಧಿಕಾರಿ ವಿ.ಪ್ರಸನ್ನ ಸೂಚನೆ ನೀಡಿದ್ದಾರೆ.
ಚುನಾವಣಾ ಆಯೋಗದ ನಿರ್ದೇಶನದಂತೆ ಚುನಾವಣಾ ಬಹಿರಂಗ ಪ್ರಚಾರ ಶುಕ್ರವಾರ ಸಂಜೆ ಅಂತ್ಯಗೊಳ್ಳಲಿದೆ. ಈ ಅವಧಿಯ ನಂತರ ವಿವಿಧೆಡೆಗಳಿಂದ ಆಗಮಿಸಿರುವ ರಾಜಕೀಯ ಕಾರ್ಯಕರ್ತರು, ಕ್ಷೇತ್ರದ ಮತದಾರರಲ್ಲದವರು ಕುಂದಗೋಳ ಕ್ಷೇತ್ರದಲ್ಲಿ ಇರುವಂತಿಲ್ಲ.

ಕೂಡಲೇ ಅಂತಹವರು ಮತ ಕ್ಷೇತ್ರದಿಂದ ನಿರ್ಗಮಿಸಬೇಕು. ಬೇರೆ-ಬೇರೆ ಕ್ಷೇತ್ರದಿಂದ ಚುನಾವಣಾ ಪ್ರಚಾರಕ್ಕಾಗಿ ಆಗಮಿಸಿದ ರಾಜಕೀಯ ವ್ಯಕ್ತಿಗಳು ಕ್ಷೇತ್ರದ ವಿವಿಧ ಲಾಡ್ಜ್, ಫಾರ್ಮ್ಹೌಸ್, ಹೋಟೆಲ್ ಮತ್ತು ಇತರ ಸ್ಥಳಗಳಲ್ಲಿ ತಂಗಿರುವ ಸಾಧ್ಯತೆಗಳಿದ್ದು, ಅಂತಹವರು ಕೂಡಲೆ ಅಲ್ಲಿಂದ ನಿರ್ಗಮಿಸಬೇಕು ಎಂದು ಸೂಚನೆ ನೀಡಲಾಗಿದೆ.
ಏಜೆಂಟರಿಗೆ ಸೂಚನೆ : ಯಾವುದೇ ಪಕ್ಷ, ಅಭ್ಯರ್ಥಿಗಳು, ಏಜೆಂಟರು ಅಥವಾ ಅಭ್ಯರ್ಥಿಗಳ ಪರವಾಗಿ ಮೇ.19ರಂದು ಮತದಾನ ದಿನದಂದು ಮತದಾರರಿಗೆ ಮತಗಟ್ಟೆಗಳಿಗೆ ಕರೆದುಕೊಂಡು ಬರಲು ಮತ್ತು ಹೋಗಲು ವಾಹನದ ವ್ಯವಸ್ಥೆಯನ್ನು ಮಾಡುವಂತಿಲ್ಲ.
ತಿಂಡಿ ಅಥವಾ ಊಟದ ವ್ಯವಸ್ಥೆ ಮಾಡಬಾರದು. ಮತಗಟ್ಟೆ ಏಜೆಂಟರುಗಳು ನಿಗದಿತ ಸಮಯದೊಳಗೆ ಮತಗಟ್ಟೆಗಳಿಗೆ ಹಾಜರಾಗಬೇಕು. ಬೆಳಗ್ಗೆ 6 ಗಂಟೆಗೆ ಮತಗಟ್ಟೆಗಳಲ್ಲಿ ಮತಗಟ್ಟೆ ಸಿಬ್ಬಂದಿಗಳು ಅಣಕು ಮತದಾನ ನಡೆಸುವರು, ಈ ಸಂದರ್ಭದಲ್ಲಿ ಸಂಬಂಧಪಟ್ಟ ಏಜೆಂಟರು ಹಾಜರಿರಬೇಕು ಎಂದು ತಿಳಿಸಲಾಗಿದೆ.
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ -
ಡಿವಿಜಿ ಒಡನಾಡಿ,ರಾಷ್ಟ್ರೋತ್ಥಾನದ ಮಾಜಿ ಅಧ್ಯಕ್ಷ ಎಸ್ಆರ್ ರಾಮಸ್ವಾಮಿ ನಿಧನ












Click it and Unblock the Notifications