Chandrayaan-3: ಧಾರವಾಡ ಕಲಾವಿದನ ಕೈಯಲ್ಲಿ ಅರಳಿದ ಮಿನಿ ಗಗನನೌಕೆ
ಧಾರವಾಡ, ಜುಲೈ 14: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಮಹತ್ವಾಕಾಂಕ್ಷೆಯ ಚಂದ್ರಯಾನ-3 ಗಗನನೌಕೆ ಉಡಾವಣೆಗೆ ಕೌಂಟ್ ಡೌನ್ ಶುರುವಾಗಿದೆ. ಇಂದು ಮಧ್ಯಾಹ್ನ 2:35ಕ್ಕೆ ಗಗನನೌಕೆಯ ಪ್ರಯಾಣ ಚಂದ್ರನೆಡೆಗೆ ಆರಂಭವಾಗಲಿದೆ. ಚಂದ್ರಯಾನ-3 ಸಿದ್ಧತೆಗಳು ಸಂಪೂರ್ಣಗೊಂಡಿದ್ದು, ಸಂಪೂರ್ಣ ಭಾರತವೇ ಕುತೂಹಲದಿಂದ ಕಾಯುತ್ತಿದೆ.
ಇಸ್ರೋ ಸಂಸ್ಥೆಯ ಮಹತ್ವಾಕಾಂಕ್ಷೆಯ ಚಂದ್ರಯಾನ-3ಕ್ಕೆ ಧಾರವಾಡದ ಕಲಾವಿದ ಮಂಜುನಾಥ ಹಿರೇಮಠ ಅವರು ವಿಶೇಷವಾಗಿ ಶುಭ ಕೋರಿದ್ದಾರೆ. ಎಲ್ಎಂವಿ ಪೈಪ್ಗಳ ಸಹಾಯದಿಂದ ಮಿನಿ ಉಪಗ್ರಹ ಸಿದ್ಧಪಡಿಸಿರುವ ಕಲಾವಿದ ಹಿರೇಮಠ, ಈ ಬಾರಿ ಯಾವುದೇ ವಿಘ್ನಗಳು ಉಂಟಾಗದಂತೆ ಯಶಸ್ವಿಯಾಗಿ ಉಪಗ್ರಹ ಉಡಾವಣೆಯಾಗಲಿ ಎಂದು ವಿಘ್ನೇಶ್ವರನಿಗೆ ಪೂಜೆ ಸಹ ಸಲ್ಲಿಸಿದ್ದಾರೆ.

ಚಂದ್ರಯಾನ-2 ಸಂದರ್ಭದಲ್ಲಿ ರೋವರ್ ಲ್ಯಾಂಡಿಂಗ್ ಸಮಸ್ಯೆಯುಂಟಾಗಿತ್ತು. ಹೀಗಾಗಿ ಈ ಬಾರಿ ಯಾವುದೇ ತೊಂದರೆಯಾಗದೆ ಚಂದ್ರಯಾನ-3 ಯಶಸ್ವಿಯಾಗಲಿ ಎಂದು ಕಲಾವಿದ ಮಂಜುನಾಥ ಹಿರೇಮಠ ಅವರು ವಿಘ್ನೇಶ್ವರನಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಮಂಜುನಾಥ ಹಿರೇಮಠ ಅವರ ಕೈಚಳಕದಲ್ಲಿ ಚಂದ್ರಯಾನ-3 ಗಗನನೌಕೆ ಅದ್ಭುತವಾಗಿ ಮೂಡಿ ಬಂದಿದ್ದು, ನೋಡಿದವರು ವಾವ್ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಇನ್ನು ಈ ಹಿಂದೆ ಕೂಡ ಹುಬ್ಬಳ್ಳಿ-ಧಾರವಾಡ ಅವಳಿ ನಗರದ ಜನತೆಯ ಬಹು ನಿರೀಕ್ಷಿತ ವಂದೇ ಭಾರತ್ ರೈಲು ಸಂಚಾರ ಆರಂಭಿಸಿದಾಗ ಮಂಜುನಾಥ ಹಿರೇಮಠ ವಿಶೇಷ ಕಲಾಕೃತಿಯೊಂದನ್ನು ರಚಿಸಿದ್ದರು. ಧಾರವಾಡದ ಪರಿಸರ ಸ್ನೇಹಿ ಕಲಾವಿದ ಮಂಜುನಾಥ ಹಿರೇಮಠ ಅವರು ನಿರುಪಯುಕ್ತವಾದ ಥರ್ಮಕೋಲ್ ಹಾಗೂ ಫ್ಲೈವುಡ್ ಪೀಸ್ಗಳಿಂದ 3X2 ಅಳತೆಯ ವಂದೇ ಭಾರತ್ ರೈಲು ನಿರ್ಮಿಸಿದ್ದರೆ. ಅಲ್ಲದೇ ಅದಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಹಸಿರು ನಿಶಾನೆ ತೋರುವ ಕಲಾಕೃತಿಯನ್ನೂ ಕೂಡ ರಚಿಸಿ, ಧಾರವಾಡ ಬೆಂಗಳೂರು ಜಂಕ್ಷನ್ ಬೋರ್ಡ್ ಹಾಕಿ ಎಲ್ಲರ ಗಮನ ಸೆಳೆದಿದ್ದರು.
-
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು












Click it and Unblock the Notifications