ನಕ್ಸಲರ ಶರಣಾಗತಿ ಬಗ್ಗೆ ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವರ ಪ್ರಶ್ನೆ
ಹುಬ್ಬಳ್ಳಿ, ಜನವರಿ 11: ನಕ್ಸಲರ ಶರಣಾಗತಿ ವಿಚಾರದ ಬಗ್ಗೆ ಸರ್ಕಾರ ಮಾಹಿತಿ ನೀಡಬೇಕು. ಇದು ಎಷ್ಟು ದಿನದಿಂದ ಪ್ರಕ್ರಿಯೆ ನಡೆಯುತ್ತಿತ್ತು? ಇದು ಬಹಳ ತರಾತುರಿಯಲ್ಲಿ ನಡೆಯಿತು ಅನ್ನೋ ಭಾವನೆ ಎಲ್ಲರಲ್ಲೂ ಇದೆ. ಬೇರೆ ಬೇರೆ ಭಾಗಗಳಲ್ಲಿ ಶರಣಾಗತಿ ಆದ ನಕ್ಸಲರು ಅವರ ಬಳಿ ಇದ್ದ ಶಸ್ತಾಸ್ತ್ರಗಳನ್ನ ಒಪ್ಪಿಸಿದ್ದಾರೆ. ಇಲ್ಲಿ ಶರಣಾಗತಿಯಾದ ನಕ್ಸಲ್ ಎಷ್ಟು ಶಸ್ತ್ರಾಸ್ತ್ರಗಳು ಒಪ್ಪಿಸಿದ್ದಾರೆ? ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ರಾಜ್ಯ ಸರ್ಕಾರಕ್ಕೆ ಪ್ರಶ್ನಿಸಿದ್ದಾರೆ.
ಹುಬ್ಬಳ್ಳಿ ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನಕ್ಸಲರ ಶರಣಾಗತಿಗೆ ನಾನು ವಿರೋಧ ಮಾಡುತ್ತಿಲ್ಲ. ನಕ್ಸಲ್ರ ಪ್ಯಾಕೇಜ್ ವ್ಯವಸ್ಥೆ ಎಲ್ಲಾ ಸರ್ಕಾರದಲ್ಲಿದೆ ಎಂದು ಹೇಳಿದರು.

ಇನ್ನು ನಕ್ಸಲ್ ಚಳುವಳಿಯನ್ನು ಬೇರು ಸಮೇತ ಹೊಸುಕಿ ಹಾಕುವ ಚಿಂತನೆಯನ್ನು ಕೇಂದ್ರ ಸರ್ಕಾರ ಮಾಡುತ್ತಿದೆ. ಹೀಗಾಗಿ ತರಾತುರಿಯಲ್ಲಿ ರಾಜ್ಯದಲ್ಲಿ ಆರು ಜನ ನಕ್ಸಲ್ ಶರಣಾಗತಿಯಾಗಿದ್ದಾರೆ. ಶರಣಾಗತಿಯಾದ ನಕ್ಸಲ್ ಎಷ್ಟು ಶಸ್ತ್ರಾಸ್ತ್ರಗಳು ಒಪ್ಪಿಸಿದ್ದಾರೆ ? ಏನು ಮಹತ್ವದ ಮಾಹಿತಿ ನೀಡಿದ್ದಾರೆ ಅದನ್ನು ರಾಜ್ಯದ ಜನತೆಗೆ ಮುಖ್ಯಮಂತ್ರಿ ತಿಳಿಸಲಿ ಎಂದರು.
ನಕ್ಸಲರಿಗೆ ವಿದೇಶಿದಿಂದ ಹಣದ ಸಹಾಯವಾಗುತ್ತದೆ. ಇದರಲ್ಲಿ ನಮ್ಮ ರಾಜ್ಯದ ಯುವಕರು ಸಿಲುಕಿದ್ದಾರೆ. ನಕ್ಸಲ್ ಪ್ಯಾಕೇಜ್ ಇತರೆ ನಕ್ಸಲ್ರಿಗೆ ಸಲುಗೆಯಾಗದಿರಲಿ. ಆರು ಜನ ನಕ್ಸಲ್ ಶರಾಣಾದ್ರೆ ರಾಜ್ಯದಲ್ಲಿ ನಕ್ಸಲ್ ಚಳುವಳಿ ಮುಗಿತು ಅಂತ ಬಿಂಬಿಸಲಾಗುತ್ತಿದೆ. ಆ್ಯಂಟಿ ನಕ್ಸಲ್ ತಂಡದ ಕಾರ್ಯಾಚರಣೆ ನಿಲ್ಲಿಸುತ್ತೇವೆ ಎನ್ನುವುದು ಎಷ್ಟರಮಟ್ಟಿಗೆ ಸರಿ? ಎಂದು ಪ್ರಶ್ನಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಡಿನ್ನರ್ ಪಾರ್ಟಿ ವಿಚಾರಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ವಿಜಯೇಂದ್ರ ಯಾವುದೇ ಡಿನ್ನರ್ ಪಾರ್ಟಿ ಅಂತಾ ಕರೆದಿಲ್ಲ. ಪಕ್ಷದ ಸಭೆಗಾಗಿ ಕರೆದಿದ್ದರು ನನಗೂ ಸಹ ಕರೆದಿದ್ದರು ನಾನೂ ಹೋಗಿದ್ದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸ್ಪಷ್ಟನೆ ನೀಡಿದರು.
-
ಮೂರು ವರ್ಷ ಮುಗಿದಿದೆ, ಸಚಿವ ಸಂಪುಟ ಬದಲಿಸಿ: ಹೈಕಮಾಂಡ್ಗೆ ಮನವಿ ಸಲ್ಲಿಸಲು ಟಿ.ಬಿ.ಜಯಚಂದ್ರ ಸಜ್ಜು -
ಕೆಲವೇ ಗಂಟೆಗಳಲ್ಲಿ ಇರಾನ್ ಬಂದರುಗಳಿಗೆ ಅಮೆರಿಕದಿಂದ ಕಡಲ ದಿಗ್ಬಂಧನ? ಯುದ್ಧದ ಭೀತಿಯಲ್ಲಿ ಕೊಲ್ಲಿ ರಾಷ್ಟ್ರಗಳು -
Siddaramaiah: ಜನರ ದಾರಿತಪ್ಪಿಸುವ ಬಿಜೆಪಿಯನ್ನು ನಂಬಬೇಡಿ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾರಣವೇನು -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ












Click it and Unblock the Notifications