ಧಾರವಾಡ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಿದ್ದರಾಮಯ್ಯಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಓಪನ್ ಚಾಲೆಂಜ್

By ಧಾರವಾಡ ಪ್ರತಿನಿಧಿ
|
Google Oneindia Kannada News

ಧಾರವಾಡ, ಅಕ್ಟೋಬರ್ 13: "ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷ ಚಾಲೆಂಜ್ ಮಾಡುವುದಾದರೆ ಮಾಡಲಿ, ನನ್ನದು ಇದು ಓಪನ್ ಚಾಲೆಂಜ್" ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭಾನುವಾರ ಸವಾಲು ಹಾಕಿದ್ದಾರೆ.

ಧಾರವಾಡದಲ್ಲಿ ಮಾತನಾಡಿದ ಅವರು, ಕಳೆದ ಯುಪಿಎ ಸರ್ಕಾರದ ಹತ್ತು ವರ್ಷದ ಅವಧಿಯಲ್ಲಿ ಕೇಂದ್ರ ಸರ್ಕಾರ ನಲವತ್ನಾಲ್ಕು ಸಾವಿರ ಕೋಟಿ ಕೇಳಿದರು. ನಾಲ್ಕು ಸಾವಿರದ ನಾನೂರು ಕೋಟಿ ಮಾತ್ರ ಕೊಟ್ಟಿದ್ದಾರೆ. ಆದರೆ ಮೋದಿ ಸರ್ಕಾರದ ಅವಧಿಯಲ್ಲಿ ಇಪ್ಪತ್ತೇಳು ಸಾವಿರ ಕೋಟಿ ಕೇಳಿದ್ದಾರೆ, ಅದರಲ್ಲಿ ಕೇಂದ್ರ ಸರ್ಕಾರ ಕೊಟ್ಟಿದ್ದು ಒಂಬತ್ತು ಸಾವಿರದ ಒಂದು ನೂರು ಕೋಟಿ. ಇನ್ನು ಈಗ ಬಂದಿರುವುದು ತಾತ್ಕಾಲಿಕ‌ ಪರಿಹಾರ ಎಂದಿದ್ದಾರೆ.

ಹರಿಹರ ಇಂದಿರಾ ಕ್ಯಾಂಟೀನ್ ಉದ್ಘಾಟನೆಯಲ್ಲಿ ಸಿದ್ದರಾಮಯ್ಯರಿಂದ ನಾಡಗೀತೆಗೆ ಅವಮಾನಹರಿಹರ ಇಂದಿರಾ ಕ್ಯಾಂಟೀನ್ ಉದ್ಘಾಟನೆಯಲ್ಲಿ ಸಿದ್ದರಾಮಯ್ಯರಿಂದ ನಾಡಗೀತೆಗೆ ಅವಮಾನ

ಈ ಹಿಂದೆ ಅವರು ಇಂಥ ಎಷ್ಟು ತಾತ್ಕಾಲಿಕ ಪರಿಹಾರ ಬಿಡುಗಡೆ ಮಾಡಿದ್ದಾರೆ ಎಂದು ಸಿದ್ದರಾಮಯ್ಯ ಅವರಿಗೆ ಪ್ರಶ್ನೆ ಮಾಡಿದ್ದಾರೆ ಜೋಶಿ. ಸಿದ್ದರಾಮಯ್ಯ ಅವರು ಹತ್ತು ಸಾರಿ ಬಜೆಟ್ ಮಂಡನೆ ಮಾಡಿದವರು. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಯಾಗಿ ಕೆಲಸ ಮಾಡಿದವರು. ಅವರಿಗೆ ಜ್ಞಾಪಕ ಶಕ್ತಿ ಇದೆ ಎಂದುಕೊಂಡಿದ್ದೇನೆ ಎಂದು ಹೇಳಿದ್ದಾರೆ.

Central Minister Prahlad Joshi Open Challenge To Former Chief Minister Siddaramaiah

ಸಿದ್ದರಾಮಯ್ಯ ಅವರಿಗೆ ಜ್ಞಾಪಕ ಶಕ್ತಿ ಇದ್ದರೆ ಕೇಂದ್ರ ಸರ್ಕಾರಕ್ಕೆ ಹಾಗೂ ರಾಜ್ಯ ಸರ್ಕಾರಕ್ಕೆ ಕೇಳಿ ಮಾಹಿತಿ ಪಡೆಯಲಿ. ಆ ನಂತರ ಮಾತನಾಡಿದರೆ ಅವರ ಹಿರಿತನಕ್ಕೆ ಶೋಭೆ ಬರಲಿದೆ ಎಂದು ಕೇಂದ್ರ ಸಚಿವ ಜೋಶಿ ಹೇಳಿದ್ದಾರೆ.

English summary
Siddaramaiah openly challenged by central minister Prahlad Joshi on flood relief to Karnataka by BJP government.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X